ದುಬೈ | ಬ್ಯಾರೀಸ್ ಚೇಂಬರ್ ಯುಎಇ ವತಿಯಿಂದ ಫೆಬ್ರವರಿ 9ರಂದು ಅದ್ದೂರಿಯ ಬ್ಯಾರಿ ಮೇಳ

Date:

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಸ್ ಯುಎಇ ನೇತೃತ್ವದಲ್ಲಿ ಯುಎಇಯಲ್ಲಿರುವ ಎಲ್ಲಾ ಬ್ಯಾರಿ ಸಂಘಟನೆಗಳ ಸಹಯೋಗದಲ್ಲಿ 2025ರ ಫೆಬ್ರವರಿ 9ರಂದು ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ಅದ್ದೂರಿಯ ಬ್ಯಾರಿ ಮೇಳ ನಡೆಯಲಿದೆ.

ಇದರ ಅಂಗವಾಗಿ 8 ಡಿಸೆಂಬರ್ ಅಜ್ಮಾನ್ ತುಂಬೆ ಮೆಡಿಸಿಟಿ ಸಭಾಂಗಣದಲ್ಲಿ ಬ್ಯಾರಿ ಮೇಳ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು.

1002645127

ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ತುಂಬೆ ಗ್ರೂಪ್ ಸ್ಥಾಪಕರು, ಅನಿವಾಸಿ ಉದ್ಯಮಿ ತುಂಬೆ ಮೊಹಿದ್ದೀನ್ ಬ್ಯಾರಿ ಮೇಳ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮದ ಸಿದ್ಧತೆಗೆ ಅಧಿಕೃತ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ದುಬೈನಲ್ಲಿದ್ದ ಭಟ್ಕಳದ ಹಿರಿಯ ಮುಸ್ಲಿಂ ನೇತಾರ ಡಾ.ಸಯ್ಯದ್ ಖಲೀಲ್‌ ನಿಧನ

ಬ್ಯಾರೀಸ್ ಚೇಂಬರ್ ಯುಎಇ ಅಧ್ಯಕ್ಷ ಹಿದಾಯತ್ ಅಡ್ಡೂರ್ ಬ್ಯಾರಿ ಸಮುದಾಯದ ಉದ್ಯಮ ಕ್ಷೇತ್ರದ ಇತಿಹಾಸದ ಬಗ್ಗೆ, ಬ್ಯಾರೀಸ್ ಚೇಂಬರ್‌ನ ಗುರಿ ಹಾಗೂ ಬ್ಯಾರಿ ಮೇಳದ ಉದ್ದೇಶದ ಬಗ್ಗೆ ಮಾತನಾಡಿದರು.

ದುಬೈ1

ಬ್ಯಾರಿ ಮೇಳದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ, ಭಾಗವಹಿಸಿಸುವ ಅತಿಥಿಗಳ ಬಗ್ಗೆ ಉಪಾಧ್ಯಕ್ಷ ಬಶೀರ್ ಕಿನ್ನಿಂಗಾರ್, ಹಂಝ ಅಬ್ದುಲ್ ಖಾದರ್, ಮಹಮ್ಮದ್ ಅಲಿ ಉಚ್ಚಿಲ್, ಇಮ್ರಾನ್ ಎರ್ಮಾಳ್ ವಿವರಿಸಿದರು. ಉದ್ಯೋಗ ಮೇಳ, ದೊರಕಲಿರುವ ಹಲವಾರು ಉದ್ಯೋಗಾವಕಾಶಗಳ ಬಗ್ಗೆ ಮಹಮ್ಮದ್ ಮುಸ್ತಾಕ್ ಮಾಹಿತಿ ನೀಡಿದರು.

