ಫೆ. 9ರಂದು ದುಬೈನಲ್ಲಿ ‘ಬ್ಯಾರಿ ಮೇಳ-2025’: ಐತಿಹಾಸಿಕ ಮೇಳಕ್ಕೆ ಸಿದ್ಧಗೊಳ್ಳುತ್ತಿದೆ ಇತಿಸಲಾತ್‌ ಮೈದಾನ

Date:

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್‌ (ಬಿಸಿಸಿಐ) ಯುಎಇ ಘಟಕದ ಆಶ್ರಯದಲ್ಲಿ ನಾಳೆ (ಫೆಬ್ರವರಿ 9) ದುಬೈನ ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ನಡೆಯಲಿರುವ ‘ಬ್ಯಾರಿ ಮೇಳ-2025’ಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.

“ಯುಎಇಯಲ್ಲಿ ಸುಮಾರು 1,80,000 ಕನ್ನಡಿಗರಿದ್ದು, ಅದರಲ್ಲಿ ಸುಮಾರು 45,000 ಬ್ಯಾರಿಗಳಿದ್ದಾರೆ. ಕನ್ನಡಿಗರೂ ಒಳಗೊಂಡಂತೆ ಬ್ಯಾರಿ ಕುಟುಂಬಗಳನ್ನು ಒಂದೆಡೆ ಸೇರಿಸಿ, ‘ಬ್ಯಾರಿ ಮೇಳ – 2025ʼ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ” ಎಂದು ಈದಿನ ಡಾಟ್‌ ಕಾಮ್ ಪ್ರತಿನಿಧಿಯೊಂದಿಗೆ ಮಾತನಾಡಿದ ಬಿಸಿಸಿಐ ಯುಎಇ ಘಟಕದ ಅಧ್ಯಕ್ಷ ಹಿದಾಯತ್‌ ಅಡ್ಡೂರು ತಿಳಿಸಿದರು.

“ಬ್ಯಾರಿ ಉದ್ದಿಮೆದಾರರು ಮತ್ತು ವೃತ್ತಿಪರರು ಸೇರಿಕೆಂಡು ಸ್ಥಾಪಿಸಿರುವ ಬಿಸಿಸಿಐನ ಕೇಂದ್ರ ಕಚೇರಿಯು ಮಂಗಳೂರಿನಲ್ಲಿದ್ದು, ಇದರ ಯುಎಇ ಘಟಕ ಕಳೆದ ಆರು ವರ್ಷಗಳಿಂದ ದುಬೈನಲ್ಲಿ ಕಾರ್ಯಾಚರಿಸುತ್ತಿದೆ. ಯುಎಇನಲ್ಲಿರುವ ಎಲ್ಲ ಉದ್ದಿಮೆದಾರರನ್ನು ಒಂದೇ ವೇದಿಕೆಯಡಿ ತಂದು, ಅವರ ನಡುವೆ ಸಂಪರ್ಕ ಸಾಧಿಸುವ ಕೊಂಡಿಯಾಗಿರುವುದು ಹಾಗೂ ಹೊಸದಾಗಿ ಉದ್ದಿಮೆ ಆರಂಭಿಸುವ ಯುವಜನರಿಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುವುದು ಬಿಸಿಸಿಐನ ಮೂಲ ಧ್ಯೇಯ” ಎಂದು ಹಿದಾಯತ್‌ ಅಡ್ಡೂರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉದ್ದಿಮೆದಾರರಿಗೆ ಆಧುನಿಕ ತಂತ್ರಜ್ಞಾನದ ಬಳಕೆ ಮತ್ತು ಪ್ರಗತಿ ಸಾಧನೆಗೆ ಮಾಹಿತಿ ನೀಡುವುದರ ಜೊತೆಗೆ ಉದ್ಯೋಗ ಹುಡುಕಿಕೊಂಡು ಯುಎಇಗೆ ಬರುವ ಯುವಜನರಿಗೆ ಬಿಸಿಸಿಐ ದುಬೈ ಘಟಕ ಸೂಕ್ತ ಮಾರ್ಗದರ್ಶನ ಮತ್ತು ಔದ್ಯೋಗಿಕ ಕೌಶಲಗಳ ತರಬೇತಿ ನೀಡುತ್ತದೆ. ಬ್ಯಾರಿ ಮೇಳದಲ್ಲಿ ಯುಎಇ ಮತ್ತು ಹತ್ತಿರದ ದೇಶಗಳಿಂದ ಸುಮಾರು 10000ಕ್ಕೂ ಹೆಚ್ಚು ಮಂದಿ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ” ಎಂದು ಬಿಸಿಸಿಐ ಯುಎಇ ಘಟಕದ ಪ್ರಧಾನ ಕಾರ್ಯದರ್ಶಿ ಅನ್ವರ್‌ ಹುಸೈನ್ ಅಡ್ಡೂರು ಹೇಳಿದರು.

