ಭಾರತ-ಪಾಕ್ ಸಂಘರ್ಷ | ಕರಾಚಿ ಬಂದರಿನ ಮೇಲೆ‌ ಭಾರತೀಯ ನೌಕಾಪಡೆ ದಾಳಿ ಎಂಬ ಸುಳ್ಳು ಸುದ್ದಿ‌ ವೈರಲ್

Date:

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ದಿದೇ-ದಿನೇ ಹೆಚ್ಚುತ್ತಿದೆ. ಎರಡು ರಾಷ್ಟ್ರಗಳ ನಡುವೆ ದಾಳಿ-ಪ್ರತಿದಾಳಿಗಳು ನಡೆಯುತ್ತಿವೆ. ಇದೇ ವೇಳೆ, ಮಾಧ್ಯಮಗಳು ಸೇರಿದಂತೆ ಸಾಮಾಜಿಕ‌ ಜಾಲತಾಣದಲ್ಲಿ ನಕಲಿ ವಿಡಿಯೋಗಳು, ಹಳೆಯ ವಿಡಿಯೋಗಳು ಹಾಗೂ ಸುಳ್ಳು ಸುದ್ದಿಗಳು ವೈರಲ್ ಆಗುತ್ತಿವೆ. ಇದೀಗ, ಗುರುವಾರ ರಾತ್ರಿ ಭಾರತೀಯ ನೌಕಾಪಡೆಯು ಕರಾಚಿ ಬಂದರಿನ ಮೇಲೆ ದಾಳಿ ಮಾಡಿದೆ ಎಂಬ ಸುಳ್ಳು ಸುದ್ದಿಯನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿವೆ.

ಅರಬ್ಬೀ ಸಮುದ್ರದಲ್ಲಿ ನೆಲೆಗೊಂಡಿರುವ ನೌಕಾಪಡೆಯ ಪ್ರಬಲ ಐಎನ್‌ಎಸ್ ವಿಕ್ರಾಂತ್ ಯುದ್ಧ ನೌಕೆಯು ಪಾಕಿಸ್ತಾನದ ಕರಾಚಿ ಬಂದರಿನ ಮೇಲೆ ದಾಳಿ ಮಾಡಿದೆ ಎಂಬ ಶೀರ್ಷಿಕೆ ಜೊತೆಗೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳು ವೈರಲ್‌ ಆಗಿದೆ.

ಆದರೆ, ಕರಾಚಿ ಮೇಲಿನ ದಾಳಿ ಬಗ್ಗೆ ಭಾರತ ಸೇನೆಯಾಗಲೀ ಅಥವಾ ಪಾಕಿಸ್ತಾನವಾಗಲೀ ದೃಢಪಡಿಸಿಲ್ಲ. ಅಧಿಕೃತ ಮಾಹಿತಿಯನ್ನೂ ನೀಡಿಲ್ಲ. ಅಧಿಕೃತ ವರದಿಗಳ ಪ್ರಕಾರ, ಭಾರತೀಯ ನೌಕಾಪಡೆ ಇನ್ನೂ ಯಾವುದೇ ದಾಳಿಯನ್ನು ಪ್ರಾರಂಭಿಸಿಲ್ಲ. ಆದರೆ ಭಾರತವನ್ನು ಸಮುದ್ರದಿಂದ ರಕ್ಷಿಸುತ್ತಿದೆ ಮತ್ತು ಪಾಕಿಸ್ತಾನದ ದಾಳಿಯನ್ನು ಎದುರಿಸಲು ಸಿದ್ಧವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿಗಳ ಪ್ರಕಾರ, ಕರಾಚಿ ಬಂದರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ನಾಗರಿಕರು ತಮ್ಮ ಮನೆಗಳೊಳಗೆ ಇರಬೇಕೆಂದು ಎಚ್ಚರಿಕೆಯ ಸೈರನ್‌ಗಳು ನಿರಂತರವಾಗಿ ಸದ್ದು ಮಾಡುತ್ತಿವೆ.

ಈ ನಡುವೆ, ಗುರುವಾರ ಜಮ್ಮು ಮೇಲೆ ಪಾಕಿಸ್ತಾನ ದಾಳಿ ಮಾಡಿದೆ. ಜಮ್ಮುವಿನ ಸತ್ವಾರಿ, ಸಾಂಬಾ, ಆರ್‌ಎಸ್ ಪುರ ಮತ್ತು ಅರ್ನಿಯಾ ಕಡೆಗೆ ಪಾಕಿಸ್ತಾನ ಎಂಟು ಕ್ಷಿಪಣಿಗಳನ್ನು ಹಾರಿಸಿದೆ. ಅವೆಲ್ಲವನ್ನೂ ವಾಯು ರಕ್ಷಣಾ ಘಟಕಗಳು ತಡೆಹಿಡಿದು ನಿರ್ಬಂಧಿಸಿವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಅಲ್ಲದೆ, ರಾಜಸ್ಥಾನದ ಬಿಕಾನೇರ್ ಮತ್ತು ಪಂಜಾಬ್‌ನ ಜಲಂಧರ್‌ನಲ್ಲಿ ಸಂಪೂರ್ಣ ಬ್ಲಾಕೌಟ್ ಜಾರಿಗೊಳಿಸಲಾಗಿದೆ. ಕಿಶ್ತ್ವಾರ್, ಅಖ್ನೂರ್, ಸಾಂಬಾ, ಅಮೃತಸರದಲ್ಲಿಯೂ ಬ್ಲಾಕೌಟ್ ಜಾರಿಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...