ಭಾರತ-ಅಮೆರಿಕ ಸುಂಕ ಜಟಾಪಟಿ, ರಿಫೈನರ್‌ಗಳಿಗೆ ಲಾಭ: ರಘುರಾಮ್ ರಾಜನ್

Date:

ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಕಾರಣಕ್ಕಾಗಿ ಭಾರತದ ಮೇಲೆ ಅಮೆರಿಕ 50% ಸುಂಕ ವಿಧಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಈ ಸುಂಕ ನೀತಿಯನ್ನು ಆರ್‌ಬಿಐ ಮಾಜಿ ಗವರ್ನರ್‌ ಡಾ. ರಘುರಾಮ್ ರಾಜನ್ ಅವರು ‘ಪವರ್‌ ಪ್ಲೇ’ (ಶಕ್ತಿ ಆಟ) ಎಂದು ಬಣ್ಣಿಸಿದ್ದಾರೆ. ಇದು, ವ್ಯಾಪಾರ ಆರ್ಥಿಕತೆಯನ್ನು ಮೀರಿ ರಾಜಕೀಯ ಮತ್ತು ಆರ್ಥಿಕ ಶಕ್ತಿಯನ್ನು ಮತ್ತೊಬ್ಬರ ಮೇಲೆ ಹೇರುವ ದುರುದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಹೌದು, ಆಗಸ್ಟ್‌ 27ರಂದು ‘ಬ್ಯುಸಿನೆಸ್ ಟುಡೆ’ ಸುದ್ದಿವಾಹಿನಿಯ ಚರ್ಚೆಯಲ್ಲಿ ಭಾಗಿಯಾಗಿದ್ದ ರಘುರಾಮ್ ರಾಜನ್ ಹಲವು ಪ್ರಮುಖ ವಿಚಾರಗಳ ಬಗ್ಗೆ ಗಮನ ಸೆಳೆದಿದ್ದಾರೆ. ಟ್ರಂಪ್ ಸುಂಕ ಹೇರಿಕೆಯ ನಡುವೆಯೂ ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವುದು ಸಾರ್ವಭೌಮತ್ವದ ವಿಚಾರವೇ ಅಥವಾ ದೇಶದ ಬೃಹತ್ ಬಂಡವಾಳ ಶಕ್ತಿಗಳಿಗೆ ಅನುಕೂಲ ಮಾಡುವ ಉದ್ದೇಶವಾ ಎಂಬ ಬಗ್ಗೆ ಅವರು ಹೆಚ್ಚು ಮಾತನಾಡಿದ್ದಾರೆ.

“ಅಮೆರಿಕದ ಬೆದರಿಕೆಯ ನಡುವೆಯೂ ಭಾರತವು ರಷ್ಯದಿಂದ ತೈಲ ಖರೀದಿಯನ್ನು ಮುಂದುವರೆಸಿದೆ. ಇದರಿಂದ ಯಾರಿಗೆ ಉಪಯೋಗ, ಯಾರು ಲಾಭ ಪಡೆಯುತ್ತಾರೆ. ಸಾಮಾನ್ಯ ಜನರೇ? ಅಥವಾ ಅಂಬಾನಿ ರಿಲಯನ್ಸ್ ನಂತಹ ತೈಲ ಕಂಪನಿಗಳೇ? ರಿಲಯನ್ಸ್, ನಾಯರಾ ಎನರ್ಜಿ, ಇಂಡಿಯನ್ ಆಯಿಲ್ ರೀತಿಯ ರಿಫೈನರ್‌ಗಳು ರಷ್ಯನ್ ತೈಲ ಖರೀದಿಯಿಂದ ಅತಿಯಾದ ಲಾಭ ಪಡೆಯುತ್ತಿವೆ. ಇದರಿಂದ, ದೇಶದ ಜನರಿಗೆ ಲಾಭವಾಗುತ್ತಿದೆಯೇ?” ಎಂದು ರಾಜನ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ, ಟ್ರಂಪ್‌ ಭಾರತದ ಮೇಲೆ 50% ತೆರಿಗೆ ವಿಧಿಸಿದ್ದಾರೆ. ಇದರಿಂದ, ಜವಳಿ, ಕೈಷಿ ಹಾಗೂ ಆಭರಣ ಕ್ಷೇತ್ರಗಳು ಹೆಚ್ಚು ಹೊಡೆತ ಅನುಭವಿಸಲಿವೆ. ಜೊತೆಗೆ, ಅಮೆರಿಕಗೆ ಜವಳಿ, ಕೃಷಿ ಹಾಗೂ ಆಭರಣ ಉತ್ಪನ್ನಗಳನ್ನು ರಫ್ತು ಮಾಡುವ ಸಣ್ಣ ರಫ್ತುದಾರರು ಭಾರೀ ನಷ್ಟ ಮತ್ತು ಹೊರೆ ಅನುಭವಿಸಲಿದ್ದಾರೆ. ರಷ್ಯಾದ ತೈಲದಿಂದ ಲಾಭ ಪಡೆಯುವವರು ತಮ್ಮ ಲಾಭದಲ್ಲಿ ನಷ್ಟ ಎದುರಿಸುತ್ತಿರುವ ಸಣ್ಣ ರಫ್ತುದಾರರಿಗೆ ಪಾಲು ಹಂಚುವರೇ” ಎಂದು ಕೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಭಾರತ-ಚೀನಾ ‘ಭಾಯಿ ಭಾಯಿ’ ಎನ್ನುತ್ತಿದ್ದಾರೆ ಮೋದಿ; ಇದು ಸಾಧ್ಯವೇ?

