ವಿಮಾನ ಪತನವಾದರೂ ಪವಾಡದ ರೀತಿಯಲ್ಲಿ ಬದುಕುಳಿದ 11 ತಿಂಗಳ ಶಿಶು, ನಾಲ್ಕು ಮಕ್ಕಳು!

Date:

ವಿಮಾನ ಪತನವಾದರೂ 11 ತಿಂಗಳ ಶಿಶು ಸೇರಿ ನಾಲ್ಕು ಮಕ್ಕಳು ಪವಾಡದ ರೀತಿಯಲ್ಲಿ ಬದುಕುಳಿದ ಅಚ್ಚರಿಯ ಘಟನೆ ಕೊಲಂಬಿಯಾದ ಅಮೆಜಾನ್‌ನ ಅಪಾಯಕಾರಿ ದಟ್ಟಾರಣ್ಯದಲ್ಲಿ ನಡೆದಿದೆ.

ಈ ಪ್ರದೇಶದಲ್ಲಿ ಎರಡು ವಾರದ ಹಿಂದೆ ಸಂಭವಿಸಿದ್ದ ವಿಮಾನ ಅಪಘಾತದಲ್ಲಿ ಪೈಲಟ್ ಹಾಗೂ ಮಕ್ಕಳ ತಾಯಿ ಸೇರಿದಂತೆ ಮೂವರು ವಯಸ್ಕರು ಮೃತಪಟ್ಟಿದ್ದರು. ಅವರ ಮೃತದೇಹಗಳು ಕಳೆದ ವಾರ ಪತ್ತೆಯಾಗಿದ್ದವು. ನಾಪತ್ತೆಯಾಗಿದ್ದ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಪತ್ತೆ ಮಾಡಲು ಸ್ನಿಫರ್ ಶ್ವಾನ ಪಡೆಯ ಜತೆಗೆ ನೂರಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಲಾಗಿತ್ತು.

ಶೋಧ ಕಾರ್ಯ ನಡೆಸಿದ ಸೇನಾ ತಂಡಗಳಿಗೆ 11 ತಿಂಗಳ ಪುಟಾಣಿ ಸೇರಿದಂತೆ ನಾಲ್ಕು ಮಕ್ಕಳು ಜೀವಂತ ಪತ್ತೆಯಾಗಿದ್ದಾರೆ. ಅಪಘಾತದ ಬಳಿಕ ಬದುಕುಳಿದ 13, 9 ಮತ್ತು 4 ವರ್ಷದ ಮಕ್ಕಳು 11 ತಿಂಗಳ ಶಿಶುವನ್ನು ಎತ್ತಿಕೊಂಡು ದಕ್ಷಿಣ ಕಾಕ್ವೆಟಾ ವಿಭಾಗದ ಕಾಡಿನಲ್ಲಿ ಅಲೆದಾಡಿದ್ದಾರೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳು ಬದುಕುಳಿದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೋ “ಇದು ದೇಶಕ್ಕೆ ಉಂಟಾದ ಖುಷಿಯ ವಿಚಾರ’ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚೆನ್ನೈನಲ್ಲಿ ಕೆಟ್ಟು ನಿಂತ ಸಾವಿರ ಕೋಟಿ ನಗದು ಸಾಗಿಸುತ್ತಿದ್ದ ಆರ್‌ಬಿಐ ವಾಹನ!

ಬದುಕುಳಿದಿರುವ ಮಕ್ಕಳನ್ನು ಎಲ್ಲಿ ರಕ್ಷಿಸಲಾಗಿದೆ ಅಥವಾ ಅವರು ಅರಣ್ಯದಲ್ಲಿ ಹೇಗೆ ಜೀವ ಉಳಿಸಿಕೊಂಡಿದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಮೇ 1ರಂದು ಅಮೇಜಾನಸ್ ಪ್ರಾಂತ್ಯದ ಅರಾರಕುವರಾದಿಂದ ಗುವಿಯಾರ್ ಪ್ರಾಂತ್ಯದ ಸಾನ್ ಜೋಸ್ ಡೆಲ್ ಗುವಿಯಾರ್ ನಗರದ ಕಡೆಗೆ ತೆರಳುತ್ತಿದ್ದ ಸೆಸ್ನಾ 206 ಲಘು ವಿಮಾನವು ತಡರಾತ್ರಿ ಕಣ್ಮರೆಯಾಗಿತ್ತು. ಕೆಲವು ದಿನಗಳ ಹಿಂದೆ ಇದೇ ಅರಣ್ಯದಲ್ಲಿ ವಿಮಾನದ ಅವಶೇಷಗಳ ಜೊತೆಗೆ ಮೂವರ ಮೃತದೇಹಗಳು ಸಿಕ್ಕಿದ್ದವು. ಮೃತರಲ್ಲಿ ಈ ನಾಲ್ಕು ಮಕ್ಕಳ ತಾಯಿ ರೊನಾಕ್ಯು ಮುಕುಟುಯಿ ಸೇರಿದ್ದರು.

ಬದುಕುಳಿದ ಜೀವಂತ ಮಕ್ಕಳನ್ನು ನದಿ ತೀರದಿಂದ ದೋಣಿಯಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ ಮತ್ತು ಅವರೆಲ್ಲರೂ ಜೀವಂತವಾಗಿ ಇದ್ದಾರೆ ಎಂದು ಶೋಧ ಪ್ರದೇಶದಲ್ಲಿದ್ದ ಪೈಲಟ್ ಮಾಹಿತಿ ನೀಡಿದ್ದಾರೆ. ಆದರೆ ಈ ಮಕ್ಕಳ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ದೊರಕಿಲ್ಲ. ಅರಣ್ಯ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮಕ್ಕಳನ್ನು ಕರೆತರುವುದಕ್ಕೆ ಇನ್ನಷ್ಟು ಸಮಯ ಹಿಡಿಯುತ್ತದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...