ಭೀಕರ ಭೂಕಂಪ: ಪ್ರಾಣ ಭಯಕ್ಕಿಂತ ಮೇಲುಗೈ ಸಾಧಿಸಿದ ದಾದಿಯರ ಮಾನವೀಯತೆ

Date:

ಭೂಮಿ ಸ್ವಲ್ಪ ಕಂಪಿಸಿದರೆ, ಜನ ಪ್ರಾಣಭಯದಿಂದ ತಮ್ಮ ಮನೆ-ಕಟ್ಟಡದಿಂದ ಹೊರ ಓಡುತ್ತಾರೆ. ತಾವು ಮೊದಲ ಬದುಕುಳಿದರೆ ಸಾಕು ಎಂದು ಧಾವಿಸುತ್ತಾರೆ. ಸದ್ಯ, ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿ ಭಾರೀ ದುರಂತ ಎದುರಾಗಿದೆ. ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಈ ನಡುವೆ, ಮತ್ತೊಮ್ಮೆ ಭೂಮಿ ಕಂಪಿಸಿದೆ. ಈ ವೇಳೆ, ಪ್ರಾಣಭಯಕ್ಕಿಂತ ಮಾನವೀಯತೆಗೆ ಒತ್ತುಕೊಟ್ಟಿರುವ ದಾದಿಯರು, ಭೂಕಂಪದ ನಡುವೆಯೂ ಗಾಯಾಳುಗಳಿಗೆ ಚಿಕಿತ್ಸೆ ನೀಡುವುದರನ್ನು ಮುಂದುವರೆಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೊಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿ, ಮ್ಯಾನ್ಮಾರ್ ಭೂಕಂಪದ ಸಮಯದಲ್ಲಿ ನವಜಾತ ಶಿಶುಗಳನ್ನು ದಾದಿಯರು ರಕ್ಷಿಸಿದ್ದಾರೆ. ತಮ್ಮ ಕರ್ತವ್ಯ ಪ್ರಜ್ಞೆ ಮತ್ತು ಮಾನವೀಯತೆಯನ್ನು ಮೆರೆದಿರುವುದು ಕಂಡುಬಂದಿದೆ.

ನಾಲ್ಕು ದಿನಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪವು ಭಾರಿ ವಿನಾಶವನ್ನುಂಟು ಮಾಡಿದೆ. 7.7 ತೀವ್ರತೆಯ ಭೂಕಂಪದಿಂದ ಹಲವಾರು ಕಟ್ಟಡಗಳು ಉರುಳಿಬಿದ್ದಿವೆ. ಕನಿಷ್ಠ 2,056 ಮಂದಿ ಸಾವನ್ನಪ್ಪಿದ್ದು, 3,900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 270 ಮಂದಿ ಕಾಣೆಯಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ವೈದ್ಯಕೀಯ ತಂಡವು ರಕ್ಷಣಾ ಮತ್ತು ಅಗತ್ಯ ತುರ್ತು ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈರಲ್ ಆಗಿರುವ ವಿಡಿಯೋದಲ್ಲಿ ದಾದಿಯರು ಭೂಕಂಪ ಸಂಭವಿಸಿದ್ದರ ನಡುವೆಯೂ ನವಜಾತ ಶಿಶುಗಳನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಭೂಕಂಪ ಸಂಭವಿಸಿದಾಗ ತೊಟ್ಟಿಲುಗಳು ಉರುಳದಂತೆ ತಡೆಯಲು ಇಬ್ಬರು ನರ್ಸ್ ಧಾವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ, ಭೂಕಂಪದಲ್ಲಿ ಆಸ್ಪತ್ರೆ ಕಟ್ಟಡವು ಅಲುಗಾಡಿದೆ. ಆ ದಾದಿಯರು ಭೀಕರ ಕಂಪನದ ಸಮಯದಲ್ಲಿ ತಮ್ಮ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗದೆ, ಶಿಶುಗಳ ತೊಟ್ಟಿಲುಗಳನ್ನು ಹಿಡಿದಿಡಲು ಪ್ರಯತ್ನಿಸಿದ್ದಾರೆ. ನವಜಾತ ಶಿಶುಗಳನ್ನ ಕಾಪಾಡಲು ಮುಂದಾಗುತ್ತಾರೆ.

ಈ ವರದಿ ಓದಿದ್ದೀರಾ?: ಮ್ಯಾನ್ಮಾರ್‌ ಭೂಕಂಪ | ಸಾವಿರಕ್ಕೂ ಅಧಿಕ ಸಾವು; 2,000 ಮಂದಿಗೆ ಗಾಯ

ಆ ವಿಡಿಯೋದಲ್ಲಿ ಶಿಶುಗಳನ್ನು ರಕ್ಷಿಸುತ್ತಿರುವವರನ್ನು ಚೀನಾದ ಯುನ್ನಾನ್‌ನಲ್ಲಿರುವ ಜಿಂಗ್ಚೆಂಗ್ ಆಸ್ಪತ್ರೆಯ ದಾದಿಯರು ಎಂದು ಹೇಳಲಾಗಿದೆ. ನರ್ಸ್‌ಗಳ ಕರ್ತವ್ಯಪ್ರಜ್ಞೆ ಮತ್ತು ಮಾನವೀಯತೆಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಬ್ಬರು ದಾದಿಯರ ಪ್ರಾಮಾಣಿಕ ಕೆಲಸ, ಕರ್ತವ್ಯ ಪ್ರಜ್ಞೆ ಜಗತ್ತಿಗೆ ಮಾದರಿ. ಮುಖ್ಯವಾಗಿ ಇಲ್ಲಿ ಮಾನವೀಯತೆ ಗೆದ್ದಿದೆ. ದಾದಿಯರ ಧೈರ್ಯವೇ ಇದಕ್ಕೆ ಸಾಕ್ಷಿ. ದಾದಿಯರು ಭೂಕಂಪ ಸಂಭವಿಸಿದರೂ ಓಡಿ ಹೋಗದೇ, ಅವರ ಅಲ್ಲಿಯೇ ಇದ್ದು ನವಜಾತ ಶಿಶುಗಳ ಜೀವಗಳನ್ನು ಉಳಿಸಿದ್ದಾರೆ. ದಾದಿಯರು ನಮಗೆ ಹೇಗೆ ಬದುಕಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ನೆಟ್ಟಿಗರ ಶ್ಲಾಘಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...