ಅನುಮತಿ ನೀಡದ ಕೇಂದ್ರ ಗೃಹ ಇಲಾಖೆ: ಭಾರತ ತೊರೆದ ಫ್ರೆಂಚ್ ಪತ್ರಕರ್ತ

Date:

ಫ್ರೆಂಚ್‌ ರೇಡಿಯೋ ಪತ್ರಕರ್ತ ಸೆಬಾಸ್ಟಿಯನ್‌ ಫಾರ್‌ಸಿಸ್ ಎಂಬುವರು ಕೇಂದ್ರ ಗೃಹ ಇಲಾಖೆ “ವರ್ಕ್‌ ಪರ್ಮಿಟ್‌’ ಅನ್ನು ನವೀಕರಿಸಲು ನಿರಾಕರಿಸಿದ ಕಾರಣ ಸೋಮವಾರ ಭಾರತವನ್ನು ತೊರೆದಿದ್ದಾರೆ. ಇದರೊಂದಿಗೆ ಕಳೆದ 4 ತಿಂಗಳಲ್ಲಿ ಫ್ರಾನ್ಸ್‌ನ ಪತ್ರಕರ್ತರು ಭಾರತದಿಂದ ನಿರ್ಗಮಿಸುತ್ತಿರುವುದು ಎರಡನೇ ಪ್ರಕರಣವಾಗಿದೆ. ಸೆಬಾಸ್ಟಿಯನ್‌ ಅವರಿಗೆ 2024ರ ಸಾರ್ವರ್ತಿಕ ಚುನಾವಣೆಗಳಲ್ಲಿ ವರದಿ ಮಾಡದಂತೆ ಕೂಡ ನಿರ್ಬಂಧಿಸಲಾಗಿತ್ತು.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಸೆಬಾಸ್ಟಿಯನ್‌ “ಜೂನ್‌ 17ರಂದು ನಾನು ಬಲವಂತವಾಗಿ ಭಾರತವನ್ನು ತೊರೆದಿದ್ದೇನೆ. ಈ ದೇಶದಲ್ಲಿ ಕಳೆದ 13 ವರ್ಷಗಳಿಂದ ರೇಡಿಯೋ ಫ್ರಾನ್ಸ್ ಇಂಟರ್‌ ನ್ಯಾಷನಲ್‌, ರೇಡಿಯೋ ಫ್ರಾನ್ಸ್, ಲಿಬರೇಷನ್‌ ಹಾಗೂ ಸ್ವಿಸ್‌ ಹಾಗೂ ಬೆಲ್ಜಿಯಂ ಪಬ್ಲಿಕ್ ರೇಡಿಯೋಗಳಲ್ಲಿ ದಕ್ಷಿಣ ಏಷ್ಯಾ ಭಾತ್ಮಿದಾರನಾಗಿ ಕಾರ್ಯನಿರ್ವಹಿಸುತ್ತಿದ್ದೆ” ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಇಲಾಖೆ ಮಾರ್ಚ್‌ 7 ರಂದು ಪತ್ರಕರ್ತನಾಗಿ ಕಾರ್ಯನಿರ್ವಹಿಸಲು ವರ್ಕ್‌ ಪರ್‌ಮಿಟ್‌ ಅನುಮತಿಯನ್ನು ನವೀಕರಿಸದೆ ತಿರಸ್ಕರಿಸಿತ್ತು ಹಾಗೂ ಸಾರ್ವತ್ರಿಕ ಚುನಾವಣೆಯನ್ನು ವರದಿಸದಂತೆ ನಿರ್ಬಂಧಿಸಲಾಗಿತ್ತು ಎಂದು ಫ್ರಾನ್ಸಿಸ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಬಿಎಂಪಿಗೆ ಬೇಕಿರುವುದು ವಿಭಜನೆಗೂ ಮುಖ್ಯವಾಗಿ ಚುನಾವಣೆ

ಇದು ನನಗೆ ಗ್ರಹಿಸಲಾಗದ ಸೆನ್ಸರ್‌ಶಿಪ್‌ ಆಗಿ ಕಾಣಿಸಿಕೊಂಡಿದೆ. ಅನುಮತಿಯಿಲ್ಲದೆ ನಾನು ನಿರ್ಬಂಧಿತ ಅಥವಾ ಸುರಕ್ಷಿತ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಹಲವು ಸಂದರ್ಭಗಳಲ್ಲಿ ಕೇಂದ್ರ ಗೃಹ ಇಲಾಖೆ ಗಡಿ ಪ್ರದೇಶಗಳಲ್ಲಿ ವರದಿ ಮಾಡಲು ನನಗೆ ಅನುಮತಿ ನೀಡಿತ್ತು ಎಂದು ಫ್ರಾನ್ಸಿಸ್‌ ತಿಳಿಸಿದ್ದಾರೆ.

ಸೆಬಾಸ್ಟಿಯನ್‌ ಅವರ ಅನುಮತಿಯನ್ನು ನಿರಾಕರಿಸಿರುವುದು ಅವರ ಕುಟುಂಬದ ಮೇಲೂ ಪರಿಣಾಮ ಬೀರಿದೆ. ಭಾರತೀಯ ಮಹಿಳೆಯನ್ನು ವಿವಾಹವಾಗಿರುವ ಅವರು ಸಾಗರೋತ್ತರ ಭಾರತದ ನಾಗರಿಕ ಸ್ಥಾನಮಾನವನ್ನು(ಒಸಿಐ) ಹೊಂದಿದ್ದರು.

ಕಳೆದ 4 ತಿಂಗಳ ಹಿಂದೆ ಫ್ರೆಂಚ್‌ ಪತ್ರಕರ್ತ ವನೇಸಾ ದೌಗ್‌ನಾಕ್‌ ಅವರಿಗೆ ವರ್ಕ್‌ ಪರ್‌ಮಿಟ್‌ ನಿರಾಕರಿಸಿದ ಕಾರಣ ಅವರು ಭಾರತವನ್ನು ತೊರೆದಿದ್ದರು. ಎನ್‌ಡಿಎ ಸರ್ಕಾರ 2014ರಿಂದ ಮೇ 2023ರ ಅವಧಿಯಲ್ಲಿ 102 ಜನರ ಒಸಿಐ ಅನುಮತಿಯನ್ನು ರದ್ದುಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...