ಪಾಕಿಸ್ತಾನ | ಎರಡು ಬುಡಕಟ್ಟುಗಳ ನಡುವೆ ಘರ್ಷಣೆ; 16 ಮಂದಿ ಸಾವು

Date:

  • ಸನ್ನಿಖೇಲ್, ಜರ್ಘುನ್ ಖೇಲ್ ಬುಡಕಟ್ಟು ಸಮುದಾಯಗಳ ನಡುವೆ ಗಣಿ ವಿಚಾರ ಸಂಬಂಧ ಘರ್ಷಣೆ
  • ಪಾಕಿಸ್ತಾನ ಕೋಹತ್‌ ಜಿಲ್ಲೆಯ ಪೇಶಾವರದ ನೈಋತ್ಯದ ದರ್ರಾ ಆಡಮ್‌ ಖೇಕ್‌ ಪ್ರದೇಶದಲ್ಲಿ ಘಟನೆ

ಪಾಕಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಕಲ್ಲಿದ್ದಲು ಗಣಿ ವಿಚಾರಕ್ಕೆ ಸಂಬಂಧಿಸಿ ಎರಡು ಬುಡಕಟ್ಟು ಸಮುದಾಯಗಳ ನಡುವೆ ಸೋಮವಾರ (ಮೇ 15) ಘರ್ಷಣೆ ಉಂಟಾಗಿ 16 ಮಂದಿ ಮೃತಪಟ್ಟಿದ್ದಾರೆ.

ಕೋಹತ್‌ ಜಿಲ್ಲೆಯ ಪೇಶಾವರದ ನೈಋತ್ಯಕ್ಕೆ 35 ಕಿಮೀ ದೂರದಲ್ಲಿರುವ ದರ್ರಾ ಆಡಮ್ ಖೇಕ್ ಪ್ರದೇಶದಲ್ಲಿ ಸನ್ನಿಖೇಲ್ ಮತ್ತು ಜರ್ಘುನ್ ಖೇಲ್ ಬುಡಕಟ್ಟು ಸಮುದಾಯಗಳ ನಡುವೆ ಕಲ್ಲಿದ್ದಲು ಗಣಿ ಗಡಿ ನಿರ್ಧಾರದ ಸಂಬಂಧ ಗಲಭೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತದೇಹಗಳು ಮತ್ತು ಗಲಭೆಯಲ್ಲಿ ಗಾಯಗೊಂಡ ಜನರನ್ನು ಪಾಕಿಸ್ತಾನದ ಪೇಶಾವರದ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಲಭೆಯಲ್ಲಿ ಗಾಯಗೊಂಡವರ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಆದರೆ, ಎರಡು ಬುಡಕಟ್ಟಿನ ಸಮುದಾಯಗಳು ನಡೆಸಿದ ಗುಂಡಿನ ದಾಳಿಯಲ್ಲಿ ಉಭಯ ಸಮುದಾಯಗಳ ನಡುವೆ ಸಾವು- ನೋವು ಸಂಭವಿಸಿದೆ ಎಂದು ಪೊಲೀಸರು ಹೇಳಿದರು.

ಗಲಭೆ ಸ್ಥಳಕ್ಕೆ ಪೊಲೀಸ್‌ ಮತ್ತು ಭದ್ರತಾ ಪಡೆಗಳ ಜಂಟಿ ತಂಡಗಳು ದೌಡಾಯಿಸಿವೆ. ಎರಡು ಸಮುದಾಯಗಳ ನಡುವಿನ ಗುಂಡಿನ ದಾಳಿಯನ್ನು ನಿಯಂತ್ರಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? 2016ರಿಂದ ಅದಾನಿ ಸಮೂಹದ ತನಿಖೆ ಮಾಡಿಲ್ಲ; ಸುಪ್ರೀಂ ಕೋರ್ಟ್‌ಗೆ ಸೆಬಿ ಮಾಹಿತಿ

ಪಾಕಿಸ್ತಾನ ಡರ್ರಾ ಆಡಮ್‌ ಖೇಕ್ ಪೊಲೀಸ್‌ ಠಾಣೆಯಲ್ಲಿ ಗಲಭೆಗೆ ಸಂಬಂಧಿಸಿ ಪ್ರಕರಣವೊಂದನ್ನು ದಾಖಲಿಸಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸನ್ನಿಖೇಲ್ ಮತ್ತು ಜರ್ಘುನ್ ಖೇಲ್ ಬುಡಕಟ್ಟು ಸಮುದಾಯಗಳ ನಡುವೆ ಕಲ್ಲಿದ್ದಲು ಗಣಿಯ ಗಡಿ ನಿರ್ಧಾರದ ವಿಚಾರಕ್ಕೆ ಸಂಬಂಧಿಸಿ ಎರಡು ವರ್ಷಗಳಿಂದ ವಿವಾದ ನಡೆಯುತ್ತಿತ್ತು. ಎರಡು ಬುಡಕಟ್ಟಿನ ಸಮುದಾಯಗಳ ನಡುವಿನ ಕಲ್ಲಿದ್ದಲು ಗಣಿ ಸಂಬಂಧದ ವಿವಾದವನ್ನು ಬಗೆಹರಿಸಲು ಪ್ರಯತ್ನ ನಡೆಸಲಾಗುತ್ತಿತ್ತು. ಆದರೆ ಯಾವುದೂ ಪರಿಹಾರ ರೂಪ ಪಡೆದಿರಲಿಲ್ಲ. ಈ ವಿವಾದ ಈಗ ಗಲಭೆ ರೂಪ ಪಡೆದಿದೆ. ಪ್ರದೇಶದಲ್ಲಿ ಪೊಲೀಸ್‌ ಪಡೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...