ಟೆಕ್ಸಾಸ್‌ನಲ್ಲಿ ಭೀಕರ ಪ್ರವಾಹ: 50 ಮಂದಿ ಸಾವು – ಹತ್ತಾರು ಜನ ನಾಪತ್ತೆ; ಡ್ರೋಣ್ ವಿಡಿಯೋ ವೈರಲ್

Date:

ಅಮೆರಿಕದ ಸೆಂಟ್ರಲ್ ಟೆಕ್ಸಾಸ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಹಠಾತ್ ಪ್ರವಾಹ ಸಂಭವಿಸಿವೆ. ಡಾಲುಪೆ ನದಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದ್ದು, ಕೆಲವೇ ನಿಮಿಷಗಳಲ್ಲಿ 26 ಅಡಿಗಳಷ್ಟು ನೀರಿನ ಹರಿವು ಹೆಚ್ಚಾಗಿದೆ. ಪರಿಣಾಮವಾಗಿ ಎದುರಾದ ವಿನಾಶಕಾರಿ ಪ್ರವಾಹದಿಂದ 50 ಜನರು ಸಾವನ್ನಪ್ಪಿದ್ದಾರೆ. ಕೊಚ್ಚಿಹೋಗಿದ್ದ 27 ಮಂದಿಯನ್ನು ರಕ್ಷಣಾ ಕಾರ್ಯಕರ್ತರು ರಕ್ಷಿಸಿದ್ದಾರೆ. ಆದಾಗ್ಯೂ, ಇನ್ನೂ ಹಲವರು ಕಾಣೆಯಾಗಿದ್ದಾರೆ.

ಧಾರಾಕಾರ ಮಳೆಯು ಟೆಕ್ಸಾಸ್‌ನ ಕೆರ್ ಕೌಂಟಿ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಕರೆರ್‌ ಕೌಂಟಿಯಲ್ಲಿಯೇ 15 ಮಕ್ಕಳು ಸೇರಿದಂತೆ 43 ಜನರು ಸಾವನ್ನಪ್ಪಿದ್ದಾರೆ. ಟ್ರಾವಿಸ್ ಕೌಂಟಿಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದರೆ, ಬರ್ನೆಟ್ ಕೌಂಟಿಯಲ್ಲಿ ಇಬ್ಬರು ಮತ್ತು ಟಾಮ್ ಗ್ರೀನ್ ಕೌಂಟಿಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

ಕೆರ್ ಕೌಂಟಿಯಲ್ಲಿರುವ ಕ್ರಿಶ್ಚಿಯನ್ ಹೆಣ್ಣುಮಕ್ಕಳ ಹಾಸ್ಟೆಲ್‌ ಪ್ರದೇಶದಲ್ಲಿ ಪ್ರವಾಹವಾಗಿದ್ದು, ಹಾಸ್ಟೆಲ್ ಮತ್ತು ಮನೆಗಳಲ್ಲಿದ್ದ ಜನರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ. ಹಾಸ್ಟೆಲ್‌ನಲ್ಲಿದ್ದ ಸುಮಾರು 30 ಬಾಲಕಿಯರು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೋಧನಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಕಾಣೆಯಾದವರನ್ನು ಹುಡುಕುವುದು ಸವಾಲಿನ ಕೆಲಸವಾಗಿದೆ. ಆದಾಗ್ಯೂ, ಈವರೆಗೆ 27 ಮಂದಿಯನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೆಕ್ಸಾಸ್ ತುರ್ತು ನಿರ್ವಹಣಾ ಇಲಾಖೆಯ ಮುಖ್ಯಸ್ಥ ನಿಮ್ ಕಿಡ್, “ಪ್ರವಾಹಕ್ಕೆ ಸಿಲುಕಿ ಸತ್ತವರ ಮೃತದೇಹಗಳು ಮತ್ತು ಬದುಕುಳಿದಿರುವವರ ಪತ್ತೆಗಾಗಿ ರಕ್ಷಣಾ ಸಿಬ್ಬಂದಿಗಳು ಗ್ವಾಡಾಲುಪೆ ನದಿಯ ಉದ್ದಕ್ಕೂ ಶೋಧ ನಡೆಸುತ್ತಿದ್ದಾರೆ. ಕಾಣೆಯಾದ ಎಲ್ಲರನ್ನು ಕಂಡುಹಿಡಿಯುವವರೆಗೆ ನಾವು ಹುಡುಕಾಟವನ್ನು ಮುಂದುವರಿಸುತ್ತೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...