ದಾವಣಗೆರೆ | ಯುದ್ಧಗಳ ಹಿಂದೆ ಲಾಭದ ಕುತಂತ್ರವಿದೆ ಮತ್ತು ಗಾಜಾದ ಮಾನವ ಹತ್ಯೆ ಖಂಡನೀಯ; ಎಡಪಕ್ಷಗಳು

Date:

ಗಾಜಾದ ಮಾನವ ಹತ್ಯೆ ಖಂಡಿಸಿ ಪ್ಯಾಲೆಸ್ತೇನ್ ಗೆ ಬೆಂಬಲಿಸಿ ಎಡಪಕ್ಷಗಳಿಂದ ದಾವಣಗೆರೆಯಲ್ಲಿ ರಾಷ್ಟ್ರೀಯ ಸೌಹಾರ್ಧತಾ ದಿನ ಆಚರಿಸಲಾಯಿತು. ಈ ವೇಳೆ “ದೇಶ ದೇಶಗಳ ಮಧ್ಯೆ ನಡೆಯುವ ಯುದ್ಧಗಳ ಹಿಂದೆ ಲಾಭದ ಕುತಂತ್ರ ಅಡಗಿದೆ” ಎಂದು ದಾವಣಗೆರೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ಎಡಪಕ್ಷಗಳ ರಾಷ್ಟ್ರೀಯ ಸಮಿತಿಗಳ ಕರೆಯ ಮೇರೆಗೆ ಎಡ ಪಕ್ಷಗಳ ನೇತೃತ್ವದಲ್ಲಿ ಇಂದು ದಾವಣಗೆರೆ ಜಯದೇವ ಸರ್ಕಲ್ ನಲ್ಲಿ ನಡೆದ ರಾಷ್ಟ್ರೀಯ ಸೌಹಾರ್ದತಾ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಜಾದಲ್ಲಿ ನಡೆದ ಇಸ್ರೇಲ್ ದಾಳಿಯ ಮಾನವ ಹತ್ಯೆ ಖಂಡಿಸಿ ಪ್ಯಾಲೆಸ್ತೇನಿಗೆ ಬೆಂಬಲಿಸಿ ಮಾತನಾಡಿದ ಅವರು, “ಬಲಾಢ್ಯ ದೇಶಗಳ ಲಾಭಕೋರತನಕ್ಕೆ ಕುತಂತ್ರಗಳಿಂದ ನಡೆಯುವ ಈ ಯುದ್ಧಗಳು ಮಾನವ ಕುಲವನ್ನು ನಾಶ ಮಾಡುವತ್ತ ಹೊರಟಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಸಿ ಪಿ ಐ ಎಂ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆಎಚ್ ಆನಂದರಾಜ್ ಮಾತನಾಡಿ “ದೇಶ ದೇಶಗಳ ಮಧ್ಯೆ ನಡೆಯುವ ಈ ಯುದ್ಧಗಳು ಮಾನವೀಯತೆಯನ್ನು ಮರೆತು, ರಾಕ್ಷಸರಂತೆ ವರ್ತಿಸುವ ಮನೋಭಾವ ಕೈಬಿಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002174647
ಯುದ್ದ ಮತ್ತು ಗಾಜಾ ಮಾನವ ಹತ್ಯೆ ಖಂಡಿಸಿ ಎಡಪಕ್ಷಗಳ ಒಕ್ಕೂಟದ ಪ್ರತಿಭಟನೆ

ಎಸ್ ಯು ಸಿ ಐ ನ ಜಿಲ್ಲಾ ಕಾರ್ಯದರ್ಶಿ ಕೈದಾಳೆ ಮಂಜುನಾಥ್ ಮಾತನಾಡಿ “ಯುದ್ಧಗಳು ಅಗತ್ಯ ಇಲ್ಲದಿದ್ದರೂ ಅಮೇರಿಕಾದಂತಹ ಬಲಾಢ್ಯ ದೇಶಗಳು ಜಗತ್ತನ್ನು ತಮ್ಮ ಕೈಗೊಂಬೆಯಾಗಿರಿಸಿಕೊಂಡು ತಾವು ತಯಾರಿಸುವ ಯುದ್ಧ ಸಾಮಗ್ರಿಗಳನ್ನು ಮಾರಾಟ ಮಾಡುವ ಹುನ್ನಾರವನ್ನು ನಿರಂತರವಾಗಿ ನಡೆಸುತ್ತಿವೆ” ಎಂದು ಆರೋಪಿಸಿದರು.

“ತಮ್ಮ ಹುಚ್ಚಾಟಗಳಿಗಾಗಿ ನಡೆಸುವ ಈ ಯುದ್ಧಗಳು ಒಟ್ಟಾರೆ ಅಮಾಯಕ ಜನರನ್ನು ಬಲಿ ಪಡೆಯುತ್ತಿವೆ” ಎಂದು ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಹೆಚ್ ಜಿ ಉಮೇಶ್ ಆತಂಕ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಅಡ್ಡ ಮಲಗಿ ಘೇರಾವ್ ಹಾಕಿದ ರೈತರು; ಅಹವಾಲು ಸಲ್ಲಿಸುವ ವೇಳೆ ಘಟನೆ

ರಾಷ್ಟ್ರೀಯ ಸೌಹಾರ್ದತೆ ದಿನಾಚರಣೆಯಲ್ಲಿ ಮುಖಂಡರುಗಳಾದ, ಕುಕ್ಕವಾಡ ಮಂಜುನಾಥ್, ಅಣಬೇರು ತಿಪ್ಪೇಸ್ವಾಮಿ, ಕೆ ಜೆ ಎಸ್ ನ ಪವಿತ್ರ, ಮಹಮದ್ ರಫೀಕ್, ಜಿ ಎಲ್ಲಪ್ಪ, ಈ ಶ್ರೀನಿವಾಸ, ನರೇಗಾ ರಂಗನಾಥ್, ಶ್ರೀನಿವಾಸಮೂರ್ತಿ, ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಸರೋಜಾ, ರುದ್ರಮ್ಮ, ಐರಣಿ ಚಂದ್ರು, ಟಿವಿಎಸ್ ರಾಜು ಭಾರತಿ ಕೆ,ಅನಿಲ್ ಕುಮಾರ್, ಸತೀಶ್ ಅರವಿಂದ, ವಿ ಲಕ್ಷ್ಮಣ, ಏ ತಿಪ್ಪೇಶ್, ಹೆಚ್ ಎಸ್ ಚಂದ್ರು ,ಈ ಎಸ್ ಉಮೇಶ್, ಶೇಖರ ನಾಯಕ, ಶಿವಾಜಿ ರಾವ್ ,ಸುಷ್ಮಾ, ಚಿನ್ನಪ್ಪ, ಯರಗುಂಟೆ ಸುರೇಶ್, ಗಜೇಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...