ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್ ಪರ ಮತಚಲಾಯಿಸಿದ ಭಾರತ

Date:

ಭಾರತವು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಪ್ಯಾಲೆಸ್ತೀನ್ ದೇಶ ಮತ್ತು ಎರಡು-ರಾಜ್ಯ ಪರಿಹಾರಕ್ಕೆ ಬೆಂಬಲ ಸೂಚಿಸುವ ‘ನ್ಯೂಯಾರ್ಕ್ ಘೋಷಣೆ’ಯ ಪರವಾಗಿ ಮತ ಚಲಾಯಿಸಿದೆ.

ಫ್ರಾನ್ಸ್ ಮಂಡಿಸಿದ ಈ ನಿರ್ಣಯಕ್ಕೆ 142 ರಾಷ್ಟ್ರಗಳು ಪರವಾಗಿ, 10 ರಾಷ್ಟ್ರಗಳು ವಿರುದ್ಧವಾಗಿ ಮತ ಚಲಾಯಿಸಿದವು. ಈ ವೇಳೆ 12 ರಾಷ್ಟ್ರಗಳು ಗೈರು ಹಾಜರಾದವು. ಆ ಮೂಲಕ ನಿರ್ಣಯಕ್ಕೆ ಅಂಗೀಕಾರ ದೊರಕಿತು.

ಇದರಿಂದ ಭಾರತವು ಗಾಜಾ ವಿಚಾರದಲ್ಲಿ ತನ್ನ ಇತ್ತೀಚಿನ ನಿಲುವನ್ನು ಬದಲಿಸಿದೆ. ಕಳೆದ ಮೂರು ವರ್ಷಗಳಲ್ಲಿ ಭಾರತವು ಯುದ್ಧ ವಿರಾಮಕ್ಕೆ ಕರೆ ನೀಡಿದ ವಿಶ್ವಸಂಸ್ಥೆಯ ನಾಲ್ಕು ನಿರ್ಣಯಗಳಿಂದ ದೂರವಿದ್ದು ಟೀಕೆಗೆ ಗುರಿಯಾಗಿತ್ತು. ಆದರೆ ಈಗ ಭಾರತದ ನಿಲುವು ಅಂತಾರಾಷ್ಟ್ರೀಯ ಸಮನ್ವಯಕ್ಕೆ ಹೊಂದಾಣಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಳು ಪುಟಗಳ ನ್ಯೂಯಾರ್ಕ್ ಘೋಷಣೆಯಲ್ಲಿ, ಗಾಜಾದ ಯುದ್ಧ ಕೊನೆಗೊಳಿಸಿ, ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಸಂಘರ್ಷಕ್ಕೆ ಶಾಶ್ವತ ಹಾಗೂ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ನಿರ್ಣಯವು ಅಕ್ಟೋಬರ್ 7 ರಂದು ಹಮಾಸ್ ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿದೆ. ಇಸ್ರೇಲ್ ನಡೆಸಿದ ಪ್ರತೀಕಾರಾತ್ಮಕ ದಾಳಿಗಳಿಂದ ಗಾಜಾದಲ್ಲಿ ಉಂಟಾದ ನಾಗರಿಕರ ಸಾವು, ಮೂಲಸೌಕರ್ಯ ಹಾನಿ ಮತ್ತು ಮಾನವೀಯ ಬಿಕ್ಕಟ್ಟನ್ನು ಟೀಕಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮು ರಾಜಕಾರಣ: ಒಡೆದ ಮನೆಯಲ್ಲಿ ಹಿಂದುತ್ವಕ್ಕೆ ಒಡೆಯನಾರು?

ವಸಾಹತು, ಭೂ ಕಬಳಿಕೆ ಮತ್ತು ಹಿಂಸಾಚಾರವನ್ನು ಇಸ್ರೇಲ್ ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದೆ.

ಗಾಜಾವು ಪ್ಯಾಲೆಸ್ತೀನ್‌ನ ಅವಿಭಾಜ್ಯ ಅಂಗವಾಗಿದ್ದು, ಪಶ್ಚಿಮ ದಂಡೆಯೊಂದಿಗೆ ಏಕೀಕರಿಸಬೇಕೆಂದು ಘೋಷಣೆಯಲ್ಲಿ ತಿಳಿಸಲಾಗಿದೆ.

ವಿಶ್ವಸಂಸ್ಥೆಯು ಅಂಗೀಕರಿಸಿರುವ ಈ ನಿರ್ಣಯವನ್ನು ಇಸ್ರೇಲ್ ತಿರಸ್ಕರಿಸಿದೆ. “ಇದು ಹಮಾಸ್ ಬಗ್ಗೆ ಉಲ್ಲೇಖವಿಲ್ಲದ ರಾಜಕೀಯ ಸರ್ಕಸ್” ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ವಕ್ತಾರ ಓರೆನ್ ಮಾರ್ಮೊರ್‌ಸ್ಟೈನ್ ಹೇಳಿದ್ದಾರೆ.

ಅಮೆರಿಕ ಕೂಡ ನಿರ್ಣಯದ ವಿರುದ್ಧವಾಗಿ ನಿಂತು, ಇದನ್ನು “ಹಮಾಸ್‌ಗೆ ನೀಡಿದ ಉಡುಗೊರೆ” ಎಂದು ಕರೆದಿದೆ.
ಅಕ್ಟೋಬರ್ 7, 2023ರ ಹಮಾಸ್ ಇಸ್ರೇಲ್ ಮೇಲೆ ನಡೆಸಿದ ದಾಳಿಯಲ್ಲಿ 1,200ಕ್ಕೂ ಹೆಚ್ಚಿನ ನಾಗರಿಕರು ಸಾವನ್ನಪ್ಪಿದ್ದರು. 250 ಕ್ಕೂ ಹೆಚ್ಚು ಮಂದಿಯನ್ನು ಹಮಾಸ್ ಒತ್ತೆಯಾಳಾಗಿರಿಸಿಕೊಂಡಿತ್ತು. ನಂತರ ಇಸ್ರೇಲ್ ಪ್ಯಾಲೆಸ್ತೀನ್ ಮೇಲೆ ನಡೆಸಿದ ದಾಳಿಗಳಲ್ಲಿ ಗಾಜಾದಲ್ಲಿ 64,000 ಕ್ಕೂ ಹೆಚ್ಚು ಮಂದಿ ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ಈ ಹೊಸ ನಿಲುವು, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗಾಗಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಪ್ರಯತ್ನಗಳಿಗೆ ಮಹತ್ವದ ಬೆಂಬಲವೆಂದು ಪರಿಗಣಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...