ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿಯಿಂದ ದಾಳಿ: ರಾಹುಲ್ ಗಾಂಧಿ

Date:

ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ದೂರಿದ್ದಾರೆ.

ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇ.ಡಿ, ಸಿಬಿಐಗಳನ್ನು ಪ್ರತಿಪಕ್ಷಗಳನ್ನು ಹಳಿಯುವ ರಾಜಕೀಯ ಸಾಧನವಾಗಿ ಪರಿವರ್ತಿಸಿದೆ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ.

ವಾಸ್ತವಿಕವಾಗಿ ಬಿಜೆಪಿ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದರೆ ಹೆಚ್ಚಿನ ರಾಜಕೀಯ ಪ್ರಕರಣಗಳು ಆಡಳಿತ ಪಕ್ಷವನ್ನು ವಿರೋಧಿಸುವವರನ್ನು ಗುರಿಯಾಗಿಸಿಕೊಂಡಿವೆ. ಕಾಂಗ್ರೆಸ್ ಅನ್ನು ಬೆಂಬಲಿಸುವ ಉದ್ಯಮಿಗಳು ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಡಿಯಾ ಒಕ್ಕೂಟದ ಪಕ್ಷಗಳು ರಾಜ್ಯ ಮತ್ತು ಸ್ಥಳೀಯ ಚುನಾವಣೆಯಲ್ಲಿ ಪರಸ್ಪರ ಸ್ಪರ್ಧಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಇದು ಯುದ್ಧತಂತ್ರದ ಸ್ಪರ್ಧೆಗಳು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತಕ್ಕೆ ವಿರೋಧವಾಗಿ ಮೈತ್ರಿಕೂಟವು ಒಗ್ಗಟ್ಟಾಗಿ ಉಳಿದಿದೆ ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೇರಳಕ್ಕೂ ಕಾಲಿಟ್ಟಿತು, ಕೋಮುದ್ವೇಷಿ ಗುಂಪುಹತ್ಯೆಯ ಪಿಡುಗು!

ಒಬ್ಬ ವ್ಯಕ್ತಿಯ ಇಚ್ಛೆಗೆ ಅನುಗುಣವಾಗಿ ಭಾರತವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ನಂಬುವ ಲಕ್ಷಾಂತರ ಜನರಿದ್ದಾರೆ. ರಾಜ್ಯ ರಾಜ್ಯಗಳ ನಡುವಿನ ಸಂವಾದದ ಮೂಲಕ ದೇಶ ಕಾರ್ಯನಿರ್ವಹಿಸುವ ಮಾದರಿಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಪ್ರಧಾನಿ ಮೋದಿ ಅವರನ್ನು ಅನೇಕ ಜನರು ಬೆಂಬಲಿಸುತ್ತಾರೆ ಎಂದು ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಒಪ್ಪಿಕೊಂಡರು. ಆದರೆ ದೇಶದ ದೊಡ್ಡ ವರ್ಗವು ಅವರ ಸಿದ್ಧಾಂತ ಮತ್ತು ದೇಶದ ದೃಷ್ಟಿಕೋನವನ್ನು ಒಪ್ಪುವುದಿಲ್ಲ. ಈ ದೃಷ್ಟಿಕೋನವು ದೋಷಪೂರಿತವಾಗಿದೆ ಮತ್ತು ಆಳವಾದ ಸಾಮಾಜಿಕ ಉದ್ವಿಗ್ನತೆಯನ್ನು ಸೃಷ್ಟಿಸುವ ಅಪಾಯವಿದೆ ಎಂದು ಹೇಳಿದರು.

ಭಾರತದಲ್ಲಿ ಉತ್ಪಾದನೆ ಹೆಚ್ಚಳ ಮಾಡಿದರೆ ಉದ್ಯೋಗ ಹೆಚ್ಚಿಸಬಹುದು. ಆದರೆ ಬಿಜೆಪಿ ಅದಾನಿ, ಅಂಬಾನಿಗಳ ಕೈಗೆ ಅಧಿಕಾರ ನೀಡಿದೆ. ಭಾರತದಲ್ಲಿ ಹೆಚ್ಚಿನವರು ಚೀನೀ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ.ಈಗ ಇರುವ ಜಿಎಸ್‌ಟಿ ಸಂಪೂರ್ಣ ಉತ್ಪಾದಕ ಮತ್ತು ಗ್ರಾಹಕ ವಿರೋಧಿಯಾಗಿದೆ ಎಂದು ಟೀಕಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...