“ಭಾರತವು ರಷ್ಯದಿಂದ ತೈಲ ಖರೀದಿರುವ ವಿಚಾರವನ್ನು ‘ಸಾರ್ವಭೌಮತ್ವ’ ವಿಚಾರ ಎನ್ನುತ್ತಿದೆ. ಆದರೆ, ಅದು ಸಾರ್ವಭೌಮತ್ವದ ಪ್ರಶ್ನೆಯಲ್ಲ. ಬದಲಿಗೆ ‘ಸ್ಮಾರ್ಟ್ ಪಾಲಿಸಿ ಮೇಕಿಂಗ್’ (ಬುದ್ಧಿವಂತ ನೀತಿ ರಚನೆ)ಗೆ ಸಂಬಂಧಿಸಿದ್ದಾಗಿದೆ. ನಾವು ಯಾವುದೇ ಒಂದು ದೇಶದ ಮೇಲೆ ಹೆಚ್ಚು ಅವಲಂಬಿತರಾಗಬಾರದು. ಈ ಸುಂಕವು ನಮಗೆ ಎಚ್ಚರಿಕೆಯ ಗಂಟೆಯಾಗಿದೆ. 8-8.5% ಅಭಿವೃದ್ಧಿ ಸಾಧಿಸಲು ದೇಶವು ನಾನಾ ಸುಧಾರಣೆಗಳನ್ನು ತರಬೇಕು” ಎಂದು ಹೇಳಿದ್ದಾರೆ.

ಇದೇ ವಿಚಾರವನ್ನು ಲಿಂಕ್ಡ್‌ ಇನ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜನ್, “ರಷ್ಯನ್ ತೈಲದಿಂದ ಲಾಭ ಪಡೆಯುತ್ತಿರುವ ರಿಫೈನರ್‌ಗಳು ತಮ್ಮ ಲಾಭದಲ್ಲಿ ಸುಂಕದಿಂದ ನಷ್ಟ ಎದುರಿಸುತ್ತಿರುವ ರಫ್ತುದಾರರಿಗೆ ಸಹಾಯ ಮಾಡಬೇಕು. ಸರ್ಕಾರವು ರಷ್ಯನ್ ತೈಲ ಖರೀದಿಯ ಮೇಲೆ ವಿಂಡ್‌ಫಾಲ್ ಟ್ಯಾಕ್ಸ್ (ಅಧಿಕ ಲಾಭ ತೆರಿಗೆ) ವಿಧಿಸಿ, ಅದನ್ನು ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಹಂಚಬೇಕು” ಎಂದು ಸಲಹೆ ನೀಡಿದ್ದಾರೆ.

ರಘುರಾಮ್ ರಾಜನ್ ಅವರ ಮಾತುಗಳು ಭಾರತದ ಆರ್ಥಿಕ ನೀತಿಯನ್ನು ಪುನರ್‌ವಿಮರ್ಶೆ ಮಾಡಲು ಕರೆ ಕೊಡುತ್ತವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...