“ಬ್ಯಾರಿ ಸಮುದಾಯದ ಉದ್ಯಮಿಗಳು, ಉದ್ಯಮದಲ್ಲಿ ಆಸಕ್ತಿಯಿರುವವರು, ತಮ್ಮ ಉದ್ಯಮವನ್ನು ಇನ್ನಷ್ಟು ಎತ್ತರಕ್ಕೆ ಕೊಂಡುಹೋಗಲು ಬಯಸುವವರು, ತಮ್ಮ ಸರಕು, ಇನ್ನಿತರ ವಸ್ತುಗಳಿಗೆ ಉತ್ತಮ ಪ್ರಚಾರ ಬಯಸುವವರು, ಉದ್ಯೋಗದ ಹುಡುಕಾಟದಲ್ಲಿರುವ ಯುವಕ-ಯುವತಿಯರು, ವಿದ್ಯಾರ್ಥಿಗಳು ಮತ್ತು ಮಕ್ಕಳು ಕುಟುಂಬ ಸಮೇತರಾಗಿ ಬ್ಯಾರಿ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಯುಎಇಯಲ್ಲಿರುವ ಅನೇಕ ಸಂಘ-ಸಂಸ್ಥೆಗಳು ನಮಗೆ ಬೆಂಬಲವನ್ನು ಘೋಷಿಸಿವೆ. ಬ್ಯಾರಿ ಸಮುದಾಯದ ಇತಿಹಾಸದಲ್ಲಿ ಹೊರದೇಶದಲ್ಲಿ ನಡೆಯಲಿರುವ ಅತೀ ದೊಡ್ಡ ಮೇಳ ಇದಾಗಿದೆ” ಎಂದು ʼಬ್ಯಾರಿ ಮೇಳ – 2025ʼರ ಸ್ವಾಗತ ಸಮಿತಿಯ ಅಧ್ಯಕ್ಷ ಅಶ್ರಫ್‌ ಶಾ ಮಾಂತೂರು ತಿಳಿಸಿದರು.

WhatsApp Image 2025 02 08 at 5.42.53 PM

“ಜಗತ್ತಿನಾದ್ಯಂತ ಇರುವ ಬ್ಯಾರಿ ಉದ್ಯಮಿಗಳು ಈ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಯುಎಇನಲ್ಲಿರುವ ಬ್ಯಾರಿ ಉದ್ಯಮಿಗಳಲ್ಲದೆ, ಸೌದಿ ಅರೇಬಿಯಾ, ಕುವೈತ್, ಖತಾರ್, ಬಹರೈನ್, ಒಮಾನ್ ಸೇರಿದಂತೆ ಜಿಸಿಸಿ(ಗಲ್ಫ್) ದೇಶಗಳು ಮತ್ತು ಭಾರತದ ಉದ್ಯಮಿಗಳು ಬ್ಯಾರಿ ಮೇಳದಲ್ಲಿ ಭಾಗವಹಿಸಲು ಈಗಾಗಲೇ ದುಬೈ ತಲುಪಿದ್ದಾರೆ” ಎಂದು ʼಬ್ಯಾರಿ ಮೇಳ -2025ʼರ ಸ್ವಾಗತ ಸಮಿತಿಯ ಉಪಾಧ್ಯಕ್ಷ ಮುಹಮ್ಮದ್‌ ಮುಸ್ತಾಕ್ ಕದ್ರಿ ಹೇಳಿದರು.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ವಿಡಿಯೋ ಮಾಡಲು ಹೋದಾಗ ದುರಂತ: ಎತ್ತಿನಗಾಡಿ ಹರಿದು ವ್ಯಕ್ತಿ ಸಾವು

“ಯಶಸ್ವಿ ಉದ್ಯಮಿಗಳನ್ನು, ಸಮುದಾಯದ ಸಾಧಕರನ್ನು ಗುರುತಿಸಿ ಬ್ಯಾರಿ ಮೇಳದಲ್ಲಿ ಗೌರವಿಸಲಾಗುವುದು. ಮಹಿಳೆಯರು ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳು, ಬ್ಯಾರಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕರಾವಳಿಯ ಪ್ರಸಿದ್ಧ ಆಹಾರ, ತಿಂಡಿಗಳ ಮಳಿಗೆಗಳು ಒಳಗೊಂಡಂತೆ ವಿವಿಧ ಉದ್ಯಮ ಕ್ಷೇತ್ರದ 75ಕ್ಕೂ ಹೆಚ್ಚಿನ ಮಳಿಗೆಗಳು ಬ್ಯಾರಿ ಮೇಳದಲ್ಲಿರಲಿವೆ. ಬ್ಯಾರಿ ಮೇಳದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಉಚಿತ ರಾಫೆಲ್ ಡ್ರಾದಲ್ಲಿ ಪಾಲ್ಗೊಳ್ಳಬಹುದಾಗಿದ್ದು ಐಪ್ಯಾಡ್, ಐಫೋನ್‌, ಟಿವಿ ಮತ್ತು ಇನ್ನಿತರ ಹಲವು ಆಕರ್ಷಕ ಬಹುಮಾನಗಳನ್ನು ಡ್ರಾ ಮೂಲಕ ನೀಡಲಾಗುವುದು” ಎಂದು ಬಿಸಿಸಿಐ ಯುಎಇ ಘಟಕದ ಉಪಾಧ್ಯಕ್ಷ ಬಶೀರ್‌ ಕಿನ್ನಿಂಗಾರ್‌ ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...