ಅಫ್ಘಾನಿಸ್ತಾನ | ತಾಲಿಬಾನ್ ಆಯೋಜಿಸಿದ್ದ ಸಮಾವೇಶದಲ್ಲಿ ಭಾರತ ಸಹಿತ 10 ದೇಶಗಳು ಭಾಗಿ

Date:

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರವು ಪ್ರಾದೇಶಿಕ ಸಹಕಾರಕ್ಕಾಗಿ ವಿಶಾಲ ಗುರಿಯೊಂದಿಗೆ ಕಾಬೂಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಮಾವೇಶದಲ್ಲಿ ಭಾರತ ಸೇರಿದಂತೆ ಒಟ್ಟು 10 ದೇಶಗಳು ಭಾಗಿಯಾಗಿರುವುದಾಗಿ ಅಫ್ಘಾನಿಸ್ತಾನದ ಮಾಧ್ಯಮಗಳು ವರದಿ ಮಾಡಿದೆ.

ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆಯು ತನ್ನ ಹಿಡಿತವನ್ನು ಸಡಿಲಿಸಿದ ಬಳಿಕ ತಾಲಿಬಾನ್ ಸರ್ಕಾರವು ಅಧಿಕಾರಕ್ಕೆ ಬಂದಿತ್ತು. ಆದರೆ ಈವರೆಗೆ ಭಾರತವು ಇನ್ನೂ ಅಂಗೀಕರಿಸಿಲ್ಲ. ಈ ನಡುವೆಯೇ ಕಾಬೂಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಮಾವೇಶದಲ್ಲಿ ಭಾರತದ ಪ್ರತಿನಿಧಿಯನ್ನು ಭಾಗವಹಿಸಲು ಅನುಮತಿಸಿರುವುದು ಅಚ್ಚರಿ ಮೂಡಿಸಿದೆ. ಸಭೆಯಲ್ಲಿ ನಡೆಸಿದ ಮಾತುಕತೆಯ ವಿಚಾರವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈವರೆಗೆ ಯಾವುದೇ ಅಧಿಕೃತ ಮಾಹಿತಿಯನ್ನು ಪ್ರಕಟಿಸಿಲ್ಲ.

ಸಭೆಯಲ್ಲಿ ಭಾರತ ಮಾತ್ರವಲ್ಲದೇ, ಕಜಕಿಸ್ತಾನ್, ಟರ್ಕಿ, ರಷ್ಯಾ, ಚೀನಾ, ಇರಾನ್, ಪಾಕಿಸ್ತಾನ, ಉಜ್ಬೇಕಿಸ್ತಾನ್, ತುರ್ಕಮೆನಿಸ್ತಾನ್, ಇಂಡೋನೇಷ್ಯಾ ಮತ್ತು ಕಿರ್ಗಿಸ್ತಾನ್ ಸೇರಿವೆ ಎಂದು ಅಫ್ಘಾನಿಸ್ತಾನದ ಖಾಮಾ ಪ್ರೆಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಫ್ಘಾನಿಸ್ತಾನದ ವಿಶೇಷ ಪ್ರತಿನಿಧಿ ಝಮೀರ್ ಕಾಬುಲೋವ್ ಅವರು ಸಮಾವೇಶದಲ್ಲಿ ರಷ್ಯಾವನ್ನು ಪ್ರತಿನಿಧಿಸಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾದೇಶಿಕ ಸಹಕಾರದ ಉದ್ದೇಶದಿಂದ ಆಯೋಜಿಸಲಾಗಿದ್ದ ಸೋಮವಾರದ ಸಭೆಯನ್ನು ತಾಲಿಬಾನ್ ಆಡಳಿತದ ಹಂಗಾಮಿ ವಿದೇಶಾಂಗ ಸಚಿವರಾಗಿ ನೇಮಕಗೊಂಡಿರುವ ಅಮೀರ್ ಖಾನ್ ಮುತ್ತಕಿ ಅವರ ನೇತೃತ್ವ ವಹಿಸಿದ್ದರು.

