ಮೋಚಾ ಚಂಡಮಾರುತ; ಪಶ್ಚಿಮ ಮಯನ್ಮಾರ್‌ ಸಂಪರ್ಕ ಕಡಿತ, 700 ಮಂದಿಗೆ ಗಾಯ

Date:

ಪಶ್ಚಿಮ ಮಯನ್ಮಾರ್‌ ಕರಾವಳಿಯ 12 ಅಡಿ ಆಳದ ಸಮುದ್ರದ ನೀರಿನಲ್ಲಿ ಸಿಲುಕಿದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.

ಬಾಂಗ್ಲಾದೇಶ– ಮಯನ್ಮಾರ್‌ ಕರಾವಳಿಯಲ್ಲಿ ಮೋಚಾ ಚಂಡಮಾರುತದ ತೀವ್ರತೆ ಹೆಚ್ಚಾಗಿದ್ದು, ಪಶ್ಚಿಮ ಮಯನ್ಮಾರ್‌ನಲ್ಲಿ ಏಷ್ಯಾದ ರಾಷ್ಟ್ರಗಳಿಗೆ ಸಂಪರ್ಕ ಕಲ್ಪಿಸುವ ಸಂವಹನ ಕಡಿತಗೊಂಡಿದೆ. ಚಂಡಮಾರುತದಿಂದ 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕನಿಷ್ಠ 6 ಮಂದಿ ಸಾವನಪ್ಪಿದ್ದಾರೆ. ಪಶ್ಚಿಮ ಮಯನ್ಮಾರ್‌ ಕರಾವಳಿಯ 12 ಅಡಿ ಆಳದ ಸಮುದ್ರದ ನೀರಿನಲ್ಲಿ ಸಿಲುಕಿದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.

20 ಸಾವಿರಕ್ಕೂ ಹೆಚ್ಚು ಜನರು ಎತ್ತರದ ಪ್ರದೇಶಗಳಲ್ಲಿನ ಧಾರ್ಮಿಕ ಸ್ಥಳಗಳು, ಶಾಲೆಗಳು ಹಾಗೂ ಬಲವಾದ ಕಟ್ಟಡಗಳಲ್ಲಿ ರಕ್ಷಣೆ ಪಡೆಯುತ್ತಿದ್ದಾರೆ. ಭಾನುವಾರ ಸಂಜೆಯ (ಮೇ 15) ನಂತರ ಚಂಡಮಾರುತವು ಸ್ವಲ್ಪ ದುರ್ಬಲಗೊಂಡಿತ್ತು. ಆದರೆ ಬಹುತೇಕ ಪ್ರದೇಶಗಳಲ್ಲಿ ನೀರಿನ ಹರಿವು ಹಾಗೆಯೇ ಇದೆ. ಚಂಡಮಾರುತಕ್ಕೆ ಸಿಲುಕಿರುವ ಸಾವಿರಾರು ಮಂದಿ, ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಘಗಳ ನೆರವನ್ನು ಬಯಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಟೆಗೆ 209 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಮಯನ್ಮಾರ್‌ನ ಸಿಟ್ವೆ ಟೌನ್‌ಶಿಪ್ ಬಳಿ ಭೂಕುಸಿತ ಉಂಟಾಗಿದೆ. ಗಾಳಿಯ ವೇಗಕ್ಕೆ ಹಲವೆಡೆ ಮೊಬೈಲ್‌ ಟವರ್‌ಗಳು ಪುಡಿಪುಡಿಯಾಗಿದ್ದು, ಸ್ಥಳೀಯ ಪ್ರದೇಶಗಳು ಹಾಗೂ ಇತರ ದೇಶಗಳೊಂದಿನ ಸಂವಹನ ಕಡಿತಗೊಂಡಿದೆ. ಹಲವು ರಸ್ತೆಗಳಲ್ಲಿ ಹತ್ತಕ್ಕೂ ಹೆಚ್ಚು ಅಡಿ ನೀರು ತುಂಬಿಕೊಂಡಿದೆ. ಚಂಡಮಾರುತದ ರಭಸಕ್ಕೆ ನೂರಾರು ಮನೆಗಳು ಹಾಗೂ ಕಟ್ಟಡಗಳ ಛಾವಣಿಗಳು ಹಾರಿಹೋಗಿವೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಚುನಾವಣೆ | ಸದುಪಯೋಗವಾಗಲಿ ಕಾಂಗ್ರೆಸ್‌ ‘ಗ್ಯಾರಂಟಿ’

ಮೋಚಾ ಭೀತಿಯಿಂದಾಗಿ ಬಾಂಗ್ಲಾದೇಶದ ಕಾಕ್ಸ್ ಬಜಾರ್ ಪ್ರದೇಶದ ಸಾವಿರಾರು ಜನರನ್ನು ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರು. ಸೇಂಟ್ ಮಾರ್ಟಿನ್ ದ್ವೀಪದಲ್ಲಿ 300 ಮನೆಗಳು ಹಾನಿಗೊಂಡು ಸುಮಾರು ಹನ್ನೆರಡು ಮಂದಿ ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆ ಹಾಗೂ ಕರಾವಳಿ ಭಾಗಗಳಾದ ಪುರ್ಬಾ ಮೇದಿನಿಪುರ ಪ್ರದೇಶಗಳಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದಿಘಾ ಹಾಗೂ ಮಂದಾರಮಣಿ ಕರಾವಳಿ ಪ್ರದೇಶದಲ್ಲಿ ಎನ್‌ಡಿಆರ್‌ಎಫ್ ಅಲ್ಲದೆ, ಯಾವುದೇ ಪರಿಸ್ಥಿತಿಯಲ್ಲಿ ಜನರನ್ನು ಸ್ಥಳಾಂತರಿಸುವ ಅಗತ್ಯ ಬಂದರೆ ಅದಕ್ಕೆ ಪೂರಕವಾಗಿರುವ ವ್ಯವಸ್ಥೆಗಳನ್ನೂ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಶ್ರಯ ಶಿಬಿರಗಳನ್ನೂ ನಿರ್ಮಿಸಲು ಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದ್ದು, ಯಾವುದೇ ಸಂದರ್ಭದಲ್ಲೂ ಚಂಡಮಾರುತ ಬಾಂಗ್ಲಾ- ಮಾಯನ್ಮಾರ್ ಗಡಿದಾಟುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...