ಭಾರತ-ಭೂತಾನ್ ನಡುವೆ 2 ಗಡಿಯಾಚೆಗಿನ ರೈಲು ಯೋಜನೆ ಘೋಷಣೆ

Date:

ಭೂತಾನ್ ಮತ್ತು ಭಾರತದ ನಡುವೆ ಎರಡು ಗಡಿಯಾಚೆಗಿನ ರೈಲು ಸಂಪರ್ಕ ನಿರ್ಮಿಸುವ ಯೋಜನೆಯನ್ನು ಉಭಯ ರಾಷ್ಟ್ರಗಳು ಘೋಷಿಸಿವೆ. 4,000 ಕೋಟಿ ರೂ. ವೆಚ್ಚದಲ್ಲಿ ಎರಡು ರೈಲು ಮಾರ್ಗಗಳನ್ನು ನಿರ್ಮಿಸಲಾಗುತ್ತದೆ ಎಂದು ಭಾರತ ಹೇಳಿಕೊಂಡಿದೆ.

ಭೂತಾನ್ ಜೊತೆಗಿನ ವ್ಯಾಪಾರ ಮತ್ತು ಆರ್ಥಿಕ ಸಂಬಂಧವನ್ನು ಹೆಚ್ಚಿಸುವ ಉದ್ದೇಶದಿಂದ ರೈಲು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಭೂತಾನ್‌ನ ಗೆಲೆಫು ಮತ್ತು ಸಮತ್ಸೆ ನಗರಗಳಿಗೆ ಅಸ್ಸಾಂನ ಕೊಕ್ರಝಾರ್ ಮತ್ತು ಪಶ್ಚಿಮ ಬಂಗಾಳದ ಬನಾರ್ಹತ್‌ ನಗರಗಳಿಂದ ರೈಲು ಮಾರ್ಗ ನಿರ್ಮಾಣ ಮಾಡಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದ್ದಾರೆ.

ಬನಾರ್ಹತ್ ಮತ್ತು ಸಮತ್ಸೆ ಹಾಗೂ ಕೊಕ್ರಜಾರ್ ಮತ್ತು ಗೆಲೆಫು ನಡುವೆ ಎರಡು ಗಡಿಯಾಚೆಗಿನ ರೈಲು ಸಂಪರ್ಕಗಳನ್ನು ಸ್ಥಾಪಿಸಲು ಎರಡೂ ಸರ್ಕಾರಗಳು ಒಪ್ಪಿಕೊಂಡಿವೆ. ಎರಡು ಯೋಜನೆಗಳ ಅಡಿಯಲ್ಲಿ ಒಟ್ಟು 89 ಕಿಮೀ ರೈಲು ಮಾರ್ಗಗಳನ್ನು ನಿರ್ಮಿಸಲಾಗುತ್ತದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ ಮತ್ತು ಭೂತಾನ್ ಅತ್ಯುತ್ತಮ ನಂಬಿಕೆ, ಪರಸ್ಪರ ಗೌರವ ಹಾಗೂ ತಿಳುವಳಿಕೆ ಸಂಬಂಧಗಳನ್ನು ಹಂಚಿಕೊಂಡಿವೆ. ಇದು ಸಾಂಸ್ಕೃತಿಕ ಮತ್ತು ನಾಗರಿಕ ಸಂಬಂಧಗಳು, ಜನರ ನಡುವಿನ ಸಂಬಂಧಗಳು ಹಾಗೂ ನಮ್ಮ ಅಭಿವೃದ್ಧಿ ಮತ್ತು ಭದ್ರತಾ ಹಿತಾಸಕ್ತಿಗಳಲ್ಲಿ ಬೇರೂರಿರುವ ಸಂಬಂಧವಾಗಿದೆ” ಎಂದು ಮಿಶ್ರಿ ಹೇಳಿದ್ದಾರೆ.

ಭೂತಾನಿನ ಮೇಲೆ ತನ್ನ ಕಾರ್ಯತಂತ್ರದ ಪ್ರಭಾವವನ್ನು ಹೆಚ್ಚಿಸಲು ಚೀನಾ ನಿರಂತರ ಪ್ರಯತ್ನ ಮಾಡುತ್ತಿದೆ. ಇದೇ ಸಮಯದಲ್ಲಿ ಭಾರತವು ರೈಲು ಯೋಜನೆಗಳನ್ನು ಘೋಷಿಸಿದೆ.