“ಅಫ್ಘಾನಿಸ್ತಾನದೊಂದಿಗೆ ಸಕಾರಾತ್ಮಕ ಸಂವಹನ ಹೆಚ್ಚಿಸಲು ಮತ್ತು ಇನ್ನೂ ಮುಂದುವರಿಸಲು ಎಲ್ಲ ರಾಷ್ಟ್ರಗಳು ಪ್ರಾದೇಶಿಕ ಮಾತುಕತೆಗಳನ್ನು ನಡೆಸಲು ಸಹಕಾರ ನೀಡಬೇಕು” ಎಂದು ತಾಲಿಬಾನ್ ವಿದೇಶಾಂಗ ಸಚಿವರು ಒತ್ತು ನೀಡಿರುವುದಾಗಿ ಅಫ್ಘಾನ್ ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಯುಎಇನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಬುಧಾಬಿಯಲ್ಲಿ ನಡೆದ ಗಣರಾಜ್ಯೋತ್ಸವಕ್ಕೆ ಗಲ್ಫ್ ರಾಷ್ಟ್ರದ ಅಫ್ಘಾನ್ ರಾಯಭಾರಿ ಬದ್ರುದ್ದೀನ್ ಹಕ್ಕಾನಿ ಅವರನ್ನು ಆಹ್ವಾನಿಸಿದ ಬೆನ್ನಲ್ಲೇ ಕಾಬೂಲ್‌ನಲ್ಲಿ ಈ ಸಭೆ ಆಯೋಜಿಸಲಾಗಿತ್ತು.

ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಸಭೆಯಲ್ಲಿ, ಅಫ್ಘಾನಿಸ್ತಾನದ ಅಭಿವೃದ್ಧಿಗಾಗಿ ನೆರವು ನೀಡುವಂತೆ ಕೋರಿದ್ದು. ಅಫ್ಘಾನ್‌ನಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳುವಂತೆ ಹಾಗೂ ಸಂಭವನೀಯ ಬೆದರಿಕೆಗಳನ್ನು ಹಿಮ್ಮೆಟ್ಟಲು ಸಹಕಾರ ನೀಡುವಂತೆ ಕೋರಿರುವುದಾಗಿ ವರದಿಯಾಗಿದೆ.

ಪರಸ್ಪರ ಹಿತಾಸಕ್ತಿ ಮತ್ತು ಪರಸ್ಪರ ಗೌರವದ ಆಧಾರದ ಮೇಲೆ ಒಟ್ಟಾಗಿ ಕೆಲಸ ಮಾಡುವ ಮೂಲಕ ಪ್ರಾದೇಶಿಕ ರಾಷ್ಟ್ರಗಳೊಂದಿಗೆ ತೊಡಗಿಸಿಕೊಳ್ಳಲು ಮತ್ತು ಸಹಕರಿಸಲು ಕಾಬೂಲ್ ಸಿದ್ಧವಾಗಿದೆ ಎಂದು ಅವರು ಹೇಳಿರುವುದಾಗಿ ಅಫ್ಘಾನಿಸ್ತಾನದ ಮಾಧ್ಯಮಗಳು ವರದಿ ಮಾಡಿದೆ.

“ಭಾರತವು ಅಫ್ಘಾನಿಸ್ತಾನದ ಎಲ್ಲ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳಲ್ಲಿ ಶ್ರದ್ಧೆಯಿಂದ ಭಾಗವಹಿಸಲಿದೆ. ಅಫ್ಘಾನಿಸ್ತಾನದ ಭದ್ರತೆ ಮತ್ತು ಸ್ಥಿರತೆಗೆ ಸಹಾಯ ಮಾಡುವ ಪ್ರತಿಯೊಂದು ಪ್ರಯತ್ನ ಮತ್ತು ಉಪಕ್ರಮವನ್ನು ಬೆಂಬಲಿಸಲಿದೆ ಎಂದು ಕಾಬೂಲ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯ ಪ್ರತಿನಿಧಿ ತಿಳಿಸಿದ್ದಾರೆ” ಎಂದು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಉಪ ವಕ್ತಾರ ಹಫೀಜ್ ಜಿಯಾ ಅಹ್ಮದ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...