ಗಾಜಾ | 100 ಗಂಟೆಗಳಲ್ಲಿ ಇಸ್ರೇಲ್‌ನಿಂದ 59 ಹತ್ಯಾಕಾಂಡ; 288 ಪ್ಯಾಲೆಸ್ತೀನಿಯರ ನರಮೇಧ

Date:

ಕಳೆದ 100 ಗಂಟೆಗಳಲ್ಲಿ ಇಸ್ರೇಲ್ ಪಡೆಗಳು ಗಾಜಾದಲ್ಲಿ 59 ಹತ್ಯಾಕಾಂಡಗಳನ್ನು ನಡೆಸಿದೆ. 288 ಪ್ಯಾಲೆಸ್ತೀನಿ ನಾಗರಿಕರು ಮೃತಪಟ್ಟಿದ್ದಾರೆ. ಅವರಲ್ಲಿ 99 ಮಂದಿ ನೆರವು ವಿತರಣಾ ಕೇಂದ್ರಗಳಲ್ಲಿ ಮೃತಪಟ್ಟಿದ್ದಾರೆ ಎಂದು ಗಾಜಾದ ಸರಕಾರಿ ಮಾಧ್ಯಮ ಕಚೇರಿ ಹೇಳಿದೆ.

“ಗಾಜಾದ ನೆರವು ವಿತರಣಾ ಕೇಂದ್ರಗಳಲ್ಲಿ ಆಹಾರ ಮತ್ತು ಆಶ್ರಯವನ್ನು ಪಡೆಯಲು ಪ್ರಯತ್ನಿಸುತ್ತಿದ್ದ ಮಕ್ಕಳು, ಮಹಿಳೆಯರು ಮತ್ತು ವೃದ್ಧರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿಯನ್ನು ನಡೆಸಿದೆ. ಈ ದಾಳಿಯು ಉದ್ದೇಶಪೂರ್ವಕ ಕೃತ್ಯ. ಇತ್ತೀಚಿನ ದಾಳಿಗಳ ವೇಳೆ ಒಟ್ಟು 1,088 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರು ಮಾನವೀಯ ನೆರವು ವಲಯಗಳೆಂದು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಗಾಯಗೊಂಡಿದ್ದಾರೆ. ನೆರವು ಕೇಂದ್ರಗಳು ಸಾವಿನ ಕೇಂದ್ರಗಳಾಗಿ ಮಾರ್ಪಟ್ಟಿವೆ. ಇಸ್ರೇಲ್ ಉದ್ದೇಶಪೂರ್ವಕವಾಗಿ ನಿರಾಶ್ರಿತರ ಕೇಂದ್ರಗಳು, ಕಿಕ್ಕಿರಿದ ಆಶ್ರಯಗಳಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡಿದೆʼ ಎಂದು ಗಾಜಾದಲ್ಲಿನ ಸರಕಾರಿ ಮಾಧ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಉದ್ದೇಶಪೂರ್ವಕವಾಗಿ ಸಾವಿರಾರು ಸ್ಥಳಾಂತರಗೊಂಡ ಜನರು ಸೇರಿದ್ದ ಆಶ್ರಯ ತಾಣಗಳ ಮೇಲೆ ಇಸ್ರೇಲ್ ಬಾಂಬ್ ದಾಳಿ ಮಾಡಿದೆ. ದಾಳಿಗೊಳಗಾದ ಪ್ರದೇಶಗಳಲ್ಲಿ ʼಅಲ್-ಮವಾಸಿʼ ಕೂಡ ಒಂದು. ಇದನ್ನು ಇಸ್ರೇಲ್ ಪಡೆಗಳು ಈ ಹಿಂದೆ “ಸುರಕ್ಷಿತ ವಲಯ” ಎಂದು ಘೋಷಿಸಿತ್ತು. ಈ ಪ್ರದೇಶದಲ್ಲಿ ಆಹಾರವನ್ನು ಪಡೆಯಲು ಪ್ರಯತ್ನಿಸುತ್ತಿದ್ದ ನಾಗರಿಕರನ್ನು ಇಸ್ರೇಲ್ ಸೇನೆ ಹತ್ಯೆ ಮಾಡಿದೆ. ಇಸ್ರೇಲ್ ಕ್ರಮವು ʼಕ್ರೂರ ಅಪರಾಧʼವಾಗಿದ್ದು, ಅಂತಾರಾಷ್ಟ್ರೀಯ ಮಾನವೀಯ ಮತ್ತು ಕಾನೂನು ಸಂಸ್ಥೆಗಳು ಮಧ್ಯಪ್ರವೇಶಿಸಿ “ವ್ಯವಸ್ಥಿತ ದೈನಂದಿನ ನರಮೇಧ”ವನ್ನು ನಿಲ್ಲಿಸುವಂತೆ ಗಾಜಾದ ಸರಕಾರಿ ಮಾಧ್ಯಮ ಕಚೇರಿಯು ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

ಪ್ಯಾಲೆಸ್ತೀನಿ ಆರೋಗ್ಯ ಸಚಿವಾಲಯ ರಕ್ತ ಪೂರೈಕೆಯ ತೀವ್ರ ಕೊರತೆಯ ಬಗ್ಗೆ ಎಚ್ಚರಿಕೆ ನೀಡಿದೆ. ಕಳೆದ ತಿಂಗಳಲ್ಲಿ ಗಾಜಾ ಆಸ್ಪತ್ರೆಗಳು 10,000 ಯೂನಿಟ್ ರಕ್ತವನ್ನು ಬಳಸಿವೆ. ಆದರೆ ಕೇವಲ 3,500 ಯೂನಿಟ್‌ಗಳನ್ನು ಮರುಹೊಂದಿಕೆ ಮಾಡಲಾಗಿದೆ. ಆಸ್ಪತ್ರೆಗಳು ಮತ್ತು ವೈದ್ಯಕೀಯ ಕೇಂದ್ರಗಳನ್ನು ಗುರಿಯಾಗಿಸಿ ಬಾಂಬ್ ದಾಳಿ ಮಾಡಲಾಗಿದೆ. ಇದು ತುರ್ತು ಪ್ರತಿಕ್ರಿಯೆ ಸಾಮರ್ಥ್ಯವನ್ನು ಮತ್ತಷ್ಟು ಕುಗ್ಗಿಸಿದೆ ಎಂದು ಗಾಜಾದ ಸರಕಾರಿ ಮಾಧ್ಯಮ ಕಚೇರಿ ತಿಳಿಸಿದೆ.

ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆ ಬಳಿಕ ಒಟ್ಟು 57,418 ಪ್ಯಾಲೆಸ್ತೀನಿ ನಾಗರಿಕರು ಮೃತಪಟ್ಟಿದ್ದಾರೆ ಮತ್ತು 1,36,261 ಗಾಯಗೊಂಡಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆಹಾರವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾಗ 700ಕ್ಕೂ ಹೆಚ್ಚು ಪ್ಯಾಲೆಸ್ತೀನಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ʼಗಾಜಾ ಹ್ಯುಮಾನಿಟೇರಿಯನ್ ಫೌಂಡೇಶನ್ʼನ (ಜಿಎಚ್‌ಎಫ್‌) ನೆರವು ವಿತರಣಾ ಕೇಂದ್ರಗಳಲ್ಲಿ ಕನಿಷ್ಠ 743 ನಾಗರಿಕರು ಮೃತಪಟ್ಟಿದ್ದಾರೆ. 4,891 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...