ಭಾರತ ಅವಮಾನ ಸ್ವೀಕರಿಸದು: ಅಮೆರಿಕಕ್ಕೆ ಪುಟಿನ್‌ ತಿರುಗೇಟು

Date:

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಗುರುವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತವನ್ನು ತಮ್ಮ ವ್ಯಾಪಾರಿ ಪಾಲುದಾರ ಭಾರತವನ್ನು ರಷ್ಯಾದೊಂದಿಗಿನ ತೈಲ ವ್ಯಾಪಾರವನ್ನು ಕಡಿಮೆ ಮಾಡಲು ಒತ್ತಡ ಹೇರಿದ್ದಕ್ಕಾಗಿ ತೀವ್ರವಾಗಿ ಟೀಕಿಸಿದ್ದಾರೆ. ಈ ಕ್ರಮವು ವಾಷಿಂಗ್ಟನ್‌ಗೆ ತಿರುಗುಬಾಣವಾಗಿ ಪರಿಣಮಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ದಕ್ಷಿಣ ರಷ್ಯಾದ ಕಪ್ಪು ಸಮುದ್ರ ತೀರದ ಸೋಚಿಯಲ್ಲಿ ನಡೆದ ಅಂತಾರಾಷ್ಟ್ರೀಯ ವಾಲ್ಡೈ ಚರ್ಚಾ ವೇದಿಕೆಯಲ್ಲಿ, 140 ದೇಶಗಳ ತಜ್ಞರ ಸಮ್ಮುಖದಲ್ಲಿ ಮಾತನಾಡಿದ ಪುಟಿನ್‌, ಭಾರತ ಸೇರಿದಂತೆ ರಷ್ಯಾದ ವ್ಯಾಪಾರಿ ಪಾಲುದಾರರ ಮೇಲೆ ಹೆಚ್ಚಿನ ಸುಂಕವನ್ನು ವಿಧಿಸಿದರೆ, ಜಾಗತಿಕ ಇಂಧನ ಬೆಲೆಗಳು ಏರಿಕೆಯಾಗಲಿವೆ. ಇದರಿಂದಾಗಿ ಅಮೆರಿಕದ ಫೆಡರಲ್‌ ರಿಸರ್ವ್‌ ಬಡ್ಡಿದರವನ್ನು ಹೆಚ್ಚಿಸಿಕೊಳ್ಳಬೇಕಾಗುತ್ತದೆ, ಇದು ