ಇಥಿಯೋಪಿಯಾ | ಭಾರೀ ಮಳೆಯಿಂದ ಭೂಕುಸಿತ; ಕನಿಷ್ಠ 229 ಜನರ ಸಾವು

Date:

ಆಫ್ರಿಕಾದ ನೈಋತ್ಯ ಇಥಿಯೋಪಿಯಾದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಕನಿಷ್ಠ 229 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೆಂಚೋ ಶಾಚಾ ಗೊಜ್ಡಿ ಜಿಲ್ಲೆಯ ಅಧಿಕಾರಿಗಳು ಮಂಗಳವಾರ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಎಚ್ಚರಿಸಿದ್ದಾರೆ.

ಮೃತರಲ್ಲಿ ಅಧಿಕ ಮಂದಿ ರಕ್ಷಣಾ ಸಿಬ್ಬಂದಿಗಳಾಗಿದ್ದಾರೆ. ಭೂಕುಸಿತದಿಂದಾಗಿ ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯಚರಣೆ ಮಾಡುವ ಸಂದರ್ಭದಲ್ಲಿ ಮತ್ತೊಂದು ಭೂಕುಸಿತ ಉಂಟಾಗಿದ್ದು, ರಕ್ಷಣಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕ ಜನರು ಪತ್ತೆಯಾಗಿಲ್ಲ ಎಂದು ಗೋಫಾ ವಲಯದ ವಿಪತ್ತು ನಿರ್ವಹಣಾ ಸಂಸ್ಥೆಯ ನಿರ್ದೇಶಕ ಮಾರ್ಕೋಸ್ ಮೆಲೆಸೆ ಹೇಳಿದ್ದಾರೆ.

“ಅಪಘಾತದಿಂದಾಗಿ ತಾಯಿ, ತಂದೆ, ಸಹೋದರ ಮತ್ತು ಸಹೋದರಿ ಸೇರಿದಂತೆ ಇಡೀ ಕುಟುಂಬವನ್ನು ಕಳೆದುಕೊಂಡಿರುವ ಮಕ್ಕಳು ಶವಗಳನ್ನು ತಬ್ಬಿಕೊಳ್ಳುತ್ತಿದ್ದಾರೆ” ಎಂದು ಮಾರ್ಕೋಸ್ ಮೆಲೆಸೆ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋಫಾ ವಲಯ ಪ್ರಾಧಿಕಾರವು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಚಿತ್ರಗಳು ಕೆಂಪು ಮಣ್ಣಿನಲ್ಲಿ ಜನಸಮೂಹ ನಿಂತಿರುವುದನ್ನು ಮತ್ತು ಕೆಲವರು ರಕ್ಷಣಾ ಪ್ರಯತ್ನಗಳಲ್ಲಿ ತಮ್ಮ ಕೈಗಳನ್ನೇ ಬಳಸಿ ಅಗೆಯುತ್ತಿರುವುದು ಕಾಣಬಹುದಾಗಿದೆ.

ಇದನ್ನು ಓದಿದ್ದೀರಾ?  ನೇಪಾಳದಲ್ಲಿ ಭೂಕುಸಿತದಿಂದ ನದಿಗೆ ಉರುಳಿದ ಬಸ್: 65 ಮಂದಿ ನಾಪತ್ತೆ, 7 ಭಾರತೀಯರು ಸಾವು

ಆಫ್ರಿಕನ್ ಯೂನಿಯನ್ ಆಯೋಗದ ಅಧ್ಯಕ್ಷರಾದ ಮೌಸಾ ಫಕಿ ಮಹಮತ್, “ನಮ್ಮ ಪ್ರಾರ್ಥನೆ ಸಂತ್ರಸ್ತರ ಕುಟುಂಬಗಳೊಂದಿಗೆ ಇವೆ. ರಕ್ಷಣಾ ಪ್ರಯತ್ನಗಳು ಕಾಣೆಯಾದವರನ್ನು ಹುಡುಕಲು ಮತ್ತು ಸ್ಥಳಾಂತರಗೊಂಡವರಿಗೆ ಸಹಾಯ ಮಾಡುತ್ತದೆ. ನಾವು ಇಥಿಯೋಪಿಯಾದ ಜನರು ಮತ್ತು ಸರ್ಕಾರದೊಂದಿಗೆ ಬಲವಾದ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಗೋಫಾ ವಲಯವು ದಕ್ಷಿಣ ಇಥಿಯೋಪಿಯಾ ಪ್ರಾದೇಶಿಕ ರಾಜ್ಯದಲ್ಲಿ ಪರ್ವತ ಪ್ರದೇಶವಾಗಿದೆ. ಇಲ್ಲಿ ಏಪ್ರಿಲ್ ಮತ್ತು ಮೇ ನಡುವೆ ಸುರಿದ ಮಳೆಯು ಪ್ರವಾಹಕ್ಕೆ ಕಾರಣವಾಗಿದ್ದು ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

2016ರಲ್ಲಿ, ದಕ್ಷಿಣ ಇಥಿಯೋಪಿಯಾದ ಮತ್ತೊಂದು ಪ್ರದೇಶವಾದ ವೊಲೈಟಾದಲ್ಲಿ ಧಾರಾಕಾರ ಮಳೆಯ ನಂತರ ಮಣ್ಣಿನ ಕುಸಿತದಲ್ಲಿ 41 ಜನರು ಸಾವನ್ನಪ್ಪಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...