ತೈವಾನ್ ವಿಚಾರದಲ್ಲಿ ಹಸ್ತಕ್ಷೇಪ ನಿಲ್ಲಿಸಿ: ಭಾರತಕ್ಕೆ ಚೀನಾ ಆಗ್ರಹ

Date:

ಭಾರತ- ಚೀನಾ ಸಂಬಂಧಕ್ಕೆ ಧಕ್ಕೆ ಬಾರದ ರೀತಿಯಲ್ಲಿ ತೈವಾನ್ ವಿಷಯವನ್ನು ವಿವೇಕಯುಕ್ತವಾಗಿ ನಿಭಾಯಿಸಿ ಎಂದು ಭಾರತವನ್ನು ಚೀನಾ ಆಗ್ರಹಿಸಿದೆ. ಮುಂಬೈನಲ್ಲಿ ತೈವಾನ್ ಕಾನ್ಸುಲೇಟ್ ಆರಂಭದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿರುವ ಚೀನಾ, ತೈವಾನ್ ವಿಚಾರದಲ್ಲಿ ಯಾವುದೇ ಬಗೆಯ ಹಸ್ತಕ್ಷೇಪ ಮಾಡದಂತೆ ಭಾರತಕ್ಕೆ ಆಗ್ರಹಿಸಿದೆ. ತೈವಾನ್ ಈಗಾಗಲೇ ನವದೆಹಲಿ ಹಾಗೂ ಚೆನ್ನೈನಲ್ಲಿ ರಾಯಭಾರ ಕಚೇರಿಗಳನ್ನು ಹೊಂದಿದೆ.

ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರೆ ಮಾವೋ ನಿಂಗ್ ಈ ಬಗ್ಗೆ ಹೇಳಿಕೆ ನೀಡಿ, ಚೀನಾದ ಜತೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಯಾವುದೇ ದೇಶ ತೈವಾನ್ ಜತೆಗೆ ಅಧಿಕೃತ ಸಂಪರ್ಕ ಹೊಂದುವುದನ್ನು ಚೀನಾ ವಿರೋಧಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಹಿಮಾಲಯನ್ ಗಡಿಯಲ್ಲಿ ಸುದೀರ್ಘ ಕಾಲದಿಂದ ಇರುವ ಸಂಘರ್ಷವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಪ್ರಯತ್ನಗಳನ್ನು ನಡೆಸುತ್ತಿರುವ ನಡುವೆಯೇ ತೈವಾನ್ ಹೊಸ ಕಾನ್ಸುಲೇಟ್ ಕಚೇರಿಯನ್ನು ಮುಂಬೈನಲ್ಲಿ ಆರಂಭಿಸಿರುವುದು ಚೀನಾದ ಕೆಂಗಣ್ಣಿಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು

ತೈವಾನ್ ದೇಶವನ್ನು ತನ್ನ ಭೂಭಾಗ ಎಂದು ಚೀನಾ ಪರಿಗಣಿಸಿದ್ದು ದ್ವೀಪರಾಷ್ಟ್ರದ ಸುತ್ತಮುತ್ತಲ ಪ್ರದೇಶಗಳಲ್ಲಿ ಇತ್ತೀಚೆಗೆ ಮಿಲಿಟರಿ ತಾಲೀಮು ನಡೆಸಿತ್ತು. ಚೀನಾ ಪ್ರತಿಪಾದನೆಯನ್ನು ತೈವಾನ್ ಅಲ್ಲಗಳೆದಿದ್ದು ತಾನು ಸಾರ್ವಭೌಮ ಸ್ವತಂತ್ರ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನನ್ನು ಬಿಂಬಿಸಿಕೊಳ್ಳುವ ಹಕ್ಕು ತನಗಿದೆ ಎಂದು ಹೇಳಿಕೊಂಡಿದೆ.

“ತೈವಾನ್ ವಿಚಾರದಲ್ಲಿ ಚೀನಾ ತನ್ನ ಮನವಿಯನ್ನು ಭಾರತಕ್ಕೆ ಸಲ್ಲಿಸಿದೆ’ಎಂದು ಹೇಳಿರುವ ಮಾವೊ ನಿಂಗ್, ‘ಒಂದೇ ಚೀನಾ ತತ್ವವು ಉಭಯ ದೇಶಗಳ ಗಂಭೀರ ರಾಜಕೀಯ ಬದ್ಧತೆಯಾಗಿದ್ದು, ಇದು ಚೀನಾ- ಭಾರತ ಸಂಬಂಧಗಳ ರಾಜಕೀಯ ಅಡಿಪಾಯ ಈ ಬದ್ಧತೆಗೆ ಭಾರತ ಬದ್ಧವಾಗಿರಬೇಕು ಮತ್ತು ತೈವಾನ್ ಸಂಬಂಧಿತ ವಿಚಾರಗಳನ್ನು ವಿವೇಕಯುಕ್ತವಾಗಿ ಹಾಗೂ ಸಮರ್ಪಕವಾಗಿ ನಿಭಾಯಿಸಬೇಕು. ತೈವಾನ್ ಜತೆಗೆ ಯಾವುದೇ ಅಧಿಕೃತ ವಿನಿಮಯವನ್ನು ಮಾಡಿಕೊಳ್ಳಬಾರದು” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...