ಟೆಸ್ಲಾ ಕಾರಣ; ಭಾರತ ಭೇಟಿ ಮುಂದೂಡಿದ ಎಲಾನ್ ಮಸ್ಕ್!

Date:

ಟೆಸ್ಲಾ ಸಿಇಒ, ವಿಶ್ವದ ಮೂರನೇ ಅತೀ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ತಮ್ಮ ಎರಡು ದಿನಗಳ ಭಾರತ ಭೇಟಿಯನ್ನು ಮುಂದೂಡಿದ್ದಾರೆ. ಮಸ್ಕ್ ಏಪ್ರಿಲ್ 21 ಮತ್ತು 22 ರಂದು ಭಾರತಕ್ಕೆ ಭೇಟಿ ನೀಡಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಬೇಕಿತ್ತು. ಜೊತೆಗೆ ಭಾರತದ ಮಾರುಕಟ್ಟೆಗೆ ಟೆಸ್ಲಾ ಪ್ರವೇಶದ ಬಗ್ಗೆ ಘೋಷಿಸುವ ನಿರೀಕ್ಷೆಯಿತ್ತು.

ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಎಲಾನ್ ಮಸ್ಕ್, ಭಾರತಕ್ಕೆ ತನ್ನ ಭೇಟಿಯನ್ನು “ಟೆಸ್ಲಾದಲ್ಲಿ ಭಾರೀ ಒತ್ತಡದ ಕೆಲಸದ ಕಾರಣ” ವಿಳಂಬಗೊಳಿಸಬೇಕಾಯಿತು ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದುರದೃಷ್ಟವಶಾತ್, ಟೆಸ್ಲಾದಲ್ಲಿ ಭಾರೀ ಒತ್ತಡದ ಕೆಲಸದ ಕಾರಣ ಭಾರತಕ್ಕೆ ಭೇಟಿ ನೀಡುವುದು ವಿಳಂಬವಾಗುತ್ತದೆ. ಆದರೆ ಈ ವರ್ಷದಲ್ಲೇ ಭಾರತಕ್ಕೆ ಭೇಟಿ ನೀಡಲು ನಾನು ಕಾಯುತ್ತಿದ್ದೇನೆ” ಎಂದು ಸ್ಪೇಸ್‌ಎಕ್ಸ್‌ ಸಿಇಒ ಕೂಡಾ ಆದ ಎಲಾನ್ ಮಸ್ಕ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  2024ರಲ್ಲಿ 40 ಬಿಲಿಯನ್ ಡಾಲರ್ ಕಳೆದುಕೊಂಡ ಎಲಾನ್ ಮಸ್ಕ್; ಬಿಲಿಯನೇರ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ!

ಇನ್ನು ಟೆಸ್ಲಾದ ಮೊದಲ ತ್ರೈಮಾಸಿಕ ವರದಿಯ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಲು ಎಲಾನ್ ಮಸ್ಕ್ ಅವರು ಏಪ್ರಿಲ್ 23 ರಂದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಕಾನ್ಫರೆನ್ಸ್‌ಗೆ ಹಾಜರಾಗಬೇಕು ಎಂದು ವರದಿಯಾಗಿದೆ.

ಈ ತಿಂಗಳಲ್ಲೇ ಎಕ್ಸ್‌ ಮಾಲೀಕ ಎಲಾನ್ ಮಸ್ಕ್ ಮತ್ತು​ ಪ್ರಧಾನಿ ನರೇಂದ್ರ ಮೋದಿ ಭೇಟಿ ನಿಗದಿಯಾಗಿದ್ದು ಕಳೆದ ವಾರವಷ್ಟೇ ಟೆಸ್ಲಾ ಸಂಸ್ಥಾಪಕ ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದರು. ಆದರೆ ಈಗ ಟೆಸ್ಲಾದ ತ್ರೈಮಾಸಿಕ ವರದಿಯ ಕಾರಣ ನೀಡಿ ಈ ಭೇಟಿ ಮುಂದೂಡಲಾಗಿದೆ. ಅದು ಕೂಡಾ ಒಂದು ಸಂಸ್ಥೆಯ ಮುಖ್ಯಸ್ಥರಾಗಿರುವವರ ದಿನಚರಿ ಮೂರು ತಿಂಗಳ ಮುನ್ನವೇ ನಿಗದಿಯಾಗಿರುತ್ತದೆ. ಹಾಗಿರುವಾಗ ಈ ಭಾರತ ಭೇಟಿ ಮುಂದೂಡಿಕೆ ಅಸಹಜ ಎಂಬ ಮಾತು ಕೂಡ ಕೇಳಿಬರುತ್ತಿದೆ.

ಇದನ್ನು ಓದಿದ್ದೀರಾ?  ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ನೀಡದಿರುವುದು ಅವಿವೇಕತನ: ಎಲಾನ್ ಮಸ್ಕ್

ಇನ್ನು ಈ ಭೇಟಿಯ ಮೂಲ ಉದ್ದೇಶ ಭಾರತದಲ್ಲಿ ಟೆಸ್ಲಾ ಇವಿ ಘಟಕ ಸ್ಥಾಪನೆಯ ಬಗ್ಗೆ ಚರ್ಚೆಯಾಗಿತ್ತು. ಜೊತೆಗೆ ತಮ್ಮ ಸಾಟಲೈಟ್​​ ಇಂಟರ್​ನೆಟ್​ ಸೇವೆ ಸ್ಟಾರ್​ಲಿಂಕ್​ ಪ್ರವೇಶದ ಕುರಿಯೂ ಚರ್ಚಿಸಲಿದ್ದಾರೆ ಎಂದು ಹೇಳಲಾಗಿತ್ತು. ಇನ್ನು ಪ್ರಧಾನಿ ಮಾತ್ರವಲ್ಲದೆ ಮಸ್ಕ್​ ಭಾರತೀಯ ಬಾಹ್ಯಾಕಾಶ ಕಂಪನಿಗಳ ಪ್ರತಿನಿಧಿಗಳನ್ನು ಭೇಟಿ ಮಾಡಲು ನಿರ್ಧರಿಸಿದ್ದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...