ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ನಿಧನ

Date:

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾರೀ ಮಂಜಿನಿಂದ ಪರ್ವತ ಪ್ರದೇಶದಲ್ಲಿ ಪತನಗೊಂಡಿದ್ದು ರೈಸಿ ಮತ್ತು ವಿದೇಶಾಂಗ ಸಚಿವರು ನಿಧನರಾಗಿದ್ದಾರೆ ಎಂದು ಘೋಷಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಸುಮಾರು 12 ಗಂಟೆಗಳ ನಂತರ ಸೋಮವಾರ ಬೆಳಿಗ್ಗೆ ಹೆಲಿಕಾಪ್ಟರ್‌ನ ಅವಶೇಷಗಳು ಪತ್ತೆಯಾಗಿದೆ. ಆದರೆ ಯಾವುದೇ ವ್ಯಕ್ತಿ ಜೀವಂತವಾಗಿರುವ ಕುರುಹು ಸಿಕ್ಕಿಲ್ಲ, ವಿಮಾನ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇರಾನ್‌ನ ವಾಯುವ್ಯದಲ್ಲಿರುವ ಅಜೆರ್‌ಬೈಜಾನ್‌ನ ಗಡಿಗೆ ಭೇಟಿ ನೀಡಿ ಹಿಂತಿರುಗುವಾಗ ಗಡಿಯಲ್ಲಿರುವ ಜೋಲ್ಫಾ ನಗರದ ಬಳಿ ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ. ಯುಎಸ್ ನಿರ್ಮಿತ ಬೆಲ್ 212 ಹೆಲಿಕಾಪ್ಟರ್‌ನಲ್ಲಿ ರೈಸಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.


ಇದನ್ನು ಓದಿದ್ದೀರಾ? ಇರಾನ್ ಅಧ್ಯಕ್ಷ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪರ್ವತದಲ್ಲಿ ಪತನ

ಇರಾನ್ ಸೈನ್ಯದ ಮುಖ್ಯಸ್ಥರು ಸೈನ್ಯದ ಎಲ್ಲಾ ಸಂಪನ್ಮೂಲಗಳನ್ನು ಮತ್ತು ಗಾರ್ಡ್‌ಗಳನ್ನು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿದ್ದರು. ಸ್ಥಳೀಯ ಮಾಧ್ಯಮಗಳ ಪ್ರಕಾರ, ಹೆಲಿಕಾಪ್ಟರ್‌ನಲ್ಲಿ ಒಂಬತ್ತು ಜನರು ಇದ್ದರು.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಶುಕ್ರವಾರದ ಪ್ರಾರ್ಥನೆ ನಡೆಸುವ ಇಮಾಮ್ ಮೊಹಮ್ಮದ್ ಅಲಿ ಅಲಿಹಾಶೆಮ್, ಪೈಲಟ್, ಕಾಪಿಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಸಿಬ್ಬಂದಿ ಮತ್ತು ಇನ್ನೋರ್ವ ಅಂಗರಕ್ಷಕ ಹೆಲಿಕಾಪ್ಟರ್‌ನಲ್ಲಿ ಇದ್ದರು ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...