ದುಬೈ ಪ್ರವಾಹ| ಭಾರೀ ಮಳೆ, ಬಿರುಗಾಳಿಯಿಂದ ಸಂಚಾರ ಅಸ್ತವ್ಯಸ್ತ; 28 ಭಾರತದ ವಿಮಾನಗಳು ರದ್ದು

Date:

ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು ಮರುಭೂಮಿ ದೇಶದ ಸುತ್ತಲೂ ಪ್ರವಾಹ ಉಂಟು ಮಾಡಿದೆ. ಈ ಬೆನ್ನಲ್ಲೇ ಸಂಚಾರ ಅಸ್ತವ್ಯಸ್ತವಾಗಿದ್ದು 28 ಭಾರತದ ವಿಮಾನಗಳು ರದ್ದು ಮಾಡಲಾಗಿದೆ.

ದಾಖಲೆಯ ಮಳೆಯಿಂದಾಗಿ ವಿಮಾನಗಳ ವಿಳಂಬ ಅಥವಾ ಮಾರ್ಗ ಬದಲಾವಣೆ ಮಾಡಲಾಗಿದ್ದು ಕಾರುಗಳು ಜಲಾವೃತಗೊಂಡ ರಸ್ತೆಗಳಲ್ಲಿ ಸಿಲುಕಿಕೊಂಡಿವೆ. ದುಬೈ ವಿಮಾನ ನಿಲ್ದಾಣಕ್ಕೆ ತೀರಾ ಅಗತ್ಯವಿರದ ಹೊರತು ಬರದಂತೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಮಾನಗಳು ವಿಳಂಬವಾಗುತ್ತಿವೆ ಮತ್ತು ಮಾರ್ಗ ಬದಲಾವಣೆ ಮಾಡಲಾಗುತ್ತಿದೆ. ನಾವು ಅತ್ಯಂತ ಸವಾಲಿನ ಪರಿಸ್ಥಿತಿಗಳಲ್ಲಿ ಸಾಧ್ಯವಾದಷ್ಟು ಬೇಗ ಕಾರ್ಯಾಚರಣೆಯನ್ನು ಆರಂಭಿಸಲು ಶ್ರಮಿಸುತ್ತಿದ್ದೇವೆ” ಎಂದು ದುಬೈ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ಮರುಭೂಮಿ ದೇಶ ದುಬೈನಲ್ಲಿ ಭಾರೀ ಮಳೆಯಿಂದ ಪ್ರವಾಹ; ಒಮಾನ್​ನಲ್ಲಿ 18 ಮಂದಿ ಸಾವು

ಹವಾಮಾನ ಇಲಾಖೆಯು ಇಂದು ಹೆಚ್ಚಿನ ಮಳೆ ಮತ್ತು ಚಂಡಮಾರುತ ಮುನ್ಸೂಚನೆಯನ್ನು ನೀಡಿದೆ. ಈ ನಿಟ್ಟಿನಲ್ಲಿ 500ಕ್ಕೂ ಹೆಚ್ಚು ದುಬೈಗೆ ಬರುವ ಮತ್ತು ದುಬೈನಿಂದ ಹೊರಹೋಗುವ ವಿಮಾನಗಳ ಮಾರ್ಗ ಬದಲಾವಣೆ, ವಿಳಂಬ ಅಥವಾ ರದ್ದು ಮಾಡಲಾಗಿದೆ. ದುಬೈಗೆ ತೆರಳುವ ಸುಮಾರು 15 ವಿಮಾನಗಳನ್ನು ಅಧಿಕಾರಿಗಳು ರದ್ದುಗೊಳಿಸಿದ್ದು, ಭಾರತಕ್ಕೆ ಬರುವ 13 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ದುಬೈನ ಪ್ರಮುಖ ಎಮಿರೇಟ್ಸ್ ಏರ್‌ಲೈನ್ ದುಬೈನಲ್ಲಿ ಪ್ರಯಾಣಿಕರಿಗೆ ಎಲ್ಲಾ ಚೆಕ್-ಇನ್‌ಗಳನ್ನು ಒಂದು ದಿನಕ್ಕೆ ಸ್ಥಗಿತಗೊಳಿಸುವುದಾಗಿ ಹೇಳಿದೆ. “ನಮ್ಮ ನಿಗದಿತ ಕಾರ್ಯಾಚರಣೆಗಳನ್ನು ಪುನಃಸ್ಥಾಪಿಸಲು ಎಮಿರೇಟ್ಸ್ ಶ್ರಮಿಸುತ್ತಿದೆ ಮತ್ತು ನಮ್ಮ ತಂಡಗಳು ತೊಂದರೆಗೊಳಗಾದ ಗ್ರಾಹಕರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸುತ್ತವೆ” ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನು ದುಬೈ ಮಾಲ್ ಮತ್ತು ಮಾಲ್ ಆಫ್ ಎಮಿರೇಟ್ಸ್ ಎರಡೂ ಪ್ರವಾಹದಲ್ಲಿ ಸಿಲುಕಿದ್ದು, ಮೆಟ್ರೋ ನಿಲ್ದಾಣಗಳು ಜಲಾವೃತವಾಗಿದೆ. “ರೆಡ್ ಮತ್ತು ಗ್ರೀನ್ ಲೈನ್‌ಗಳಲ್ಲಿನ ನಿಲ್ದಾಣಗಳಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಪ್ರಸ್ತುತ ನಿರ್ದಿಷ್ಟ ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಚಂಡಮಾರುತದ ಪ್ರಭಾವ ದುಬೈನ ಆಚೆಗೂ ವಿಸ್ತರಿಸಿದ್ದು ಇಡೀ ಯುಎಇ ಮತ್ತು ನೆರೆಯ ಬಹ್ರೇನ್‌ನಲ್ಲಿ ಪ್ರವಾಹ ಉಂಟಾಗಿದೆ. ಶಾಲೆಗಳನ್ನು ಮುಚ್ಚಲಾಗಿದೆ. ಒಮಾನ್‌ನಲ್ಲಿ ಮಕ್ಕಳು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...