ಕೆನಡಾದಲ್ಲಿ ಭಾರತೀಯರ ಸುರಕ್ಷತೆ ಬಗ್ಗೆ ನೂತನ ಹೈಕಮಿಷನರ್ ಕಳವಳ

Date:

ಕೆನಡಾದಲ್ಲಿ ವಾಸಿಸುತ್ತಿರುವ ಭಾರತೀಯರ ಸುರಕ್ಷತೆಯ ಬಗ್ಗೆ ಭಾರತದ ನೂತನ ಹೈಕಮಿಷನರ್ ದಿನೇಶ್ ಕೆ ಪಟ್ನಾಯಕ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಸಿಟಿವಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂದರೆ, ರಾಯಭಾರಿಯಾಗಿರುವ ನನಗೂ ಭದ್ರತೆ ಅಗತ್ಯವಾಗಿದೆ” ಎಂದು ಹೇಳಿದ್ದಾರೆ. ಈ ಹೇಳಿಕೆಯು ಇತ್ತೀಚಿನ ದಿನಗಳಲ್ಲಿ ಕೆನಡಾದಲ್ಲಿ ಭಾರತೀಯ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿಗಳು ಮತ್ತು ಅಸುರಕ್ಷಿತ ವಾತಾವರಣದ ಬಗ್ಗೆ ಚರ್ಚೆಯನ್ನು ತೀವ್ರಗೊಳಿಸಿದೆ.

ದಿನೇಶ್ ಪಟ್ನಾಯಕ್ ಅವರು 1990ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿಯಾಗಿದ್ದು, ಸ್ಪೇನ್‌ನಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ ನಂತರ ಆಗಸ್ಟ್ 2025ರಲ್ಲಿ ಕೆನಡಾದ ಹೈಕಮಿಷನರ್ ಆಗಿ ನೇಮಕಗೊಂಡರು. ಭಾರತ-ಕೆನಡಾ ಸಂಬಂಧಗಳು ಹರ್‌ದೀಪ್‌ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದ ಆರೋಪಗಳಿಂದಾಗಿ ಕಳೆದ ವರ್ಷಗಳಲ್ಲಿ ತೀವ್ರ ಹದಗೆಟ್ಟಿದ್ದವು. ಆದರೆ ಇತ್ತೀಚೆಗೆ ಉಭಯ ದೇಶಗಳು ಸಂಬಂಧಗಳನ್ನು ಸಾಮಾನ್ಯಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿವೆ. ಕೆನಡಾದ ಹೊಸ ಪ್ರಧಾನಿ ಮಾರ್ಕ್ ಕಾರ್ನೆಯವರ ನಾಯಕತ್ವದಲ್ಲಿ ಈ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಪಟ್ನಾಯಕ್ ಅವರ ನೇಮಕವು ಇದಕ್ಕೆ ಸಾಕ್ಷಿಯಾಗಿದೆ.

ಪಟ್ನಾಯಕ್ ಅವರು ಸಂದರ್ಶನದಲ್ಲಿ, “ಇಲ್ಲಿರುವ ಭಾರತೀಯರಿಗೆ ಕೆನಡಾ ಸುರಕ್ಷಿತವೇ? ಕೆನಡಾ ಸ್ವತಃ ಸುರಕ್ಷಿತವೇ? ಏಕೆಂದರೆ ಕೆನಡಾ ಇದನ್ನು ಭಾರತೀಯರ ಸಮಸ್ಯೆಯಾಗಿ ನೋಡಬಾರದು. ಇದು ಕೆನಡಾದ ಸಮಸ್ಯೆ. ದಕ್ಷಿಣ ಏಷ್ಯನ್ನರು ಮತ್ತು ಭಾರತೀಯರು ಇಲ್ಲಿ ಅಭದ್ರತೆಯನ್ನು ಎದುರಿಸುತ್ತಿದ್ದಾರೆ. ಭಾರತದಲ್ಲಿ ಕೆನಡಾದ ಹೈಕಮಿಷನರ್‌ಗೆ ಭದ್ರತೆ ಅಗತ್ಯವಿಲ್ಲ. ಆದರೆ ಕೆನಡಾದಲ್ಲಿ ಭಾರತೀಯ ಹೈಕಮಿಷನರ್‌ಗೆ ಭದ್ರತೆಯ ಅಗತ್ಯವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಘಪರಿವಾರದ ಹುನ್ನಾರಗಳನ್ನು ಅರಿತ ದಲಿತರು

