ಇಸ್ರೇಲ್ ವಿರುದ್ಧದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಹಮಾಸ್: ನೆತನ್ಯಾಹು ಸರ್ಕಾರದ ಮೇಲೆ ಒತ್ತಡ

Date:

2023ರ ಅಕ್ಟೋಬರ್‌ ತಿಂಗಳಿನಿಂದ ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ವಿರಾಮ ಹಾಕಲು ಹಮಾಸ್ ಬಯಸಿರುವುದಾಗಿ ‘ಅಲ್-ಜಝೀರಾ’ ವರದಿ ಮಾಡಿದೆ.

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರು ಕತಾರ್ ಮತ್ತು ಈಜಿಪ್ಟ್ ಮಧ್ಯ ಪ್ರವೇಶದ ಬಳಿಕ ಕದನ ವಿರಾಮದ ಪ್ರಸ್ತಾಪವನ್ನು ಒಪ್ಪಿಕೊಂಡಿರುವುದಾಗಿ ವರದಿಯಾಗಿದೆ.

ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಗೆ ಸೂಚಿಸಿದರೆ, ತಮ್ಮ ಬಳಿಯಲ್ಲಿರುವ ಎಲ್ಲ ಒತ್ತೆಯಾಳು ಇಸ್ರೇಲ್ ಪ್ರಜೆಗಳನ್ನು ಬಿಡುಗಡೆಗೊಳಿಸುವುದಾಗಿಯೂ ಕೂಡ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಕ್ರಮಣ ಸನ್ನಿಹಿತವಾಗಿದೆ, ತಕ್ಷಣ ಹೊರಡಿ” ಎಂದು ರಫಾ ನಿವಾಸಿಗಳಿಗೆ ಇಸ್ರೇಲ್ ಸೇನೆ ಸೂಚನೆ ನೀಡಿದ ನಡುವೆಯೇ ಈ ಬೆಳವಣಿಗೆ ನಡೆದಿದೆ.

ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.

ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವಂತೆ ಇಸ್ರೇಲ್‌ನಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ನಡುವೆಯೇ ಹಮಾಸ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವ ವಿಚಾರ ತಿಳಿಯುತ್ತಿದ್ದಂತೆಯೇ, ನೂರಾರು ಮಂದಿ ಪ್ರತಿಭಟನೆಗೆ ಸೇರಿಕೊಂಡಿದ್ದು, ಇಸ್ರೇಲ್ ಕೂಡ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುವಂತೆ ಒತ್ತಾಯಿಸುತ್ತಿದ್ದಾರೆ.

“ಒಂದು ವೇಳೆ ಬೆಂಜಮಿನ್ ನೆತನ್ಯಾಹು ಸರ್ಕಾರವು ಒಪ್ಪಿಗೆ ಸೂಚಿಸದೆ ಯುದ್ಧ ಮುಂದುವರಿಸಿದರೆ, ನಮ್ಮವರ ಪ್ರಾಣ ಹೋದಲ್ಲಿ ನೀವೇ ಜವಾಬ್ದಾರರು. ಒಂದು ವೇಳೆ ಆ ರೀತಿ ನಡೆದಲ್ಲಿ ದೇಶದಲ್ಲಿ ಹೋರಾಟ ಮತ್ತಷ್ಟು ಹೆಚ್ಚಲಿದ್ದು, ಕಿಚ್ಚು ಹಚ್ಚಲಿದ್ದೇವೆ” ಎಂದು ಇಸ್ರೇಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

“ಹಮಾಸ್ ಕದನ ವಿರಾಮ ಪ್ರಸ್ತಾಪಕ್ಕೆ ಈವರೆಗೆ ಇಸ್ರೇಲ್ ಯಾವುದೇ ತೀರ್ಮಾನ ಪ್ರಕಟಿಸಿಲ್ಲ. ಆದರೆ ಈ ಬಗ್ಗೆ ತುರ್ತು ಸಭೆ ನಡೆಸಿ, ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ” ಎಂದು ಇಸ್ರೇಲ್‌ನ ಚಾನೆಲ್ 12 ವರದಿ ಮಾಡಿದ್ದನ್ನು ಅಲ್-ಜಝೀರಾ ಉಲ್ಲೇಖಿಸಿದೆ. ಈ ನಡುವೆ ಹಮಾಸ್, “ಚೆಂಡು ನಿಮ್ಮ ಅಂಗಳದಲ್ಲಿದೆ. ನಿಮ್ಮ ತೀರ್ಮಾನ ಪ್ರಕಟಿಸಿ” ಎಂದು ಇಸ್ರೇಲ್‌ಗೆ ತಿಳಿಸಿದೆ.

ಗಾಝಾದಲ್ಲಿ ಜನರಿಂದ ಸಂಭ್ರಮಾಚರಣೆ

ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಗಾಝಾ ಹಾಗೂ ರಫಾ ಗಡಿಗಳಲ್ಲಿ ಜನರು ರಸ್ತೆಗೆ ಇಳಿದಿದ್ದು, ಸಂಭ್ರಮಾಚರಣೆ ಮಾಡುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

2023ರ ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್‌ನ ಮೇಲೆ ಅನಿರೀಕ್ಷಿತ ರಾಕೆಟ್ ದಾಳಿ ನಡೆಸಿದ ನಂತರ ಹಮಾಸ್ ವಿರುದ್ಧ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರವು ಯುದ್ಧ ಘೋಷಣೆ ಮಾಡಿತ್ತು. ಈ ಯುದ್ಧದಲ್ಲಿ ಈವರೆಗೆ ಲಕ್ಷಾಂತರ ಮಂದಿ ನೆಲೆ ಕಳೆದುಕೊಂಡಿದ್ದು, ಲಕ್ಷಗಟ್ಟಲೆ ಜನ ಪ್ರಾಣ ಕಳೆದುಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...