ಗಾಝಾ ಮೇಲೆ ಇಸ್ರೇಲ್ ಬಾಂಬ್ ದಾಳಿ: ವಿಶ್ವಸಂಸ್ಥೆಯ 11 ಸಿಬ್ಬಂದಿ ಬಲಿ

Date:

ಇಸ್ರೇಲ್ ಮೇಲೆ ಕಳೆದ ಶನಿವಾರ ಹಮಸ್ ದಾಳಿಯನ್ನು ಪ್ರಾರಂಭಿಸಿದಾಗಿನಿಂದ ಗಾಝಾ ಮೇಲೆ ನಿರಂತರವಾಗಿ ಇಸ್ರೇಲ್ ಬಾಂಬ್ ಸುರಿಯುತ್ತಿರುವುದರಿಂದ ವಿಶ್ವಸಂಸ್ಥೆಯ 11 ಸಿಬ್ಬಂದಿ ಬಲಿಯಾಗಿರುವುದಾಗಿ ‘ರಾಯಿಟರ್ಸ್‌’ ಸುದ್ದಿ ಸಂಸ್ಥೆ ವರದಿ ಮಾಡಿದೆ.

‘ಕನಿಷ್ಠ 11 ಸಿಬ್ಬಂದಿ ಮತ್ತು ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಗಳ ಮೇಲೂ ಇಸ್ರೇಲ್ ಬಾಂಬ್ ಸುರಿದ ಪರಿಣಾಮ 30 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ’ ಎಂದು ವಿಶ್ವಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

‘ಹಮಸ್ ದಾಳಿಯ ಬಳಿಕ ಇಸ್ರೇಲ್ ಗಾಝಾದ ಮೇಲೆ ನಿರಂತರವಾಗಿ ಬಾಂಬ್ ಸುರಿಸುತ್ತಿದೆ. ಕಳೆದ ಶನಿವಾರದಿಂದ ಯುಎನ್‌ಡಬ್ಲ್ಯೂಆರ್‌ಎಯ 11 ಮಂದಿ ಮೃತಪಟ್ಟಿದ್ದಾರೆ. ಅವರೆಲ್ಲರೂ ಪ್ಯಾಲೆಸ್ತೀನಿನ ನಿರಾಶ್ರಿತರಿಗಾಗಿ ಸೇವೆ ಸಲ್ಲಿಸುತ್ತಿದ್ದರು. ವಿಶ್ವಸಂಸ್ಥೆಯ ಶಾಲೆಯಲ್ಲಿ ಕಲಿಯುತ್ತಿದ್ದ 30 ವಿದ್ಯಾರ್ಥಿಗಳು ಮೃತಪಟ್ಟರೆ, ಎಂಟು ಮಂದಿ ಗಾಯಗೊಂಡಿದ್ದಾರೆ” ಎಂದು ಯುಎನ್ ವಕ್ತಾರ ಸ್ಟೀಫನ್ ಡುಜಾರಿಕ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತಪಟ್ಟ 11 ಮಂದಿ ವಿಶ್ವಸಂಸ್ಥೆಯ ಸಿಬ್ಬಂದಿಗಳ ಪೈಕಿ ಐವರು ಶಿಕ್ಷಕರು, ಸ್ತ್ರೀರೋಗ ತಜ್ಞರು, ಎಂಜಿನಿಯರ್, ಸಲಹೆಗಾರರು ಮತ್ತು ಮೂವರು ಸಹಾಯಕ ಸಿಬ್ಬಂದಿ ಸೇರಿದ್ದಾರೆ ಎಂದು ಯುಎನ್‌ಆರ್‌ಡಬ್ಲ್ಯುಎಯ ಉಪ ನಿರ್ದೇಶಕಿ ಜೆನ್ನಿಫರ್ ಆಸ್ಟಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಜನರ ಸೇವೆ ಮಾಡುತ್ತಿದ್ದ ವಿಶ್ವಸಂಸ್ಥೆಯ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ನಮ್ಮನ್ನು ತುಂಬಾ ದುಃಖಕ್ಕೀಡು ಮಾಡಿದೆ. ಸಿಬ್ಬಂದಿಗಳ ಕುಟುಂಬದೊಂದಿಗೆ ನಾವು ನಿಲ್ಲುತ್ತೇವೆ. ಇಸ್ರೇಲ್ ಜನವಸತಿ ಇರುವ ಸ್ಥಳಗಳಲ್ಲಿ ಬಾಂಬ್ ಹಾಕುವುದನ್ನು ನಿಲ್ಲಿಸಬೇಕು. ವಿಶ್ವಸಂಸ್ಥೆ ಈ ಬಗ್ಗೆ ತುರ್ತು ಗಮನ ನೀಡಬೇಕು” ಎಂದು ತಿಳಿಸಿದ್ದಾರೆ.

ಹಮಸ್ ಅನ್ನು ಗುರಿಯಾಗಿರಿಸಿಕೊಂಡು ಇಸ್ರೇಲ್ ನಿರಂತರವಾಗಿ ವೈಮಾನಿಕ ದಾಳಿ ನಡೆಸುತ್ತಿದೆ. ಈವರೆಗೆ ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನ್ ನಾಗರಿಕರು ಬಲಿಯಾಗಿದ್ದು, 2500 ಸಾವಿರಕ್ಕೂ ಮಂದಿ ಗಾಯಾಳುಗಳಾಗಿದ್ದಾರೆ. ಸುಮಾರು 2,50,000 ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದಿದ್ದು, ನಿರಾಶ್ರಿತರೆಲ್ಲರೂ ವಿಶ್ವಸಂಸ್ಥೆಯ ಏಜೆನ್ಸಿ ನಡೆಸುತ್ತಿರುವ ಶಾಲೆಗಳಲ್ಲಿ ಕಿಕ್ಕಿರಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...