ಕದನ ವಿರಾಮದ ಬಳಿಕ ರಕ್ಷಣಾ ತಂಡಗಳಿಂದ ಶೋಧ; ಗಾಜಾದಲ್ಲಿ ಸಾವಿನ ಸಂಖ್ಯೆ ಏರಿಕೆ

Date:

ಕದನ ವಿರಾಮ ಜಾರಿಗೆ ಬಂದ ಬಳಿಕ ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಶೋಧ ಕಾರ್ಯಾಚರಣೆಯಲ್ಲಿ ಹಲವಾರು ಮೃತದೇಹಗಳು ಪತ್ತೆಯಾಗಿದೆ. ಇದರಿಂದಾಗಿ 2023ರ ಅಕ್ಟೋಬರ್‌ 7ರ ಬಳಿಕ ಇಸ್ರೇಲ್ ನಡೆಸಿದ ಭಾರೀ ಬಾಂಬ್‌ ದಾಳಿಗೆ ಬಲಿಯಾದವರ ಸಂಖ್ಯೆಯು ಏರಿಕೆಯಾಗಿದೆ. ರಕ್ಷಣಾ ತಂಡವು ಜನರು ನೆಲೆಸಿದ್ದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಪ್ಯಾಲೇಸ್ತಿಯನ್ ಆರೋಗ್ಯ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, 15 ತಿಂಗಳ ಯುದ್ಧದಲ್ಲಿ ಗಾಜಾದಲ್ಲಿ ಸಾವನ್ನಪ್ಪಿದವರ ಸಂಖ್ಯೆಯು 47,107ಕ್ಕೆ ಏರಿಕೆಯಾಗಿದೆ. ಇನ್ನು ಹೆಚ್ಚುವರಿಯಾಗಿ 111,147 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಕೂಡಾ ಶೋಧ ಮುಂದುವರೆದಿದ್ದು ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ಗಾಝಾ ಕದನ ವಿರಾಮ ವಿರೋಧಿಸಿ ಇಸ್ರೇಲಿನ ಮೂವರು ಮಂತ್ರಿಗಳ ರಾಜೀನಾಮೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕದನ ವಿರಾಮದ ನಂತರ, ಅವಶೇಷಗಳ ಅಡಿಯಲ್ಲಿ 183 ಶವಗಳು ಕಂಡುಬಂದಿದ್ದು, ಒಟ್ಟಾಗಿ ಸಾವಿನ ಸಂಖ್ಯೆಗೆ 248ಕ್ಕೂ ಹೆಚ್ಚು ಸೇರ್ಪಡೆಯಾಗಿದೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ಸುಮಾರು 54 ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಚಿವಾಲಯ ಬುಧವಾರ ಹೇಳಿದೆ. ಈ ಪೈಕಿ 53 ಶವಗಳನ್ನು ನಾಶವಾದ ಕಟ್ಟಡದ ಅವಶೇಷಗಳಿಂದ ಹೊರತೆಗೆಯಲಾಗಿದೆ. ಇನ್ನುಳಿದಂತೆ 19 ಮಂದಿ ಗಾಯಾಳುಗಳೂ ಕೂಡಾ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

“ನಾವು ನಾಶವಾದ ಮನೆಗಳು, ಕಟ್ಟಡಗಳು, ಇತರೆ ಸ್ಥಳಗಳಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಹುತಾತ್ಮರ ಮೃತದೇಹಗಳನ್ನು ಪತ್ತೆಹಚ್ಚುವ ಪ್ರಯಾಸಕರ ಕಾರ್ಯದಲ್ಲಿ ತೊಡಗಿದ್ದೇವೆ” ಎಂದು ಪ್ರಕಟಣೆಯು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...