ಭಾರತ-ಪಾಕ್ ಸಂಘರ್ಷ | ಬ್ಲ್ಯಾಕೌಟ್‌ ಮತ್ತು ಸೈರನ್‌ಗಳು: ಪಂಜಾಬ್ ಗಡಿ ಜಿಲ್ಲೆಗಳಲ್ಲಿ ಆತಂಕದಲ್ಲೇ ರಾತ್ರಿ ಕಳೆದ ಜನ

Date:

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಪಂಜಾಬ್‌ನ ಅಮೃತಸರ, ಪಠಾಣ್‌ಕೋಟ್ ಮತ್ತು ಫಿರೋಜ್‌ಪುರ ಸೇರಿದಂತೆ ಗಡಿ ಜಿಲ್ಲೆಗಳಾದ್ಯಂತ ಸಂಪೂರ್ಣ ಬ್ಲ್ಯಾಕೌಟ್‌ ಘೋಷಿಸಲಾಗಿದೆ. ಪರಿಣಾಮವಾಗಿ, ಅಲ್ಲಿನ ನಿವಾಸಿಗಳು ಆತಂಕ, ಭಯದ ನಡುವೆಯೇ ರಾತ್ರಿ ಕಳೆದಿದ್ದಾರೆ. ಗುರುವಾರದ ರಾತ್ರಿ ಉದ್ವಿಗ್ನ, ಕರಾಳ ರಾತ್ರಿಯಾಗಿ ಪರಿಣಮಿಸಿದೆ.

ಪಂಜಾಬ್ ಮತ್ತು ಹರಿಯಾಣದ ರಾಜಧಾನಿಯಾಗಿರುವ ಚಂಡೀಗಢದಲ್ಲಿ ಮಧ್ಯರಾತ್ರಿಯವರೆಗೆ ಸುಮಾರು ಎರಡು ಗಂಟೆಗಳ ಕಾಲ ವಿದ್ಯುತ್ ಸರಬರಾಜು ಕಡಿತಗೊಳಿಸಲಾಗಿತ್ತು.

ರಕ್ಷಣಾ ಸಚಿವಾಲಯದ ಪ್ರಕಾರ, ಜಮ್ಮು, ಪಠಾಣ್‌ಕೋಟ್ ಮತ್ತು ಉಧಂಪುರ ಸೇರಿದಂತೆ ಅನೇಕ ಭಾರತೀಯ ನಗರಗಳಲ್ಲಿನ ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ದಾಳಿ ಪ್ರಾರಂಭಿಸಿತ್ತು. ಪಾಕ್ ದಾಳಿಯನ್ನು ಭಾರತೀಯ ಸಶಸ್ತ್ರ ಪಡೆಗಳು ತ್ವರಿತವಾಗಿ ತಡೆದಿದ್ದು, ದಾಳಿಯನ್ನು ವಿಫಲಗೊಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀನಗರ, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಬಟಿಂಡಾ, ಚಂಡೀಗಢ, ನಲ್, ಫಲೋಡಿ, ಉತ್ತರಲೈ ಹಾಗೂ ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದಾದ್ಯಂತ 15 ನಗರಗಳನ್ನು ಪಾಕಿಸ್ತಾನ ಗುರಿಯಾಗಿಸಿಕೊಂಡಿತ್ತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಪಠಾಣ್‌ಕೋಟ್‌ನಲ್ಲಿ, ಗುರುವಾರ ರಾತ್ರಿ ಸ್ಫೋಟದಂತಹ ಶಬ್ದಗಳನ್ನು ಕೇಳಿದ್ದಾಗಿ ಕೆಲವು ನಿವಾಸಿಗಳು ಹೇಳಿಕೊಂಡಿದ್ದಾರೆ. ಆದರೆ, ಸೇನೆ ಅಥವಾ ಸರ್ಕಾರದಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ. ಪಠಾಣ್‌ಕೋಟ್‌ನಲ್ಲಿ ಗುರುವಾರ ರಾತ್ರಿ 8:30ರ ಸುಮಾರಿಗೆ ವಾಯುದಾಳಿ ಸೈರನ್‌ಗಳನ್ನು ಹೊರಡಿಸುವ ಮೂಲಕ, ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗಿತ್ತು. ಶುಕ್ರವಾರ ಬೆಳಿಗ್ಗೆಯ ಹೊತ್ತಿಗೆ ಪರಿಸ್ಥಿತಿ ಶಾಂತವಾಗಿದೆ ಎಂದು ವರದಿಯಾಗಿದೆ.

