ಈಕ್ವೆಡಾರ್‌ನಲ್ಲಿ ಆಂತರಿಕ ಸಂಘರ್ಷ | ಯುದ್ಧ ಘೋಷಿಸಿದ ಡ್ರಗ್ಸ್ ಮಾಫಿಯಾ; ತುರ್ತು ಪರಿಸ್ಥಿತಿ ಎಂದ ಸರ್ಕಾರ

Date:

ಈಕ್ವೆಡಾರ್‌ ದೇಶದ ಅತ್ಯಂತ ಶಕ್ತಿಶಾಲಿ ಕ್ರಿಮಿನಲ್ ನಾಯಕ, ಡ್ರಗ್ ಮಾಫಿಯಾದ ಕಿಂಗ್‌ಪಿನ್ ಜೋಸ್ ಅಡಾಲ್ಫೊ ಮಾಕಿಯಾಸ್ ಎಂಬಾತ ಜೈಲಿನಿಂದ ತಪ್ಪಿಸಿಕೊಂಡ ನಂತರ ಆಂತರಿಕ ಸಂಘರ್ಷ ಉಂಟಾಗಿದ್ದು, ಡ್ರಗ್ಸ್ ಮಾಫಿಯಾವು ಸರ್ಕಾರದ ವಿರುದ್ಧ ಯುದ್ಧ ಘೋಷಿಸಿರುವುದಾಗಿ ತಿಳಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅಲ್ಲಿನ ಅಧ್ಯಕ್ಷ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಈಕ್ವೆಡಾರ್ ಅಧ್ಯಕ್ಷ ಡೇನಿಯಲ್ ನೊಬೊವಾ ಮಂಗಳವಾರ ದೇಶದ ಪ್ರಬಲ ಕ್ರಿಮಿನಲ್ ಗುಂಪಿನ ವಿರುದ್ಧ ಮಿಲಿಟರಿ ಕಾರ್ಯಾಚರಣೆಗೆ ಆದೇಶಿಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಟೆಲಿವಿಷನ್ ಸ್ಟುಡಿಯೋವೊಂದರ ಮೇಲೆ ಮುಸುಕುಧಾರಿ ಬಂದೂಕುಧಾರಿಗಳು ದಾಳಿ ಮಾಡಿದ್ದು, ಭದ್ರತಾ ಪಡೆಗಳು ಮತ್ತು ನಾಗರಿಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

eqvador

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉನ್ನತ ಕೊಕೇನ್ ರಫ್ತುದಾರರಾದ ಕೊಲಂಬಿಯಾ ಮತ್ತು ಪೆರು ನಡುವಿನ ದೇಶವಾಗಿರುವ ಈಕ್ವೆಡಾರ್, ಇತ್ತೀಚಿನ ವರ್ಷಗಳಲ್ಲಿ ಮೆಕ್ಸಿಕನ್ ಮತ್ತು ಕೊಲಂಬಿಯಾದ ಕಾರ್ಟೆಲ್‌ಗಳ ಮೇಲೆ ನಿಯಂತ್ರಣ ಪಡೆಯುವ ಉದ್ದೇಶದಿಂದ ಈ ಹಿಂಸಾಚಾರ ಭುಗಿಲೆದ್ದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದೆ.

ಕ್ರಿಮಿನಲ್ ಗ್ಯಾಂಗ್‌ನ ನಾಯಕ ಜೋಸ್ ಅಡಾಲ್ಫೊ ಮಾಕಿಯಾಸ್ 34 ವರ್ಷಗಳ ಶಿಕ್ಷೆಯನ್ನು ಅನುಭವಿಸುತ್ತಿದ್ದರು. ಜೈಲಿನಿಂದ ತಪ್ಪಿಸಿಕೊಂಡ ನಂತರ ಅಧ್ಯಕ್ಷ ನೊಬೋವಾ ಸೋಮವಾರ ಈಕ್ವೆಡಾರ್‌ನಲ್ಲಿ 60 ದಿನಗಳ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

“ಡ್ರಗ್ ಮಾಫಿಯಾ ಹಾಗೂ ಕ್ರಿಮಿನಲ್ ಗುಂಪುಗಳನ್ನು ತಟಸ್ಥಗೊಳಿಸಲು ಮಿಲಿಟರಿ ಕಾರ್ಯಾಚರಣೆಗಳನ್ನು ನಡೆಸಲು ನಾನು ಸಶಸ್ತ್ರ ಪಡೆಗಳಿಗೆ ಆದೇಶಿಸಿದ್ದೇನೆ” ಎಂದು ಈಕ್ವೆಡಾರ್ ಅಧ್ಯಕ್ಷ ಡೇನಿಯಲ್ ನೊಬೊವಾ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.