ಈ ಆತಂಕಕ್ಕೆ ಕಾರಣವಾಗಿರುವ ಪ್ರಮುಖ ಘಟನೆಗಳಲ್ಲಿ ಒಂದು ವ್ಯಾಂಕೋವರ್‌ನಲ್ಲಿ ಭಾರತೀಯ ಮೂಲದ ಕೆನಡಿಯನ್ ಪ್ರಜೆ ಕಪಿಲ್ ಶರ್ಮಾ ಅವರ ಕೆಫೆ ಮೇಲೆ ನಡೆದ ದಾಳಿ. ಪಟ್ನಾಯಕ್ ಅವರು ಉಲ್ಲೇಖಿಸಿದಂತೆ, “ವ್ಯಾಂಕೋವರ್‌ನಲ್ಲಿ ಇಂದು ಮೂರನೇ ಬಾರಿ ಒಂದು ರೆಸ್ಟೋರೆಂಟ್ ಮೇಲೆ ದಾಳಿ ನಡೆದಿದೆ. ರೆಸ್ಟೋರೆಂಟ್ ಮಾಲೀಕರಾಗಿರುವ ಭಾರತೀಯರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಇದು ಇತ್ತೀಚಿನ ದಿನಗಳಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ಹಲವು ದಾಳಿಗಳಲ್ಲಿ ಒಂದು. ಕೆನಡಾದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ಈ ದಾಳಿಗಳ ಹಿಂದೆ ಬಿಷ್ನೋಯ್ ಗ್ಯಾಂಗ್ ಮತ್ತು ಖಲಿಸ್ತಾನಿ ಉಗ್ರರ ಸಂಬಂಧವಿರುವುದಾಗಿ ಆರೋಪಗಳಿವೆ.

ಕೆನಡಾದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ವಾಸಿಸುತ್ತಿದ್ದಾರೆ. ಆದರೆ 2024ರಲ್ಲಿ 1,997 ಭಾರತೀಯರನ್ನು ಬಲವಂತವಾಗಿ ದೇಶಭ್ರಷ್ಟರನ್ನಾಗಿ ಮಾಡಲಾಗಿದ್ದು, 2025ರ ಜುಲೈ ವರೆಗೆ 1,891 ಮಂದಿಯನ್ನು ಹೊರದೂಡಲಾಗಿದೆ ಎಂದು ಕೆನಡಾ ಬಾರ್ಡರ್ ಸರ್ವಿಸಸ್ ಏಜೆನ್ಸಿ (ಸಿಬಿಎಸ್‌ಎ) ಮಾಹಿತಿ ತಿಳಿಸಿದೆ. ಇದು 2019ರಲ್ಲಿ 625ರಿಂದ ತೀವ್ರ ಹೆಚ್ಚಳವನ್ನು ತೋರಿಸುತ್ತದೆ. ಇದರ ಜೊತೆಗೆ, ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ಮತ್ತು ಸಾವುಗಳಿಂದಾಗಿ (2024ರಲ್ಲಿ ಕನಿಷ್ಠ 172 ಮಂದಿ ಕೆನಡಾದಲ್ಲಿ ಮೃತಪಟ್ಟಿದ್ದಾರೆ) ಸಮುದಾಯದಲ್ಲಿ ಭಯದ ವಾತಾವರಣ ಸೃಷ್ಟಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...