ಪಾಕಿಸ್ತಾನ ಪಡೆ ಮತ್ತು ಟಿಟಿಪಿ ನಡುವೆ ಘರ್ಷಣೆ; 17 ಮಂದಿ ಸಾವು

Date:

ಪಾಕಿಸ್ತಾನ ಪಡೆಗಳು ಮತ್ತು ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನಡುವೆ ಘರ್ಷಣೆ ನಡೆದಿದ್ದು, ಸುಮಾರು 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ವಾಯುವ್ಯ ಪ್ರಾಂತ್ಯದ ಖೈಬರ್ ಪಖ್ತುನ್‌ಖ್ವಾದಲ್ಲಿ ಘಟನೆ ನಡೆದಿದೆ.

ಟಿಟಿಪಿ ಬಂಡುಕೋರರ ವಿರುದ್ಧ ಪಾಕಿಸ್ತಾನದ ಫ್ರಾಂಟಿಯರ್ ಕಾರ್ಪ್ಸ್ (ಎಫ್‌ಸಿ) ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಭಯೋತ್ಪಾದಕ ಸಂಘಟನೆಯ 17 ಮಂದಿಯನ್ನು ಹತ್ಯೆಗೈಯಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಕರಕ್ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧಿಕಾರಿ (ಡಿಪಿಒ) ಶಹಬಾಜ್ ಎಲಾಹಿ ಹೇಳುವಂತೆ; ಖೈಬರ್ ಪಖ್ತುನ್‌ಖ್ವಾ ಪ್ರದೇಶದಲ್ಲಿ ಟಿಟಿಪಿ ಮತ್ತು ಮುಲ್ಲಾ ನಜೀರ್ ಗುಂಪಿನೊಂದಿಗೆ ಸಂಬಂಧ ಹೊಂದಿರುವವರು ಇದದ್ದಾರೆಂದು ಖಚಿತ ಮಾಹಿತಿ ದೊರೆತಿತ್ತು. ಬಳಿಕ, ಗುಪ್ತಚರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿಟಿಪಿ ಭಯೋತ್ಪಾದಕರು ಇರುವ ನೆಲೆಗಳನ್ನು ಭದ್ರತಾ ಪಡೆಗಳು ಸಮೀಪಿಸುತ್ತಿದ್ದಂತೆಯೇ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಪಡೆಗಳು ತ್ವರಿತ ಕಾರ್ಯಾಚರಣೆ ನಡೆಸಿದ್ದು, ಅಲ್ಲಿದ್ದ ಎಲ್ಲ 17 ಭಯೋತ್ಪಾದಕರನ್ನೂ ಹತ್ಯೆಗೈಯಲಾಗಿದೆ. ಸ್ಥಳದಲ್ಲಿದ್ದ ಗಣನೀಯ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಎಲಾಹಿ ತಿಳಿಸಿದ್ದಾರೆ.

ಹತ್ಯೆಗೊಳಗಾದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲಿನ ದಾಳಿ, ಸುಲಿಗೆಗಾಗಿ ಅಪಹರಣ ಹಾಗೂ ಇತರ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...