ಗಾಜಾದ ಪರಿಸ್ಥಿತಿ ಸುಧಾರಿಸದಿದ್ದರೆ ಇಸ್ರೇಲ್ ವಿರುದ್ಧ ಕ್ರಮ: ಇಯು ಎಚ್ಚರಿಕೆ

Date:

ಗಾಜಾದ ಪರಿಸ್ಥಿತಿಯನ್ನು ಸುಧಾರಿಸಿದಿದ್ದರೆ, ಗಾಜಾ ನಿವಾಸಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಸುಧಾರಣೆಗಳನ್ನು ತರದಿದ್ದರೆ ಇಸ್ರೇಲ್ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ‘ಯುರೋಪಿಯನ್ ಒಕ್ಕೂಟ’ದ (ಇಯು) ವಿದೇಶಾಂಗ ನೀತಿ ಮುಖ್ಯಸ್ಥೆ ಕಾಜಾ ಕಲ್ಲಾಸ್ ಹೇಳಿದ್ದಾರೆ.

ಬ್ರಸೆಲ್ಸ್‌ನಲ್ಲಿ ಇಯು ಸದಸ್ಯ ರಾಷ್ಟ್ರಗಳ ವಿದೇಶಾಂಗ ಮಂತ್ರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾತನಾಡಿದ್ದಾರೆ. “ಗಾಜಾ ಮತ್ತು ಪಶ್ಚಿಮ ಭಾಗದ ಪ್ರದೇಶಗಳ ವಿಚಾರದಲ್ಲಿ ಮಾನವ ಹಕ್ಕುಗಳ ಬದ್ಧತೆಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು ಸ್ಪಷ್ಟ” ಎಂದು ಹೇಳಿದ್ದಾರೆ.

“ಪ್ಯಾಲೆಸ್ಟೀನಿಯನ್ನರ ಪರಿಸ್ಥಿತಿ ಸುಧಾರಿಸದಿದ್ದರೆ ಇಸ್ರೇಲ್ ಮೇಲೆ ಹೆಚ್ಚು ಒತ್ತಡ ಹೇರಲು ಇಯು ಮತ್ತಷ್ಟು ಕ್ರಮಗಳನ್ನು ತರುವ ಬಗ್ಗೆ ಚರ್ಚಿಸುತ್ತದೆ. ಈ ಬಗ್ಗೆ ಜುಲೈನಲ್ಲಿ ಚರ್ಚಿಸಲು ಸಭೆ ಸೇರಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ, ಅತ್ಯಂತ ಮುಖ್ಯವಾದ ವಿಷಯವೆಂದರೆ ಗಾಜಾದ ಪರಿಸ್ಥಿತಿಯನ್ನು ಸುಧಾರಿಸುವುದು, ಪ್ಯಾಲೆಸ್ತೀನ್‌ನಲ್ಲಿನ ಜನರ ಜೀವನವನ್ನು ಸುಧಾರಿಸುವುದು ಹಾಗೂ ನಾವು ಪ್ರತಿದಿನ ಗಾಜಾದಲ್ಲಿ ನೋಡುತ್ತಿರುವ ದುಃಖ ಮತ್ತು ಮಾನವ ನಷ್ಟವನ್ನು ನಿಲ್ಲಿಸುವುದು” ಎಂದು ಹೇಳಿದ್ದಾರೆ.

ಸಂಘರ್ಷವನ್ನು ತಡೆಗಟ್ಟಲು ಕೆಲಸ ಮಾಡುವ ‘ಇಂಟರ್ನ್ಯಾಷನಲ್ ಕ್ರೈಸಿಸ್ ಗ್ರೂಪ್‌’ನ ಲಿಸಾ ಮ್ಯೂಸಿಯೋಲ್ ಅವರು, “ಇಯು ಮಾನವ ಹಕ್ಕುಗಳ ವಿಚಾರದಲ್ಲಿ ತನ್ನದೇ ಆದ ಬದ್ದತೆಯನ್ನು ಹೊಂದಿದೆ. ಆದರೆ, ಗಾಜಾ ಮತ್ತು ಪಶ್ಚಿಮ ದಂಡೆಗಳ ವಿಚಾರದಲ್ಲಿ ಇಸ್ರೇಲ್ ಈ ಬದ್ದತೆಗಳನ್ನು ಮೀರಿದೆ. ಬಹಳ ದಿನಗಳ ಹಿಂದೆಯೇ ಬದ್ದತೆಯ ಕೆಂಪು ರೇಖೆಯನ್ನು ದಾಟಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...