ಅಮೃತಸರ ಮತ್ತು ಫಿರೋಜ್‌ಪುರದಂತಹ ಇತರ ಗಡಿ ಜಿಲ್ಲೆಗಳಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದಿವೆ ಎಂದು ಅಲ್ಲಿನ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಸಶಸ್ತ್ರ ಪಡೆಗಳ ತ್ವರಿತ ಮತ್ತು ಪರಿಣಾಮಕಾರಿ ಪ್ರತಿಕ್ರಿಯೆ ನಡೆಸಿದ್ದರಿಂದ, ಆತಂಕವು ಕಡಿಮೆಯಾಗಿದೆ ಎಂದು ಹೇಳಲಾಗಿದೆ.

ಚಂಡೀಗಢದಲ್ಲಿ, ವಿದ್ಯುತ್ ಕಡಿತ ಮತ್ತು ಉದ್ವಿಗ್ನ ವಾತಾವರಣದ ಹೊರತಾಗಿಯೂ, ಶುಕ್ರವಾರ ದೈನಂದಿನ ಜೀವನವು ಸಾಮಾನ್ಯ ಸ್ಥಿತಿಗೆ ಮರಳಿದೆ. ಸ್ಥಳೀಯ ನಿವಾಸಿ ಬಲದೇವ್ ಚಂದ್, “ನಿನ್ನೆ ರಾತ್ರಿ ಕೆಲವು ಆತಂಕಕಾರಿ ಕ್ಷಣಗಳನ್ನು ಅನುಭವಿಸಿದೆವು. ಆದರೆ ನಮ್ಮ ಸೇನಾ ಪಡೆಗಳು ಪರಿಸ್ಥಿತಿಯನ್ನು ನಿಭಾಯಿಸಿದ ರೀತಿ ನಮಗೆ ಸುರಕ್ಷತೆಯ ಭರವಸೆಯನ್ನು ಮೂಡಿಸಿದೆ” ಎಂದು ಹೇಳಿದ್ದಾರೆ.

ಪ್ರಮುಖ ನಗರಗಳಲ್ಲಿ ವಿದ್ಯುತ್ ಕಡಿತದ ಜೊತೆಗೆ, ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಹರಿಯಾಣದ ರೂಪನಗರ, ಫಜಿಲ್ಕಾ, ಕಪುರ್ತಲಾ, ಲುಧಿಯಾನ, ಸಂಗ್ರೂರ್, ಬಟಿಂಡಾ, ಪಟಿಯಾಲ ಹಾಗೂ ಪಂಚಕುಲಗಳಲ್ಲಿಯೂ ವಿದ್ಯುತ್ ಕಡಿತಗೊಳಿಸಲಾಗಿತ್ತು.

ಉದ್ವಿಗ್ನ ಪರಿಸ್ಥಿತಿಯ ಹಿನ್ನಲೆ, ಪಂಜಾಬ್‌ನಲ್ಲಿ ಮುಂದಿನ ಮೂರು ದಿನಗಳವರೆಗೆ ಎಲ್ಲ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಪಂಜಾಬ್ ಸರ್ಕಾರ ಆದೇಶಿಸಿದೆ. ಚಂಡೀಗಢದಲ್ಲಿಯೂ ಶನಿವಾರದವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...