ಇಮ್ರಾನ್‌ ಖಾನ್ ಬಂಧನಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಗಂಟೆಯೊಳಗೆ ಮಾಜಿ ಪ್ರಧಾನಿ ಹಾಜರುಪಡಿಸಿದ ಎನ್‌ಎಬಿ

Date:

  • ಬಂಧನಕ್ಕೊಳಪಡಿಸಿದ್ದು ನ್ಯಾಯಾಂಗ ನಿಂದನೆ ಎಂದ ಪಾಕ್‌ನ ಸುಪ್ರೀಂ ಕೋರ್ಟ್
  • ಇಸ್ಲಾಮಾಬಾದ್ ಹೈಕೋರ್ಟ್‌ನ ಆವರಣದಿಂದ ಬಂಧಿಸಿದ್ದ ಎನ್‌ಎಬಿ

ಇಮ್ರಾನ್‌ ಖಾನ್‌ ಅವರನ್ನು ಅಕ್ರಮ ಬಂಧನಕ್ಕೊಳಪಡಿಸಿ ನ್ಯಾಯಾಂಗ ನಿಂದನೆ ಎಸಗಿದ ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋಗೆ (ಎನ್‌ಎಬಿ)  ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೆ ಒಂದು ಗಂಟೆಯೊಳಗೆ ಬಿಗಿ ಭದ್ರತೆಯಲ್ಲಿ ಮಾಜಿ ಪ್ರಧಾನಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಭ್ರಷ್ಟಾಚಾರ ನಿಗ್ರಹ ಸಂಸ್ಥೆಯು ನ್ಯಾಯಾಲಯದ ರಿಜಿಸ್ಟ್ರಾರ್‌ನ ಅನುಮತಿಯಿಲ್ಲದೆ ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿ ಬಂಧಿಸಿದ ನಂತರ ಕೋರ್ಟ್‌ಗೆ ಇಮ್ರಾನ್‌ ಖಾನ್‌ ಮನವಿ ಸಲ್ಲಿಸಿದ್ದರು. ಮನವಿಯನ್ನು ಪುರಸ್ಕರಿಸಿದ ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂಡಿಯಾಲ್, ನ್ಯಾಯಮೂರ್ತಿ ಮುಹಮ್ಮದ್ ಅಲಿ ಮಜರ್ ಮತ್ತು ನ್ಯಾಯಮೂರ್ತಿ ಅಥರ್ ಮಿನಲ್ಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಮ್ರಾನ್‌ ಖಾನ್‌ ಅವರನ್ನು ಒಂದು ಗಂಟೆಯೊಳಗೆ ಕೋರ್ಟ್‌ಗೆ ಹಾಜರುಪಡಿಸಿ ಎಂದು ನಿರ್ದೇಶನ ನೀಡಿತ್ತು.

ಲಾಹೋರ್‌ಗೆ ಆಗಮಿಸಿದ್ದ 70 ವರ್ಷದ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್‌ನ ಆವರಣದಿಂದ ಬಂಧಿಸಿದ ಕ್ರಮ ಸರಿಯಿಲ್ಲ ಎಂದು ಪೀಠವು ವಿಚಾರಣೆಯ ಸಮಯದಲ್ಲಿ ಸಿಟ್ಟು ಹೊರಹಾಕಿತ್ತು. 90 ಮಂದಿ ನ್ಯಾಯಾಲಯದ ಆವರಣವನ್ನು ಪ್ರವೇಶಿಸಿದರೆ ಅದರ ಘನತೆ ಏನಾಗಬೇಕು, ಯಾವುದೇ ವ್ಯಕ್ತಿಯನ್ನು ನ್ಯಾಯಾಲಯದ ಆವರಣದಿಂದ ಹೇಗೆ ಬಂಧಿಸಲು ಸಾಧ್ಯ ಎಂದು ಮುಖ್ಯ ನ್ಯಾಯಾಧೀಶರು ಕೇಳಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಇಮ್ರಾನ್‌ ಖಾನ್ ಬಂಧನ; ಪಾಕಿಸ್ತಾನದಾದ್ಯಂತ ಭುಗಿಲೆದ್ದ ಆಕ್ರೋಶ

ಈ ಹಿಂದೆ, ನ್ಯಾಯಾಲಯದ ಒಳಗೆ ವಿಧ್ವಂಸಕ ಕೃತ್ಯಕ್ಕಾಗಿ ವಕೀಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ, ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ಶರಣಾಗಿದ್ದರೆ, ಅವರನ್ನು ಬಂಧಿಸುವುದರ ಅರ್ಥವೇನು ಎಂದು ಕೇಳಿದ್ದು, ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋ ನ್ಯಾಯಾಂಗ ನಿಂದನೆ ಎಸಗಿದೆ ಎಂದು ಹೇಳಿದೆ. 

ಬಂಧನಕ್ಕೆ ಮುನ್ನ ನ್ಯಾಯಾಲಯದ ರಿಜಿಸ್ಟ್ರಾರ್‌ನಿಂದ ಅನುಮತಿ ಪಡೆಯಬೇಕಿತ್ತು. ನ್ಯಾಯಾಲಯದ ಸಿಬ್ಬಂದಿಯೂ ನಿಂದನೆಗೆ ಒಳಗಾಗಿದ್ದಾರೆ. ನ್ಯಾಯಾಲಯವು ಮತ್ತೆ ಸೇರುವ ಪಾಕಿಸ್ತಾನ ಸ್ಥಳೀಯ ಕಾಲಮಾನದೊಳಗೆ ಹಾಜರುಪಡಿಸುವಂತೆ ನಿರ್ದೇಶಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...