ಬಂದೂಕುಗಳು ಮತ್ತು ಗ್ರೆನೇಡ್‌ಗಳೊಂದಿಗೆ ಶಸ್ತ್ರಸಜ್ಜಿತವಾದ ದಾಳಿಕೋರರು ಬಂದರು ನಗರವಾದ ಗುವಾಕ್ವಿಲ್‌ನಲ್ಲಿರುವ ಟಿಸಿ ಟೆಲಿವಿಷನ್‌ ಎಂಬ ಸುದ್ದಿ ಸಂಸ್ಥೆಯ ಸ್ಟುಡಿಯೋಗಳ ಮೇಲೆ ದಾಳಿ ನಡೆಸಿ, ಸರ್ಕಾರದ ವಿರುದ್ಧ ಬಂಡುಕೋರರು ಯುದ್ಧ ಘೋಷಿಸಿದ ಬಳಿಕ ಅಧ್ಯಕ್ಷ ಈ ಹೇಳಿಕೆ ನೀಡಿದ್ದಾರೆ.

ನೇರಪ್ರಸಾರದ ವೇಳೆಯೇ ಸ್ಟುಡಿಯೋಗೆ ನುಗ್ಗಿದ ಬಂಡುಕೋರರು!
ಟಿವಿ ಸ್ಟುಡಿಯೋದಲ್ಲಿ ನೇರಪ್ರಸಾರ ನಡೆಯುತ್ತಿರುವ ನಡುವೆಯೇ ಬಂಡುಕೋರರ ಗುಂಪು ಗನ್, ಬಾಂಬ್ ಹಿಡಿದು ನುಗ್ಗಿದೆ. ಫೈರಿಂಗ್ ಮಾಡುತ್ತಾ ನುಗ್ಗಿದ ಗುಂಪು, ನಿರೂಪಕ ಸೇರಿದಂತೆ ಎಲ್ಲ ಸಿಬ್ಬಂದಿಗಳನ್ನು ಒತ್ತೆಯಾಳಾಗಿಸಿ, ಅಪಹರಿಸಿದೆ.

ಗನ್ ಹಾಗೂ ಬಾಂಬ್ ಹಿಡಿದು ಟಿವಿ ಸ್ಟುಡಿಯೋಗೆ ನುಗ್ಗಿದ ಉಗ್ರರ ಗುಂಪು, ಫೈರಿಂಗ್ ಆರಂಭಿಸಿದಾಗ, ನಿರೂಪಕ ಶೂಟ್ ಮಾಡಬೇಡಿ ಪ್ಲೀಸ್ ಎಂದು ಅಂಗಲಾಚುತ್ತಿರುವ ದೃಶ್ಯ ವೈರಲ್ ಆಗಿದೆ. ಎಲ್ಲ ಸಿಬ್ಬಂದಿಗಳ ಕೈ ಕಾಲುಗಳನ್ನು ಸ್ಟುಡಿಯೋದಲ್ಲಿದ್ದ ಕೇಬಲ್ ವೈಯರ್ ಮೂಲಕ ಕಟ್ಟಿ ಅಪಹರಿಸಿದ್ದು, ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

equador news

ಮಹಿಳಾ ಸಿಬ್ಬಂದಿಗಳು ಶೂಟ್ ಮಾಡಬೇಡಿ ಎಂದು ಕಿರುಚಾಡುತ್ತಿರುವ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

13 ಮಂದಿಯ ಬಂಧನ: ಒತ್ತೆಯಾಳುಗಳ ಬಿಡುಗಡೆ

13 ಜನರನ್ನು ಬಂಧಿಸಲಾಗಿದೆ. ನಂತರ ಅಪಹರಿಸಲಾಗಿದ್ದ ಟಿವಿ ವಾಹಿನಿಯ ಎಲ್ಲ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಗುವಾಕ್ವಿಲ್‌ನ ಪೊಲೀಸರು ತಿಳಿಸಿದ್ದಾರೆ.

ಸದ್ಯ ದಕ್ಷಿಣ ಅಮೆರಿಕಾದ ದೇಶವಾಗಿರುವ ಈಕ್ವೆಡಾರ್‌ನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ. ಆಂತರಿಕ ಸಂಘರ್ಷದಲ್ಲಿ ಇಲ್ಲಿಯವರೆಗೆ 10 ಜನರ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...