ಇರಾನ್ ಯುದ್ಧದ ಪ್ರಭಾವ: ರೂಪಾಯಿ ಮೌಲ್ಯ 92 ರೂ.ಗೆ ಕುಸಿತ; 9.7 ಲಕ್ಷ ಕೋಟಿ ರೂ. ನಷ್ಟ

Date:

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಯುದ್ಧವು ಆ ರಾಷ್ಟ್ರಗಳ ಮೇಲೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಭಾರೀ ಪರಿಣಾಮ ಬೀರುತ್ತಿದೆ. ಈಗಾಗಲೇ, ತೈಲ ಸೇರಿದಂತೆ ಹಲವು ವಹಿವಾಟುಗಳ ಮೇಲೆ ಗಂಭೀರ ಪ್ರಭಾವ ಬೀರಿದೆ. ಭಾರತಕ್ಕೆ ತೈಲ, ಅಕ್ಕಿ, ಚಹಾ ಉತ್ಪನ್ನಗಳ ರಫ್ತು-ಆಮದು ವ್ಯವಸ್ಥೆಯು ಅಸ್ತವ್ಯಸ್ತವಾಗಿದೆ. ಯುದ್ಧವು ಭಾರತೀಯ ಆರ್ಥಿಕತೆಗೆ ಆಘಾತಕಾರಿ ಹೊಡೆತ ನೀಡಿದ್ದು, ಭಾರತೀಯ ರೂಪಾಯಿ ಮೌಲ್ಯವು ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಡಾಲರ್‌ಗೆ 92 ರೂ.ಗಳ ಗಡಿ ದಾಟಿದೆ. ಅಲ್ಲದೆ, ಭಾರತೀಯ ಶೇರು ಮಾರುಕಟ್ಟೆಯ ಹೂಡಿಕೆದಾರರು ಸುಮಾರು 9.7 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ.

ಬುಧವಾರದ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು 55 ಪೈಸೆ ಕುಸಿದಿದ್ದು, 92.03 ಮಟ್ಟಕ್ಕೆ ತಲುಪಿದೆ. ಇದು ಈ ಹಿಂದೆ ಜನವರಿ 2026ರಲ್ಲಿ ದಾಖಲಾಗಿದ್ದ 91.99 ಮತ್ತು 92.02ರ ಮಟ್ಟವನ್ನೂ ಮೀರಿದೆ. ಇರಾನ್ ಮೇಲಿನ ಮಿಲಿಟರಿ ದಾಳಿ ಮತ್ತು ತೈಲ ಪೂರೈಕೆಯಲ್ಲಿ ಉಂಟಾಗಬಹುದಾದ ವ್ಯತ್ಯಯದ ಭೀತಿಯಿಂದ ಜಾಗತಿಕ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಮುಖ ಮಾಡಿರುವುದು ಈ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಬಿಎಸ್‌ಇ (BSE) ಪಟ್ಟಿಯಲ್ಲಿರುವ ಕಂಪನಿಗಳ ಒಟ್ಟು ಮಾರುಕಟ್ಟೆ ಮೌಲ್ಯವು ಸೋಮವಾರ 456.17 ಲಕ್ಷ ಕೋಟಿ ರೂ. ಇತ್ತು. ಅದು ಕೇವಲ ಎರಡು ದಿನಗಳಲ್ಲಿ 446.47 ಲಕ್ಷ ಕೋಟಿ ರೂ.ಗೆ ಇಳಿಕೆಯಾಗಿದೆ. 9.7 ಲಕ್ಷ ಕೋಟಿ ರೂ. ನಷ್ಟವಾಗಿದೆ.

