ನೇಪಾಳದಲ್ಲಿ ಗಲಭೆ: ಉದ್ರಿಕ್ತರಿಂದ ರಾಜಕೀಯ ನಾಯಕರ ಮನೆಗೆ ಬೆಂಕಿ, ಮಾಜಿ ಪ್ರಧಾನಿ ಪತ್ನಿ ಸಾವು

Date:

ನೇಪಾಳದ ಮಾಜಿ ಪ್ರಧಾನಮಂತ್ರಿ ಝಲನಾಥ್ ಖನಾಲ್ ಅವರ ಪತ್ನಿ ರಾಜ್ಯಲಕ್ಷ್ಮೀ ಚಿತ್ರಕಾರ್ ಅವರು ಗಲಭೆಕಾರರಿಂದ ತಮ್ಮ ಮನೆಗೆ ಬೆಂಕಿ ಹಚ್ಚಿದ ಪರಿಣಾಮವಾಗಿ ಜೀವಂತವಾಗಿ ಸುಟ್ಟು ಮೃತಪಟ್ಟಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಈ ಘಟನೆ ಕಠ್ಮಂಡುವಿನ ದಲ್ಲು ಪ್ರದೇಶದಲ್ಲಿ ನಡೆದಿದೆ. ರಾಜ್ಯಲಕ್ಷ್ಮಿ ಅವರನ್ನು ಕೀರ್ತಿಪುರ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆಯ ವೇಳೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನೇಪಾಳದ ಪ್ರಧಾನಮಂತ್ರಿ ಕೆ ಪಿ ಶರ್ಮಾ ಒಲಿ ಅವರ ಸರ್ಕಾರವು ಫೇಸ್‌ಬುಕ್, ಎಕ್ಸ್, ಮತ್ತು ಯೂಟ್ಯೂಬ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳನ್ನು ಸೋಮವಾರ ರಾತ್ರಿಯವರೆಗೆ ನಿಷೇಧಿಸಿತ್ತು. ಈ ನಿಷೇಧವನ್ನು ರದ್ದುಗೊಳಿಸಿದರೂ, ಯುವಕರ ನೇತೃತ್ವದ “ಜನರೇಷನ್ ಜೆಡ್” ಪ್ರತಿಭಟನೆಗಳು ತೀವ್ರಗೊಂಡವು. ಪ್ರತಿಭಟನಾಕಾರರು ದೇಶದ ರಾಜಕೀಯ ಮುಖಂಡರ ಮನೆಗಳಿಗೆ ಮತ್ತು ಸಂಸತ್ ಭವನಕ್ಕೆ ಬೆಂಕಿ ಹಚ್ಚಿದರು. ಪೊಲೀಸರ ಗುಂಡಿನ ದಾಳಿಯಿಂದ 19 ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಹೇಳಿದ್ದನ್ನೆಲ್ಲ ಮೋದಿ ಮಾಡುತ್ತಿದ್ದಾರಲ್ಲ?

ಗಲಭೆಯ ತೀವ್ರತೆಯನ್ನು ಅರಿತ ಪ್ರಧಾನಮಂತ್ರಿ ಕೆ.ಪಿ. ಶರ್ಮಾ ಒಲಿ ಹಾಗೂ ರಾಷ್ಟ್ರಪತಿ ರಾಮ್ ಚಂದ್ರ ಪೌಡೆಲ್ ಅವರು ತಕ್ಷಣವೇ ರಾಜೀನಾಮೆ ಸಲ್ಲಿಸಿದ್ದಾರೆ. ಈ ಗಲಭೆಯಲ್ಲಿ ಒಲಿ ಅವರ ಮನೆಗೂ ಬೆಂಕಿ ಹಚ್ಚಲಾಗಿದೆ. ಇದೇ ವೇಳೆ, ಆರ್ಥಿಕ ಸಚಿವ ಬಿಷ್ಣು ಪ್ರಸಾದ್ ಪೌಡೆಲ್ (65) ಅವರನ್ನು ಕಠ್ಮಂಡುವಿನ ಬೀದಿಗಳಲ್ಲಿ ಕಾಲಿನಿಂದ ಒದ್ದು ಥಳಿಸಲಾಗಿದೆ ಎಂದು ಒಂದು ವೀಡಿಯೊ ತೋರಿಸುತ್ತದೆ.

ಸಾಮಾಜಿಕ ಜಾಲತಾಣಗಳ ನಿಷೇಧದಿಂದ ಆರಂಭವಾದ ಪ್ರತಿಭಟನೆಗಳು, ರಾಜಕೀಯ ಭ್ರಷ್ಟಾಚಾರ ಮತ್ತು ರಾಜಕೀಯ ಮುಖಂಡರ ಮಕ್ಕಳಿಗೆ ಐಷಾರಾಮಿ ಜೀವನಶೈಲಿಯ ಜೊತೆಗೆ ಉದ್ಯೋಗಾವಕಾಶಗಳ ಕೊರತೆಯಿಂದ ಯುವಕರ ಆಕ್ರೋಶಕ್ಕೆ ಕಾರಣವಾಗಿವೆ. ಈ ಕಾರಣದಿಂದಾಗಿ ಪ್ರತಿಭಟನೆಗಳು ದೇಶಾದ್ಯಂತ ತೀವ್ರಗೊಂಡಿವೆ.

ನೇಪಾಳದ ಗಲಭೆಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ತನ್ನ ನಾಗರಿಕರಿಗೆ ಪರಿಸ್ಥಿತಿ ಸ್ಥಿರವಾಗುವವರೆಗೂ ನೇಪಾಳಕ್ಕೆ ಪ್ರಯಾಣಿಸದಂತೆ ಸೂಚಿಸಿದೆ. ಏರ್ ಇಂಡಿಯಾ, ಇಂಡಿಗೋ ಮತ್ತು ನೇಪಾಳ ಏರ್‌ಲೈನ್ಸ್ ಸಂಸ್ಥೆಗಳು ದೆಹಲಿಯಿಂದ ಕಠ್ಮಂಡುವಿಗೆ ತಮ್ಮ ವಿಮಾನ ಸೇವೆಗಳನ್ನು ರದ್ದುಗೊಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...