ಬ್ರೆಜಿಲ್‌ | ಡ್ರಗ್‌ ಮಾಫಿಯಾ ಗ್ಯಾಂಗ್‌ ವಿರುದ್ಧ ಪೊಲೀಸ್ ಕಾರ್ಯಾಚರಣೆ; 64 ಮಂದಿ ಸಾವು

Date:

ಬ್ರೆಜಿಲ್‌ನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಿರೋಧಿ ಕಾರ್ಯಾಚರಣೆಯೊಂದರಲ್ಲಿ ರಿಯೊ ಡಿ ಜನೈರೊದ ಉತ್ತರ ಭಾಗದ ಅಲೆಮಾವೊ ಮತ್ತು ಪೆನ್ಹಾ ಪ್ರದೇಶಗಳಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 64 ಜನರು ಮೃತಪಟ್ಟಿದ್ದಾರೆ, ಇದರಲ್ಲಿ ನಾಲ್ಕು ಪೊಲೀಸ್ ಸಿಬ್ಬಂದಿಯೂ ಸೇರಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ದೃಢಪಡಿಸಿದ್ದಾರೆ.

ದಿನವಿಡಿ ನಡೆದ ಕಾರ್ಯಾಚರಣೆಯಲ್ಲಿ 2,500ಕ್ಕೂ ಹೆಚ್ಚು ಪೊಲೀಸ್ ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ‘ರೆಡ್ ಕಮಾಂಡ್’ ಗ್ಯಾಂಗ್‌ನ ಸದಸ್ಯರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದರು, ರಸ್ತೆಗಳಲ್ಲಿ ಬೆಂಕಿಯ ಬ್ಯಾರಿಕೇಡ್‌ಗಳನ್ನು ಒಡ್ಡಿದರು ಮತ್ತು ಡ್ರೋನ್‌ಗಳಿಂದ ಬಾಂಬ್‌ಗಳನ್ನು ಎಸೆದರು. ಇದಕ್ಕೆ ಪ್ರತಿಯಾಗಿ, ಅಧಿಕಾರಿಗಳು ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿ ನಿಯಂತ್ರಣ ಸಾಧಿಸಿದರು. ಕಾರ್ಯಾಚರಣೆಯಲ್ಲಿ 80ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು 200 ಕಿಲೋಗ್ರಾಂಗಿಂತಲೂ ಹೆಚ್ಚು ಡ್ರಗ್ಸ್, ಹಲವಾರು ರೈಫಲ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸುಮಾರು 3 ಲಕ್ಷ ಜನರಿರುವ ಈ ಪ್ರದೇಶದ ನಿವಾಸಿಗಳಲ್ಲಿ ಗಾಬರಿ ಮನೆಮಾಡಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಗುಂಡಿನ ಸದ್ದು ಮತ್ತು ಸ್ಫೋಟಗಳಿಂದ ಈ ಪ್ರದೇಶ ಯುದ್ಧಭೂಮಿಯಂತೆ ಕಾಣುತ್ತಿತ್ತು. ಹಲವಾರು ನಾಗರಿಕರು ಸಹ ಘಟನೆಯಲ್ಲಿ ಗಾಯಗೊಂಡಿದ್ದಾರೆ, ಮತ್ತು ಭದ್ರತಾ ಕಾರ್ಯಾಚರಣೆಗಳಿಂದಾಗಿ ಹಲವು ರಸ್ತೆಗಳು ಇನ್ನೂ ಮುಚ್ಚಲ್ಪಟ್ಟಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? 12 ರಾಜ್ಯಗಳಲ್ಲಿ 2ನೇ ಹಂತದ ಮತದಾರರ ವಿಶೇಷ ತೀವ್ರ ಪರಿಷ್ಕರಣೆ: ಚುನಾವಣಾ ಆಯೋಗ ಘೋಷಣೆ

ಒಂದು ವರ್ಷದ ತನಿಖೆಯ ನಂತರ, ಸಿವಿಲ್ ಮತ್ತು ಮಿಲಿಟರಿ ಪೊಲೀಸರ ಜಂಟಿ ಕಾರ್ಯಾಚರಣೆಯು ‘ರೆಡ್ ಕಮಾಂಡ್’ ಗ್ಯಾಂಗ್‌ನ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಾಣಿಕೆ ಜಾಲವನ್ನು ಭೇದಿಸುವ ಗುರಿಯನ್ನು ಹೊಂದಿತ್ತು. ಈ ಗ್ಯಾಂಗ್ ನಾರ್ಕೋಟಿಕ್ಸ್ ಕಳ್ಳಸಾಗಾಣಿಕೆ, ಶಸ್ತ್ರಾಸ್ತ್ರ ಪೂರೈಕೆ ಮತ್ತು ಕರಾವಳಿ ಮಾರ್ಗಗಳ ಮೂಲಕ ಅಕ್ರಮ ವ್ಯಾಪಾರವನ್ನು ನಿಯಂತ್ರಿಸುತ್ತಿದೆ ಎಂದು ಸರ್ಕಾರ ಹೇಳಿದೆ.

ಈ ಕಾರ್ಯಾಚರಣೆಯ ದೇಶಕ್ಕೆ ಮಹತ್ವದ್ದಾಗಿದೆ, ಏಕೆಂದರೆ ರಾಜಧಾನಿ ರಿಯೊ ಡಿ ಜನೈರೊದಲ್ಲಿ ಮುಂದಿನ ವಾರ C40 ಮೇಯರ್‌ಗಳ ಶೃಂಗಸಭೆ ಮತ್ತು ಪ್ರಿನ್ಸ್ ವಿಲಿಯಂ ಅವರ ಸಮಾರಂಭವನ್ನು ಆಯೋಜಿಸಲಿದೆ. ಇದಲ್ಲದೇ, ನವೆಂಬರ್‌ನಲ್ಲಿ ಬ್ರೆಜಿಲ್‌ನ ಅಮೆಜಾನ್‌ನ ಬೆಲೆಮ್‌ನಲ್ಲಿ ವಿಶ್ವಸಂಸ್ಥೆಯ COP30 ಹವಾಮಾನ ಶೃಂಗಸಭೆ ನಡೆಯಲಿದೆ. ಈ ಕಾರ್ಯಕ್ರಮಗಳಿಗೆ ಸುರಕ್ಷತೆಯನ್ನು ಖಾತರಿಪಡಿಸುವುದು ಮತ್ತು ರಿಯೊದಂತಹ ಹಿಂಸಾತ್ಮಕ ನಗರದಲ್ಲಿ ಸಂಘಟಿತ ಅಪರಾಧವನ್ನು ತಡೆಗಟ್ಟಲು ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...