ಬ್ಯಾರಿ ಮೇಳದಲ್ಲಿ ಬ್ಯಾರಿ ಸಾಂಸ್ಕೃತಿಕ ಕಾರ್ಯಕ್ರಮ, ಯಶಸ್ವಿ ಉದ್ಯಮಿ ಗಳನ್ನು, ಸಮುದಾಯದ ಸಾಧಕರನ್ನು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು, ಕರಾವಳಿಯ ಪ್ರಸಿದ್ಧ ಆಹಾರ, ತಿಂಡಿಗಳ ಮಳಿಗೆಗಳು, ವಿವಿಧ ಉದ್ಯಮ ಕ್ಷೇತ್ರದ 60ಕ್ಕೂ ಹೆಚ್ಚಿನ ಮಳಿಗೆಗಳು ಇರಲಿವೆ.

ದುಬೈ2 1

ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಯುಎಇಯ ಪ್ರಮುಖ ಬ್ಯಾರಿ ಸಂಘಟನೆಗಳಾದ ಬಿ.ಸಿ.ಎಫ್, ಬಿ.ಡಬ್ಲ್ಯೂ.ಎಫ್, ಕೆ.ಸಿ.ಎಫ್, ಕೆ.ಐ.ಸಿ, ದಾರುಲ್ ಇರ್ಷಾದ್, ಡಿ.ಕೆ.ಎಸ್.ಸಿ, ಕೆ.ಎಂ.ಎ.ಎಸ್, ಹಿದಾಯ ಫೌಂಡೇಶನ್, ಕೆ.ಡಿ.ಸಿ, ಅಲ್ ಖಮರ್, ಎಸ್.ಯು.ಎ.ಸಿ, ಪ್ರವಾಸಿ ಕೂಟ ವಿಟ್ಲ, ಟಿ.ಓ.ಡಿ, ಕೆ.ಎ.ಎಫ್, ಕೆ.ಎಂ.ಎ.ಜೆ, ಎಂ.ಎಫ್.ಡಿ, ಎಸ್.ಕೆ.ಎಸ್.ಎಸ್.ಎಫ್ ಯುಎಇ, ದಾರುನ್ನೂರು, ದಾರುಸ್ಸಲಾಂ, ಶಂಶುಲ್ ಉಲಾಮ ಸೆಂಟರ್, ದಾರುಲ್ ಹಸನಿಯ್ಯ ಎಜುಕೇಷನ್ ಸೆಂಟರ್, ಅಲ್ ಇಸ್ಲಾಮೀಯ ವೆಲ್ಫೇರ್, ಮೂಳೂರು ವೆಲ್ಫೇರ್, ಅಲ್ ಹುದಾ, ಅಲ್ ಇಬಾದ್ ಇಂಡಿಯನ್ ಸ್ಕೂಲ್, ನೂರ್ ಫ್ರೆಂಡ್ಸ್, ಸಾದಿಯ ಬೆಂಗಳೂರು, ಕೊಡಗು ವೆಲ್ಫೇರ್, ಮಸ್ದರ್ ಕೊಪ್ಪಳ, ಅಲ್ ಮದೀನಾ ಮಂಜನಾಡಿ, ಮುಹಿನ್ನುಸುನ್ನ ದಾವಣಗೆರೆ, ಮರ್ಕಝ್ ಉಲ್ ಹುದಾ ಕುಂಬ್ರ, ದಾರುಲ್ ಹಿದಾ ಬೆಳ್ಳಾರೆ ಹಾಗೂ ಹಲವು ಮುಖಂಡರು, ಉದ್ಯಮಿಗಳು ಭಾಗವಹಿಸಿದರು.

ದುಬೈ3

ಬ್ಯಾರಿ ಮೇಳ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾದ ಅಶ್ರಫ್ ಷಾ ಮಂತೂರ್ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಬ್ಯಾರೀಸ್ ಚೇಂಬರ್ ಯುಎಇ ಪ್ರಧಾನ ಕಾರ್ಯದರ್ಶಿ ಅನ್ವರ್ ಹುಸೇನ್ ಕಾರ್ಯಕ್ರಮ ನಿರೂಪಿಸಿದರು.

ದುಬೈ5
ದುಬೈ4
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...