ಪಹಲ್ಗಾಮ್ ದಾಳಿ | ಇಸ್ಲಾಮಾಬಾದ್ ಜೊತೆ ನಂಟು ಕಲ್ಪಿಸುವುದು ಕ್ಷುಲ್ಲಕ ಮತ್ತು ಆಧಾರರಹಿತ: ಪಾಕಿಸ್ತಾನ

Date:

ಪಹಲ್ಗಾಮ್ ಭಯೋತ್ಪಾದನ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಪಹಲ್ಗಾಮ್ ದಾಳಿಯೊಂದಿಗೆ ಪಾಕಿಸ್ತಾನದ ನಂಟು ಕಲ್ಪಿಸುವುದು ಕ್ಷುಲ್ಲಕ ಮತ್ತು ಆಧಾರರಹಿತ ಪ್ರಯತ್ನ ಎಂದು ಹೇಖಿ ಪಾಕಿಸ್ತಾನದ ಸೆನೆಟ್ ಶುಕ್ರವಾರ ನಿರ್ಣಯವನ್ನು ಅಂಗೀಕರಿಸಿದೆ.

ಮಂಗಳವಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು 28 ಮಂದಿ ಸಾವನಪ್ಪಿದ್ದಾರೆ. ಮೃತರಲ್ಲಿ ಬಹುತೇಕರು ಪ್ರವಾಸಿಗರಾಗಿದ್ದಾರೆ. ಈ ದಾಳಿ ಬಳಿಕ ನಿಷೇಧಿತ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಘಟಕ ರೆಸಿಸ್ಟೆನ್ಸ್ ಫ್ರಂಟ್(ಟಿಆರ್‌ಎಫ್) ದಾಳಿಯ ಹೊಣೆಯನ್ನು ಹೊತ್ತಿದೆ.

ಇದನ್ನು ಓದಿದ್ದೀರಾ? ಹತ್ಯೆಗೆ ಮುನ್ನ ಹೆಸರು ಕೇಳಿದ್ದೇಕೆ? ಪ್ರವಾಸಿಗರನ್ನೇ ಕೊಂದ ಮರ್ಮವೇನು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆನ್ನಲ್ಲೇ ಪಾಕಿಸ್ತಾನ ಸೆನೆಟ್ ನಿರ್ಣಯವನ್ನು ಮಂಡಿಸಿದೆ. ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್ ಈ ನಿರ್ಣಯವನ್ನು ಮಂಡಿಸಿದರು. ಇದಕ್ಕೆ ಸಂಸತ್ತಿನ ಮೇಲ್ಮನೆಯಲ್ಲಿ ಎಲ್ಲಾ ಪಕ್ಷಗಳ ಬೆಂಬಲ ಸಿಕ್ಕಿದೆ.

“ಜಲ ಭಯೋತ್ಪಾದನೆ ಅಥವಾ ಮಿಲಿಟರಿ ಪ್ರಚೋದನೆ ಸೇರಿದಂತೆ ಯಾವುದೇ ಆಕ್ರಮಣದ ವಿರುದ್ಧ ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಪಾಕಿಸ್ತಾನ ಸಂಪೂರ್ಣವಾಗಿ ಸಮರ್ಥವಾಗಿದೆ ಮತ್ತು ಸಿದ್ಧವಾಗಿದೆ” ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

“ದಾಳಿಯೊಂದಿಗೆ ಪಾಕಿಸ್ತಾನದ ನಂಟು ಕಲ್ಪಿಸುವುದು ಕ್ಷುಲ್ಲಕ ಮತ್ತು ಆಧಾರರಹಿತ ಪ್ರಯತ್ನವಾಗಿದೆ. ನಾಗರಿಕರನ್ನು ಕೊಲ್ಲುವುದು ಪಾಕಿಸ್ತಾನ ಎತ್ತಿಹಿಡಿದ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ನಿರ್ಣಯ ಹೇಳಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್‌ ದಾಳಿ | ಭಯೋತ್ಪಾದನೆ ಬಗ್ಗೆ ಅಮಿತ್ ಶಾ ಹಳೆಯ ಹೇಳಿಕೆ ಮತ್ತೆ ವೈರಲ್

ಭಯೋತ್ಪಾದನೆಯನ್ನು ಸಂಕುಚಿತ ರಾಜಕೀಯ ಗುರಿಗಾಗಿ ಬಳಸಿಕೊಳ್ಳುವ ಮಾದರಿಯನ್ನು ಅನುಸರಿಸುವ ಪಾಕಿಸ್ತಾನವನ್ನು ಕೆಣಕಲು ಭಾರತ ಸರ್ಕಾರವು ನಡೆಸುತ್ತಿರುವ ಸಂಘಟಿತ ಮತ್ತು ದುರುದ್ದೇಶಪೂರಿತ ಅಭಿಯಾನವನ್ನು ಖಂಡಿಸುವುದಾಗಿ ನಿರ್ಣಯದಲ್ಲಿ ಹೇಳಲಾಗಿದೆ.

ಈ ಭಯೋತ್ಪಾದನ ದಾಳಿ ಬಳಿಕ ಭಾರತವು ಬುಧವಾರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ. ಈ ಬಗ್ಗೆಯೂ ಪಾಕಿಸ್ತಾನ ನಿರ್ಣಯದಲ್ಲಿ ಉಲ್ಲೇಖಿಸಿದೆ. ‘ಈ ಕ್ರಮವು ಯುದ್ಧದ ಕೃತ್ಯ’ ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...