‘ಸ್ಯಾಂಡ್‌ವಿಚ್‌ ಆಗಲು ಬಯಸುವುದಿಲ್ಲ’; ಭಾರತ-ಚೀನಾ ವಿಚಾರದಲ್ಲಿ ಲಂಕಾ ನಿಲುವು

Date:

ಭಾರತ ಮತ್ತು ಚೀನಾ ನಡುವೆ ‘ಸ್ಯಾಂಡ್‌ವಿಚ್‌’ ಆಗಲು ನಾನು ಬಯಸುವುದಿಲ್ಲ. ಆದರೆ, 2019ರಿಂದ ಶ್ರೀಲಂಕಾದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಪ್ರತಿಯೊಬ್ಬರೊಂದಿಗೆ ‘ಮೌಲ್ಯಯುತ ಪಾಲುದಾರಿಕೆ’ಯೊಂದಿಗೆ ಮುನ್ನಡೆಯುತ್ತೇವೆ ಎಂದು ಶ್ರೀಲಂಕಾದ ನೂತಕ ಅಧ್ಯಕ್ಷ ಅನುರ ಕುಮಾರ ಡಿಸ್ಸಾನಾಯಕೆ ಹೇಳಿದ್ದಾರೆ.

ಮಾರ್ಕ್ಸ್‌ವಾದಿ ಚಿಂತನೆಯನ್ನು ಅಳವಡಿಸಿಕೊಂಡಿರುವ ಡಿಸ್ಸಾನಾಯಕೆ, ದಕ್ಷಿಣ ಏಷ್ಯಾ ಅಥವಾ ಹಿಂದು ಮಹಾಸಾಗರ ಪ್ರದೇಶದಲ್ಲಿನ ಭೌಗೋಳಿಕ ರಾಜಕೀಯ ರಂಪಾಟಗಳಿಂದ ದೂರವಿರಲು ನಿರ್ಧರಿಸಿದ್ದಾರೆ. ಅದು ಅವರ ಮಾತುಗಳಲ್ಲಿ ವ್ಯಕ್ತವಾಗುತ್ತಿದೆ. ಯಾವುದೇ ರಾಷ್ಟ್ರಗಳ ನಡುವಿನ ತಿಕ್ಕಾಟದಲ್ಲಿ ತಾವು ಸಿಕ್ಕಿಕೊಳ್ಳಲು ಬಯಸುವುದಿಲ್ಲ ಎಂದಿದ್ದಾರೆ. ಪ್ರತಿಯೊಬ್ಬರೂ ಶ್ರೀಲಂಕಾಗೆ ಅಗತ್ಯವಿರುವ ಹಣಕಾಸಿನ ನೆರವು ನೀಡಬಹುದು ಎಂದು ಹೇಳಿದ್ದಾರೆ. ಜೊತೆಗೆ, ಪಶ್ಚಿಮ, ಮಧ್ಯಪ್ರಾಚ್ಯ ಮತ್ತು ಆಫ್ರಿಕಾದೊಂದಿಗೆ ನಿಕಟ ಸಂಬಂಧಗಳನ್ನು ಬೆಳೆಸುವುದಾಗಿಯೂ ಹೇಳಿಕೊಂಡಿದ್ದಾರೆ.

“ಅಂತಾರಾಷ್ಟ್ರೀಯ ವ್ಯವಸ್ಥೆಯೊಳಗೆ ಹಲವಾರು ಗುಂಪುಗಳಿವೆ. ಆದರೆ, ನಾವು ಈ ಭೌಗೋಳಿಕ ರಾಜಕೀಯ ಹೋರಾಟದ ಭಾಗವಾಗುವುದಿಲ್ಲ. ನಾವು ಯಾವುದೇ ಗುಂಪಿನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ವಿಶೇಷವಾಗಿ ಚೀನಾ ಮತ್ತು ಭಾರತದ ನಡುವೆ ‘ಸ್ಯಾಂಡ್‌ವಿಚ್‌’ ಆಗಲು ಬಯಸುವುದಿಲ್ಲ. ನಮಗೆ ಎರಡೂ ರಾಷ್ಟ್ರಗಳೂ ಮೌಲ್ಯಯುತ ಸ್ನೇಹಿತ ರಾಷ್ಟ್ರಗಳಾಗಿವೆ. ಉಭಯ ರಾಷ್ಟ್ರಗಳೊಂದಿಗೆ ನಿಕಟ ಪಾಲುದಾರಕೆ ಪಡೆಯಲು ನಾವು ನಿರೀಕ್ಷಿಸುತ್ತೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ನಮ್ಮ ಸಾರ್ವಭೌಮತ್ವವನ್ನು ಕಾಪಾಡಿಕೊಳ್ಳಲು ಬದ್ಧರಾಗಿದ್ದೇವೆ. ಈ ಭೌಗೋಳಿಕ ರಾಜಕೀಯ ಓಟದಲ್ಲಿ ಯಾವುದೇ ಶಕ್ತಿಗೆ ಅಧೀನರಾಗುವುದಿಲ್ಲ…” ಎಂದು ಅವರು ಈ ಹಿಂದೆಯೂ ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...