ಕಾರ್ಮಿಕ ಕಾನೂನು ಉಲ್ಲಂಘನೆ ಪ್ರಕರಣ; ನೊಬೆಲ್ ಪುರಸ್ಕೃತ ಮೊಹಮ್ಮದ್ ಯೂನಸ್‌ಗೆ ಜೈಲು

Date:

ಬಾಂಗ್ಲಾದೇಶದ ಕಾರ್ಮಿಕ ಕಾನೂನು ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಮೊಹಮ್ಮದ್ ಯೂನಸ್‌ ಅವರನ್ನು ತಪ್ಪಿತಸ್ಥರೆಂದು ಅಲ್ಲಿನ ನ್ಯಾಯಾಲಯ ಆದೇಶಿಸಿದೆ. ಆದರೆ ಇದು ರಾಜಕೀಯ ಪ್ರೇರಿತ ಎಂದು ಅವರ ಬೆಂಬಲಿಗರು ಆರೋಪಿಸಿದ್ದಾರೆ.

ಪ್ರೊ. ಯೂನಸ್ ಅವರೊಂದಿಗೆ ಗ್ರಾಮೀಣ್ ಟೆಲಿಕಾಮ್‌ನ ಮೂವರು ಸಹೋದ್ಯೋಗಿಗಳನ್ನೂ ಅಪರಾಧಿಗಳೆಂದು ನ್ಯಾಯಾಲಯ ಹೇಳಿದ್ದು, ನಾಲ್ವರಿಗೂ ಆರು ತಿಂಗಳ ಸಾದಾ ಜೈಲು ಶಿಕ್ಷೆಯನ್ನು ವಿಧಿಸಿದೆ.

ಮೈಕ್ರೊ ಫೈನಾನ್ಸ್‌ ಪ್ರವರ್ತಕ 83 ವರ್ಷದ ಮೊಹಮ್ಮದ್ ಯೂನಸ್ ಸ್ಥಾಪಿಸಿದ ಬಾಂಗ್ಲಾದೇಶ ಕಂಪನಿಯ ಸಿಬ್ಬಂದಿಗೆ ಹಣ ಪಾವತಿಸದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ‘ಬಡವರ ರಕ್ತ ಹೀರುವ ವ್ಯಕ್ತಿ’ ಎಂದು ಆರೋಪಿಸುತ್ತಿದ್ದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗಿನ ದೀರ್ಘ ಕಾಲದ ವೈಷಮ್ಯವನ್ನು ಯೂನಸ್‌ ಅವರು ಹೊಂದಿದ್ದರು. ಹೀಗಾಗಿಯೇ 2006ರ ನೊಬೆಲ್ ಪ್ರಶಸ್ತಿ ವಿಜೇತ ಯೂನಸ್ ವಿರುದ್ಧ ಹಸೀನಾ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದರೆಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯೂನಸ್ ವಿರುದ್ಧದ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅವರಿಗೆ ಸದ್ಯ 6 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಲಾಗಿದೆ. ಆದರೆ ನ್ಯಾಯಾಲಯ ಇನ್ನೂ ಹೆಚ್ಚಿನ ಶಿಕ್ಷೆಯನ್ನು ವಿಧಿಸುವ ಭರವಸೆ ಇದೆ. ಯೂನಸ್ ವಿರುದ್ಧ ಕಾರ್ಮಿಕ ಕಾನೂನು ಉಲ್ಲಂಘನೆಯ 100ಕ್ಕೂ ಹೆಚ್ಚು ಪ್ರಕರಣಗಳಿವೆ” ಎಂದು ಕಾರ್ಮಿಕರ ಪರ ವಕೀಲ ಖುರ್ಷಿದ್ ಆಲಂ ಖಾನ್ ತಿಳಿಸಿದ್ದಾರೆ.

“ತಾನು ಈವರೆಗೂ 50ಕ್ಕೂ ಹೆಚ್ಚು ಕಂಪನಿಗಳನ್ನು ತೆರೆದಿದ್ದು, ಯಾವುದರಿಂದಲೂ ಲಾಭ ಪಡೆಯುತ್ತಿಲ್ಲ. ನಾನು ಸ್ಥಾಪಿಸಿರುವ ಯಾವುದೇ ಸಂಸ್ಥೆಗಳು ಲಾಭಕ್ಕಾಗಿ ಅಲ್ಲ” ಎಂದು ಯೂನಸ್ ಅವರು ಹಿಂದಿನ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹೇಳಿದ್ದರು.

“ಈ ತೀರ್ಪು ಆಧಾರ ರಹಿತವಾಗಿದ್ದು, ಸುಳ್ಳು ಮತ್ತು ಕೆಟ್ಟ ಉದ್ದೇಶ ಹೊಂದಿರುವಂತದ್ದು” ಎಂದು ವಕೀಲ ಖಾಜಾ ತನ್ವೀರ್ ಹೇಳಿದರು.

ಯೂನಸ್ ಅವರಿಗೆ ನಿರಂತರವಾಗಿ ನ್ಯಾಯಾಂಗ ಕಿರುಕುಳ ನೀಡುತ್ತಿರುವುದಾಗಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ವಿಶ್ವ ಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಬಾನ್‌ ಕಿ ಮೂನ್ ಅವರನ್ನೂ ಒಳಗೊಂಡಂತೆ 160 ಗಣ್ಯರು ಬಹಿರಂಗ ಪತ್ರ ಬರೆದಿದ್ದರು. ನೊಬೆಲ್ ಪ್ರಶಸ್ತಿ ಪಡೆದ ನೂರಕ್ಕೂ ಹೆಚ್ಚು ಜನರು ಯೂನಸ್ ಅವರನ್ನು ಪ್ರಕರಣದಿಂದ ಮುಕ್ತಗೊಳಿಸಬೇಕೆಂದು ಒತ್ತಾಯಿಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಮಮಂದಿರ ಉದ್ಘಾಟನೆಯ ದಿನ ಜೈ ಶ್ರೀರಾಮ್ ಪಠಿಸಲು ಮುಸ್ಲಿಮರಿಗೆ…

ಯೂನಸ್ ಅವರಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಶೇಖ್ ಹಸೀನಾ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾರ್ಮಿಕ ಕಾನೂನನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿ ಪಡೆದ ಮೇರು ವ್ಯಕ್ತಿಯ ವಿರುದ್ಧ ಅಸ್ತ್ರವನ್ನಾಗಿ ಬಳಸಿ, ಸೇಡು ತೀರಿಸಿಕೊಳ್ಳಲಾಗುತ್ತಿರುವುದಾಗಿ ಆರೋಪ ವ್ಯಕ್ತವಾಗಿರುವುದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...