ಲೆಬನಾನ್ | ಕೈಯ್ಯಲ್ಲಿದ್ದ ಸಾವಿರಾರು ಪೇಜರ್‌ಗಳ ಏಕಾಏಕಿ ಸ್ಫೋಟ: 9 ಸಾವು, 2,800 ಮಂದಿಗೆ ಗಾಯ

Date:

ಲೆಬನಾನ್‌ ದೇಶದಲ್ಲಿ ಹಿಜ್ಬುಲ್ಲಾ ಸಂಘಟನೆಯ ಸಾವಿರಾರು ಮಂದಿ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾಗ, ಮಾರುಕಟ್ಟೆ ಮತ್ತಿತರ ಕಡೆಗಳಲ್ಲಿ ತಮ್ಮ ಪಾಡಿಗೆ ತಾವು ಇದ್ದಾಗ ಅವರ ಕೈಯ್ಯಲ್ಲಿದ್ದ ಅಥವಾ ಪ್ಯಾಂಟ್ ಜೇಬಿನಲ್ಲಿ ಇಟ್ಟುಕೊಂಡಿದ್ದ ಪೇಜರ್‌ಗಳು (ಮೊಬೈಲ್ ಫೋನ್ ಗಳಿಗಿಂತ ಮುಂಚೆ ಇದ್ದ ಸಂವಹನ ಉಪಕರಣ) ಏಕಾಏಕಿ ಸ್ಫೋಟಗೊಂಡಿವೆ.

ಸಿಕ್ರೊನೈಸ್ಡ್ ಬ್ಲಾಸ್ಟಿಂಗ್ ಪರಿಕಲ್ಪನೆಯೊಂದಿಗೆ ದೂರದಲ್ಲೇ ಕುಳಿತು ನಿರ್ದಿಷ್ಟ ವ್ಯಕ್ತಿಗಳು ವಿಶೇಷ ಸಾಫ್ಟ್ ವೇರ್ ಗಳನ್ನು ಬಳಸಿ ಎಲ್ಲ ಪೇಜರ್‌ಗಳು ಏಕಾಏಕಿ ಸ್ಫೋಟಗೊಳ್ಳುವಂತೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸ್ಫೋಟದ ಪರಿಣಾಮವಾಗಿ, 9 ಮಂದಿ ಸಾವನ್ನಪ್ಪಿದ್ದು, 2,800 ಮಂದಿ ಗಾಯಗೊಂಡಿದ್ದಾರೆ.

ಸ್ಥಳೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಭಾರತೀಯ ಕಾಲಮಾನ ಸಂಜೆ 6:30ಕ್ಕೆ ಈ ಸ್ಫೋಟ ಸಂಭವಿಸಿದೆ. ದಾಳಿಯ ಪರಿಣಾಮ ರಸ್ತೆಯಲ್ಲಿ, ತರಕಾರಿ ಮಾರುಕಟ್ಟೆ, ಕಾರಿನಲ್ಲಿದ್ದ ಸದಸ್ಯರು ಅಲ್ಲೇ ಕುಸಿದು ಬಿದ್ದಿದ್ದಾರೆ. ಲೆಬನಾನ್‌ನಲ್ಲಿದ್ದ ಇರಾನ್‌ ರಾಯಭಾರಿ ಸಹ ಗಾಯಗೊಂಡಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

ಈ ಕೃತ್ಯದ ಹಿಂದೆ ಇಸ್ರೇಲ್ ಕೈವಾಡ ಇದೆ. ಅತ್ಯಾಧುನಿಕ ರಿಮೋಟ್ ತಂತ್ರಜ್ಞಾನ ಬಳಸಿ, ಸ್ಫೋಟ ನಡೆಸಲಾಗಿದೆ ಎಂದು ಲೆಬನಾನ್ ಸರ್ಕಾರದ ಅಧಿಕಾರಿಗಳು ಆರೋಪಿಸಿದ್ದಾರೆ. ಈ ಆರೋಪಗಳ ಕುರಿತು ಪ್ರತಿಕ್ರಿಯಿಸಲು ಇಸ್ರೇಲ್ ಸೇನೆ ನಿರಾಕರಿಸಿದೆ. ಲೆಬನಾನ್ ಪ್ರಧಾನಿ ನಜೀಬ್ ಮಿಕಾತಿ ಅವರು, ‘ಇಸ್ರೇಲ್ ನಡೆಸಿದ ಈ ಕ್ರಿಮಿನಲ್ ಆಕ್ರಮಣವು, ಲೆಬನಾನ್‌ನ ಸಾರ್ವಭೌಮತೆಯ ಉಲ್ಲಂಘನೆ’ ಎಂದು ಟೀಕಿಸಿದ್ದಾರೆ.

ಸಿರಿಯಾದಲ್ಲಿ 14 ಮಂದಿಗೆ ಗಾಯ

ಡಮಾಸ್ಕಸ್ ಮತ್ತು ದೇಶದ ಇತರ ಕೆಲವೆಡೆ ಮಂಗಳವಾರ ಪೇಜರ್ ಸ್ಪೋಟದಿಂದ 14 ಮಂದಿ ಗಾಯಗೊಂಡಿದ್ಧಾರೆ ಎಂದು ಸಿರಿಯಾದಲ್ಲಿರುವ ಮಾನವ ಹಕ್ಕುಗಳ ವೀಕ್ಷಕರೊಬ್ಬರು ತಿಳಿಸಿದ್ದಾರೆ.

ಪೇಜರ್ ಬಳಕೆ ಏಕೆ?
ಮೊಬೈಲ್ ಫೋನ್‌ಗಳು ಬರುವ ಮುನ್ನ ಪೇಜರ್‌ಅನ್ನು ಸಂವಹನ ಸಾಧನವಾಗಿ ಬಳಸಲಾಗುತ್ತಿತ್ತು. ಆದರೆ
ಹಿಜ್ಬುಲ್ಲಾ ಬಂಡುಕೋರರು ಪರಸ್ಪರ ಸಂವಹನ ನಡೆಸಲು ಈಗಲೂ ಪೇಜರ್‌ಅನ್ನು ಬಳಸುತ್ತಿದ್ದಾರೆ. ಪೇಜರ್
ಮೂಲಕ ಕಳುಹಿಸುವ ಸಂದೇಶಗಳು ರಹಸ್ಯವಾಗಿ ಇರುತ್ತದೆ ಎಂಬುದೇ ಇದಕ್ಕೆ ಕಾರಣ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...