ಸಿಂಗಾಪುರ | ಶಾಲೆಯಲ್ಲಿ ಅಗ್ನಿ ಅವಘಡ; ಬಾಲಕಿ ಸಾವು, ಪವನ್ ಕಲ್ಯಾಣ್ ಮಗ ಸೇರಿ 20 ಜನರಿಗೆ ಗಾಯ

Date:

ಸಿಂಗಾಪುರದ ಶಾಲೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಅಗ್ನಿ ದುರಂತದಲ್ಲೇ ನಟ, ಆಂಧ್ರಪ್ರದೇಶ ಸಚಿವ ಪವನ್ ಕಲ್ಯಾಣ್ ಅವರ 7 ವರ್ಷದ ಮಗ ಸೇರಿದಂತೆ 20 ಮಂದಿಗೆ ಗಾಯವಾಗಿದೆ. ಆರು ವಯಸ್ಕರಿಗೂ ಗಾಯವಾಗಿದೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆಕೆ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ. “ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಅಕ್ರಮ ನಡೆದಿರುವುದು ಪತ್ತೆಯಾಗಿಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ” ಎಂದು ನ್ಯೂಸ್ ಏಷ್ಯಾ ವರದಿ ಮಾಡಿದೆ.

ಇದನ್ನು ಓದಿದ್ದೀರಾ? ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ನೇಮಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ಮಕ್ಕಳು ಪ್ರಜ್ಞೆ ತಪ್ಪಿದ್ದರು. ಕೆಲವು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ಎಂದು ಅಗ್ನಿ ದುರಂತ ನಡೆದ ಸ್ಥಳದಲ್ಲಿದ್ದ ವೈಯಕ್ತಿಕ ತರಬೇತುದಾರರಾದ, ಪ್ರತ್ಯಕ್ಷದರ್ಶಿ ಶೇಕ್ ಅಮಿರುದ್ದೀನ್ ಹೇಳಿದ್ದಾರೆ.

ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರ ಮಾರ್ಕ್ ಶಂಕರ್ ಗಾಯಗೊಂಡಿದ್ದಾರೆ ಎಂದು ಜನ ಸೇನಾ ಪಕ್ಷ ವಿಜಯವಾಡದಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಮಾರ್ಕ್ ಶಂಕರ್ ಅವರ ಕೈ ಮತ್ತು ಕಾಲುಗಳಲ್ಲಿ ಸುಟ್ಟ ಗಾಯಗಳಾಗಿವೆ. ಹೊಗೆ ಉಸಿರಾಡಿದ ಕಾರಣ ಶ್ವಾಸಕೋಶದ ಮೇಲೂ ಪರಿಣಾಮ ಬೀರಿದೆ. ಪ್ರಸ್ತುತ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪವನ್ ಕಲ್ಯಾಣ್ ಸಿಂಗಾಪುರಕ್ಕೆ ಪ್ರಯಾಣಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹತ್ತಿರದ ಸ್ಥಳದಲ್ಲಿದ್ದ ಕೆಲವು ಕಟ್ಟಡ ಕಾರ್ಮಿಕರು ಮಕ್ಕಳನ್ನು ರಕ್ಷಿಸಲು ಸಹಾಯ ಮಾಡಿದರು. 30 ನಿಮಿಷಗಳಲ್ಲಿ ಮೂರು ‘ವಾಟರ್ ಜೆಟ್‌’ಗಳ ಮೂಲಕ ಬೆಂಕಿಯನ್ನು ನಂದಿಸಲಾಗಿದೆ, ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...