ಶೇರು ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 1,710 ಅಂಕಗಳಷ್ಟು ಭಾರಿ ಕುಸಿತ ಕಂಡು 78,529ಕ್ಕೆ ತಲುಪಿದರೆ, ನಿಫ್ಟಿ-50 ಸುಮಾರು 477 ಅಂಕಗಳನ್ನು ಕಳೆದುಕೊಂಡು 24,389ಕ್ಕೆ ಇಳಿದಿದೆ. ಇದು ಕಳೆದ ಏಳು ತಿಂಗಳಲ್ಲಿ ನಿಫ್ಟಿ ಕಂಡ ಅತ್ಯಂತ ಕನಿಷ್ಠ ಮಟ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ‘ಇರಾನ್ ಜೊತೆಗಿನ ಮಾತುಕತೆಗಳು ಸಫಲವಾಗುವ ಸಾಧ್ಯತೆ ಇಲ್ಲ ಮತ್ತು ಯುದ್ಧವು ಇನ್ನೂ ನಾಲ್ಕೈದು ವಾರಗಳ ಕಾಲ ಮುಂದುವರಿಯಬಹುದು’ ಎಂದು ಎಚ್ಚರಿಸಿದ್ದರಿಂದ ಹೂಡಿಕೆದಾರರಲ್ಲಿ ಭೀತಿ ಹೆಚ್ಚಾಗಿದೆ.

ಈ ಲೇಖನ ಓದಿದ್ದೀರಾ?: ಇರಾನ್ ಇತಿಹಾಸ, ಕಚ್ಚಾತೈಲ ಮತ್ತು ಅಮೆರಿಕದ ಆಟ!

ಜಾಗತಿಕವಾಗಿ ಕಚ್ಚಾ ತೈಲದ ಬೆಲೆಗಳು ಗಗನಕ್ಕೇರುತ್ತಿವೆ. ಬ್ರೆಂಟ್ ಕ್ರೂಡ್ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 82.53 ಡಾಲರ್‌ಗೆ ತಲುಪಿದೆ. ಭಾರತವು ತನ್ನ ತೈಲ ಅಗತ್ಯದ 85%ರಷ್ಟನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುವುದರಿಂದ, ತೈಲ ಬೆಲೆ ಏರಿಕೆಯು ದೇಶದ ಹಣದುಬ್ಬರ ಮತ್ತು ವ್ಯಾಪಾರ ಕೊರತೆಯ ಮೇಲೆ ನೇರ ಪರಿಣಾಮ ಬೀರಲಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ದೊಡ್ಡ ಮಟ್ಟದಲ್ಲಿ ಶೇರುಗಳನ್ನು ಮಾರಾಟ ಮಾಡುತ್ತಿರುವುದು ಮಾರುಕಟ್ಟೆಯ ಮೇಲೆ ಒತ್ತಡವನ್ನು ಇನ್ನಷ್ಟು ಹೆಚ್ಚಿಸಿದೆ.

ಎಲ್‌ ಆಂಡ್‌ ಟಿ, ಇಂಡಿಗೋ, ಅದಾನಿ ಪೋರ್ಟ್ಸ್ ಹಾಗೂ ಮಹೀಂದ್ರಾ ರೀತಿಯ ದೊಡ್ಡ ಕಂಪನಿಗಳ ಶೇರುಗಳು 3 ರಿಂದ 6%ರಷ್ಟು ಕುಸಿತ ಕಂಡಿವೆ. ಆದರೂ, ಮಾರುಕಟ್ಟೆ ತಜ್ಞರಾದ ವಿ.ಕೆ. ವಿಜಯಕುಮಾರ್ ಅವರು ಹೂಡಿಕೆದಾರರು ಆತಂಕಕ್ಕೆ ಒಳಗಾಗಬಾರದು ಎಂದು ಸಲಹೆ ನೀಡಿದ್ದಾರೆ. ದೀರ್ಘಕಾಲದ ಹೂಡಿಕೆದಾರರು ಇಂತಹ ಕುಸಿತದ ಸಂದರ್ಭಗಳನ್ನು ಬಳಸಿಕೊಂಡು ಉತ್ತಮ ಗುಣಮಟ್ಟದ ಶೇರುಗಳನ್ನು ಖರೀದಿಸಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...