ಈ ಲೇಖನ ಓದಿದ್ದೀರಾ?: ಬೌದ್ಧರು, ಮುಸ್ಲಿಮರನ್ನು ಒಂದು ಮಾಡಿದೆ ಅಸ್ಮಿತೆಯ ಹೋರಾಟ: ಬಿಜೆಪಿ ಕುತಂತ್ರಕ್ಕಿಲ್ಲ ಆಸ್ಪದ

ಕಳೆದ ವರ್ಷ, ಪ್ರಧಾನಿ ನರೇಂದ್ರ ಮೋದಿ ಅವರು ಭೂತಾನ್‌ಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ, ರೈಲು ಸಂಪರ್ಕಗಳನ್ನು ಸ್ಥಾಪಿಸುವ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಕೊಕ್ರಜಾರ್ ಮತ್ತು ಬನಾರ್ಹತ್‌ನಲ್ಲಿರುವ ಭಾರತೀಯ ರೈಲ್ವೇ ನಿಲ್ದಾಣಗಳಿಂದ ಭೂತಾನ್‌ಗೆ ರೈಲು ಸಂಪರ್ಕ ದೊರೆಯಲಿದೆ. ಈ ಮಾರ್ಗಗಳಿಗಾಗಿ ಸುಮಾರು 4,033 ಕೋಟಿ ರೂ. ವೆಚ್ಚವನ್ನು ಅಂದಾಜಿಸಲಾಗಿದೆ ಎಂದು ವೈಷ್ಣವ್ ಹೇಳಿದ್ದಾರೆ.

ಕೊಕ್ರಝಾರ್ ಮತ್ತು ಗೆಲೆಫು ನಡುವಿನ 71.39 ಕಿ.ಮೀ ರೈಲು ಮಾರ್ಗದಲ್ಲಿ 69 ಕಿಮೀ ಉದ್ದದ ರೈಲು ಮಾರ್ಗವನ್ನು ಭಾರತವು 3,456 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿದೆ. ಉಳಿದ 2.39 ಕಿ.ಮೀ ಮಾರ್ಗವನ್ನು ನೇಪಾಳ ನಿರ್ಮಿಸುತ್ತದೆ. ಮಾರ್ಗವು ಆರು ನಿಲ್ದಾಣಗಳು ಇರುತ್ತವೆ. ಎರಡು ವಯಾಡಕ್ಟ್‌ಗಳು, 29 ಪ್ರಮುಖ ಸೇತುವೆಗಳು, 65 ಸಣ್ಣ ಸೇತುವೆಗಳು, ಎರಡು ಗುಡ್‌ಶೆಡ್‌ಗಳು, ಒಂದು ರಸ್ತೆ-ಮೇಲ್ಸೇತುವೆ (ROB) ಮತ್ತು 39 ರಸ್ತೆ-ಕೆಳ ಸೇತುವೆಗಳನ್ನು (RUBs) ರೈಲು ಮಾರ್ಗವು ಒಳಗೊಂಡಿರುತ್ತದೆ. ಅನ್ನು ಒಳಗೊಂಡಿರುತ್ತದೆ ಎಂದು ಹೇಳಿದರು.

ಬನಾರ್ಹತ್‌ನಿಂದ ಸಮತ್ಸೆ ನಡುವಿನ ಎರಡನೇ ಮಾರ್ಗವು 20 ಕಿ.ಮೀ ಉದ್ದವಿದ್ದು, ನಡುವೆ ಎರಡು ರೈಲು ನಿಲ್ದಾಣಗಳು ಇರುತ್ತವೆ. ಈ ಮಾರ್ಗವು 577 ಕೋಟಿ ರೂ. ವೆಚ್ಚದಲ್ಲಿ ಮೂರು ವರ್ಷಗಳ ಪೂರ್ಣಗೊಳ್ಳುವ ಗುರಿ ಇದೆ ಎಂದು ವೈಷ್ಣವ್ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...