ಅಮೆರಿಕ | ಮಗನಿಗೆ ಅಚ್ಚೆ ಹಾಕಿದ್ದಕ್ಕೆ ದೇವಸ್ಥಾನದ ವಿರುದ್ಧ 10 ಲಕ್ಷ ಡಾಲರ್ ದಾವೆ

Date:

ತಮ್ಮ 11 ವರ್ಷದ ಮಗನಿಗೆ ಕಬ್ಬಿಣದ ಕಾದ ಸಲಾಕೆಯಿಂದ ಅಚ್ಚೆ ಹಾಕಿದ ದೇವಸ್ಥಾನದ ಮಂಡಳಿಯ ವಿರುದ್ಧ ಭಾರತೀಯ ಮೂಲದ ವ್ಯಕ್ತಿಯೊಬ್ಬರು10 ಲಕ್ಷ ಡಾಲರ್ ಪರಿಹಾರ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಘಟನೆ ಅಮೆರಿಕ ದ ಹ್ಯೂಸ್ಟನ್‌ ನಗರದಲ್ಲಿ ನಡೆದಿದೆ.

ಫೋರ್ಟ್ ಬೆಂಡ್‌ ಕೌಂಟಿ ನಗರ ವಾಸಿಯಾದ ವಿಜಯ್‌ ಚೆರುವು ಅವರು, ತಮ್ಮ ಪುತ್ರನಿಗೆ ಕಳೆದ ವರ್ಷ ಆಗಸ್ಟ್‌ನಲ್ಲಿ ಟಾಕ್ಸಸ್‌ನ ಶುಗರ್‌ಲ್ಯಾಂಡ್‌ನ ಅಷ್ಟಲಕ್ಷ್ಮಿ ಹಿಂದೂ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ತಮ್ಮ ಹಾಗೂ ತಮ್ಮ ಮಗನ ಅನುಮತಿಯನ್ನು ಪಡೆಯದೆ ಕಾದ ಕಬ್ಬಿಣದ ಸಲಾಕೆಯಿಂದ ಅಚ್ಚೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಈ ಅಚ್ಚೆಯಿಂದಾಗಿ ತಮ್ಮ ಮಗ ತುಂಬ ನೋವಿನಿಂದ ಬಳಲುತ್ತಿದ್ದು, ಶಾಶ್ವತ ಕಲೆ ಉಂಟಾಗಿದೆ ಎಂದು ಕೋರ್ಟಿನಲ್ಲಿ ಸಲ್ಲಿಸಿರುವ ದಾವೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಂದೋ ಕೈತಪ್ಪಿದ ‘ಕಚ್ಚತೀವು’ ಕಥೆ ಇರಲಿ; ಚೀನಾ ಅತಿಕ್ರಮಣ ಬಗ್ಗೆ ಮೋದಿ ಮಾತಾಡಲಿ

ಈ ನಷ್ಟವನ್ನು ತುಂಬಿಕೊಡುವ ಸಲುವಾಗಿ ದೇವಸ್ಥಾನ ಹಾಗೂ ಅದರ ಪೋಷಕ ಮಂಡಳಿಯ ವಿರುದ್ಧ ಚೆರುವು ಅವರು ನ್ಯಾಯಾಲಯದಲ್ಲಿ 10 ಲಕ್ಷ ಡಾಲರ್ ದಾವೆ ಹೂಡಿದ್ದಾರೆ.

“ನನಗೆ ಇದರಿಂದ ಆಘಾತ ಉಂಟಾಯಿತು. ಈ ಘಟನೆಯನ್ನು ಹೇಗೆ ನಿರ್ವಹಿಸುವುದೆಂದು ನನಗೆ ಗೊತ್ತಿರಲಿಲ್ಲ. ನನ್ನ ಮೊದಲ ಕಾಳಜಿ ನನ್ನ ಮಗನ ಆರೋಗ್ಯವನ್ನು ನೋಡಿಕೊಳ್ಳುವುದಾಗಿದೆ” ಎಂದು ಚೆರುವು ತಿಳಿಸಿದ್ದಾರೆ.

ಅಚ್ಚೆ ಹಾಕಿದ್ದರಿಂದ ಬಾಲಕನ ಎರಡು ಕೈಗಳಿಗೆ ತೀವ್ರ ಹಾನಿಯಾಗಿ ಶಾಶ್ವತ ಕಲೆಯುಂಟಾಗಿದೆ. ನಂತರದ ದಿನಗಳಲ್ಲಿ ಸೋಂಕು ಹೆಚ್ಚಾಗಿದೆ. ಬಾಲಕ ತಮ್ಮ ತಾಯಿಯ ಜೊತೆ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭದಲ್ಲಿ ಯಾರಿಗೂ ತಿಳಿಸದಂತೆ ಅಚ್ಚೆ ಹಾಕಲಾಗಿದೆ ಎಂದು ಚೆರುವು ಅವರ ವಕೀಲರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...