ಭಾರತೀಯ ತರುಣನನ್ನು ಪಾಕ್ ಜೈಲು ತಲುಪಿಸಿತು ಫೇಸ್ಬುಕ್ ಪ್ರೇಮ!

Date:

ಭಾರತ-ಪಾಕಿಸ್ತಾನವೆಂಬ ಅವಳಿ ದೇಶಗಳು ರಾಜಕೀಯವಾಗಿ ಪರಸ್ಪರ ಬದ್ಧ ವೈರಿಗಳು. ಆದರೆ ಎರಡೂ ದೇಶಗಳ ಯುವಕ-ಯುವತಿಯರ ಪ್ರೇಮ ಪ್ರಕರಣಗಳು ಸರಹದ್ದಿನ ಗೆರೆಗಳನ್ನು ಆಗಾಗ ಅಳಿಸಿ ಹಾಕಿ ಸುದ್ದಿ ಮಾಡುತ್ತಲೇ ಇರುತ್ತವೆ. ಯುವಕ-ಯುವತಿಯರು ಪಡಬಾರದ ಪಾಡು ಪಟ್ಟು ಉಭಯ ದೇಶಗಳ ಗಡಿಗಳನ್ನು ದಾಟಿ ಪ್ರೇಮಿಗಳನ್ನು ಅರಸುವ ನಿದರ್ಶನಗಳು ನೂರಾರು.

ತನ್ನ ನಾಲ್ಕು ಚಿಕ್ಕ ಮಕ್ಕಳ ಜೊತೆ ಗಡಿ ದಾಟಿ ಬಂದು ದೆಹಲಿಯ ಹೊರವಲಯದ ಸಚಿನ್ ಎಂಬ ತನ್ನ ಪ್ರೇಮಿಯನ್ನು ಕೂಡಿಕೊಂಡಿದ್ದ ಪಾಕಿಸ್ತಾನಿ ಯುವತಿಯೊಬ್ಬಳನ್ನು ಪೊಲೀಸರು 2023ರಲ್ಲಿ ಬಂಧಿಸಿದ್ದರು. ಪಾಕಿಸ್ತಾನದಿಂದ ನೇಪಾಳ ತಲುಪಿ ಅಲ್ಲಿಂದ ಭಾರತವನ್ನು ಪ್ರವೇಶಿಸಿದ್ದಳು ಈ ಯುವತಿ.

ಇದೀಗ ಇಂತಹುದೇ ಮಗದೊಂದು ಪ್ರೇಮಪ್ರಕರಣ ವರದಿಯಾಗಿದೆ. ಈ ಸಲದ ಸರದಿ ಉತ್ತರಪ್ರದೇಶದ ಅಲೀಗಢ ಜಿಲ್ಲೆಯ ತರುಣ ಬಾದಲ್ ಬಾಬುವಿನದು. ಪಾಕಿಸ್ತಾನದ ಪಂಜಾಬ್ ರಾಜ್ಯದ ಮಂಡಿ ಬಹಾವುದ್ದೀನ್ ಎಂಬ ಪಟ್ಟಣದ ಜೈಲು ಕಂಬಿ ಎಣಿಸುತ್ತಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅಪರಿಚಿತ ತರುಣನ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಬುವನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಮಂಡಿ ಬಹಾವುದ್ದೀನ್ ನ ಯುವತಿಯೊಬ್ಬಳ ಜೊತೆ ಭಾರತದ ಬಾದಲ್ ಬಾಬು ಫೇಸ್ಬುಕ್ ನಲ್ಲಿ ಗೆಳೆತನ ಬೆಳೆಸಿದ್ದಾನೆ. ಗೆಳೆತನ ಪ್ರೇಮದ ತಿರುವು ಪಡೆದಿದೆ. ಈ ಯುವತಿ ತೀವ್ರ ಧಾರ್ಮಿಕ ಕುಟುಂಬವೊಂದಕ್ಕೆ ಸೇರಿದವಳು. ಪಾಕಿಸ್ತಾನದ ಪೊಲೀಸರು ಈಕೆಯ ಕುಟುಂಬವನ್ನು ವಿಚಾರಣೆಗೆ ಕರೆದಿಲ್ಲ.

“ಬಟ್ಟೆ ಹೊಲಿಯುವ ಕೆಲಸಕ್ಕೆಂದು ದಿಲ್ಲಿಗೆ ಹೋಗಿದ್ದ ನಮ್ಮ ಮಗ. ದೀಪಾವಳಿಗೆ ಇನ್ನೂ 15 ದಿನ ಬಾಕಿ ಇರುವಂತೆಯೇ ಅಲ್ಲಿಂದ ಮತ್ತೆಲ್ಲಿಗೋ ಹೋಗಿದ್ದಾನೆ. ಒಮ್ಮೆ ಅವನೇ ಫೋನ್ ಮಾಡಿ ಗೆಳೆಯನ ಫೋನಿನಿಂದ ಮಾತಾಡುತ್ತಿರುವುದಾಗಿಯೂ, ತನ್ನ ಬಗ್ಗೆ ಚಿಂತೆ ಮಾಡಬಾರದೆಂದೂ ತಿಳಿಸಿದ್ದ. ಮತ್ತೊಮ್ಮೆ ವಿಡಿಯೋ ಕಾಲ್ ಮಾಡಿ ದುಬೈನಲ್ಲಿರುವುದಾಗಿ ಹೇಳಿದ್ದ” ಎನ್ನುತ್ತಾರೆ ಬಾದಲ್‌ನ ಪೋಷಕರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...