12 ದಿನಗಳ ಹಿಂದೆ ಸಹಾಯಕ್ಕಾಗಿ ಕರೆ ಮಾಡಿದ್ದ ಬಾಲಕಿ ಶವವಾಗಿ ಪತ್ತೆ

Date:

12 ದಿನಗಳ ಹಿಂದೆ ‘ನನಗೆ ತುಂಬಾ ಭಯವಾಗಿದೆ, ದಯವಿಟ್ಟು ಬನ್ನಿ’ ಎಂದು ಕರೆ ಮಾಡಿದ್ದ ಆರು ವರ್ಷದ ಬಾಲಕಿ ಇದೀಗ ಶವವಾಗಿ ಪತ್ತೆಯಾಗಿದ್ದಾಳೆ. ಜನವರಿ 29ರಂದು ಆಕೆಯ ಕುಟುಂಬ ತೆರಳುತ್ತಿದ್ದ ಕಾರಿಗೆ ಪ್ಯಾಲೆಸ್ತೀನ್‌ನ ಗಾಜಾದಲ್ಲಿ ಹಂತಕರು ಬೆಂಕಿ ಹಚ್ಚಿದ್ದರು. ಆ ಸಮಯದಲ್ಲಿ ರಕ್ಷಣಾ ಸಿಬ್ಬಂದಿಗಳಿಗೆ ಆಕೆ ಕರೆ ಮಾಡಿ, ಸಹಾಯ ಕೋರಿದ್ದಳು ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಆಕೆಯ ರಕ್ಷಣೆಗಾಗಿ ಸಹಾಯ ಸಂಸ್ಥೆ ಆ್ಯಂಬುಲೆನ್ಸ್‌ ಕಳಿಸಿತ್ತು. ಅದರೆ, ಆ್ಯಂಬುಲೆನ್ಸ್‌ ಮತ್ತು ಸಹಾಯ ಸಂಸ್ಥೆ ನಡುವೆ ಸಂಪರ್ಕ ಕಡಿತವಾಗಿತ್ತು. ಸಹಾಯಕ್ಕೆ ತೆರಳಿದ್ದ ಸಿಬ್ಬಂದಿಗಳು ಮತ್ತು ಬಾಲಕಿ ಹಿಂದ್‌ ರಜಬ್ ನಾಪತ್ತೆಯಾಗಿದ್ದರು.

ಶನಿವಾರ ಬೆಳಗ್ಗೆ ಗಾಜಾ ನಗರದ ಟೆಲ್ ಅಲ್-ಹವಾ ಪ್ರದೇಶದಲ್ಲಿ ಕಾರಿನೊಳಗೆ ಬಾಲಕಿ ಮೃತದೇಹ ಪತ್ತೆಯಾಗಿದೆ ಎಂದು ಆಕೆಯ ಕುಟುಂಬ ತಿಳಿಸಿದೆ. ಬಾಲಕಿಯನ್ನು ಹುಡುಕಲು ಆ್ಯಂಬುಲೆನ್ಸ್‌ನಲ್ಲಿ ಹೋದ ಇಬ್ಬರು ರಕ್ಷಕರು ಇಸ್ರೇಲಿ ಗುಂಡಿಗೆ ಬಲಿಯಾಗಿದ್ದಾರೆ ಎಂದೂ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ರೇಲಿ ಪಡೆಗಳು ದಾಳಿ ಮುಂದುವರೆಸಿದ್ದರಿಂದ ಗಾಜಾ ನಗರದಿಂದ ತಪ್ಪಿಸಿಕೊಳ್ಳಲು ಬಾಲಕಿಯ ಕುಟುಂಬ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ, ಅವರ ಕಾರಿಗೆ ಬೆಂಕಿ ಹಚ್ಚಲಾಗಿತ್ತು. ಕಾರಿನಿಂದ ತಪ್ಪಿಸಿಕೊಂಡ ಆಕೆ, ತನ್ನ ಸಂಬಂಧಿಗಳು ಸಾವನ್ನಪ್ಪಿದ್ದರಿಂದ ಭಯಗೊಂಡು ರಕ್ಷಣೆಗಾಗಿ ಕರೆ ಮಾಡಿದ್ದಳು.

“ಹಿಂದ್ ಮತ್ತು ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ” ಎಂದು ಬಾಲಕಿಯ ಅಜ್ಜ ಬಹಾ ಹಮದಾ ತಿಳಿಸಿದ್ದಾರೆ. ಆಕೆ ಕಾರಿನಿಂದ ತಪ್ಪಿಸಿಕೊಂಡ ಬಳಿಕ, ಆಕೆಗೆ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ.

ಶನಿವಾರ ಇಸ್ರೇಲಿಗಳು ತಮ್ಮ ದಾಳಿಯನ್ನು ನಿಲ್ಲಿಸಿದ್ದು, ಹಲವಾರು ಕುಟುಂಬಗಳು ತಮ್ಮವರಿಗಾಗಿ ಹುಡುಕಾಟ ನಡಸಿದ್ದಾರೆ. ಈ ವೇಳೆ, ಬಾಲಕಿ ಮೃತದೇಹ ಪತ್ತೆಯಾಗಿದೆ.

ಅಕ್ಟೋಬರ್ 7ರಂದು ಆರಂಭವಾದ ಇಸ್ರೇಲ್-ಹಮಾಸ್‌ ಸಂಘರ್ಷ ಇನ್ನೂ ಮುಂದುವರೆದಿದೆ. ಇದೂವರೆಗೆ, ಇಸ್ರೇಲ್ ಮೇಲೆ ದಾಳಿ ನಡೆಸಿದ ಹಮಾಸ್ 1,160 ಮಂದಿಯನ್ನು ಕೊಂದಿದೆ. ಗಾಜಾ ಮೇಲೆ ಭಾರೀ ಮಿಲಿಟರಿಯೊಂದಿಗೆ ದಾಳಿ ಮಾಡಿರುವ ಇಸ್ರೇಲ್‌, ಸುಮಾರು 27,000ಕ್ಕೂ ಹೆಚ್ಚು ಮಂದಿಯನ್ನು ಹತ್ಯೆಗೈದಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...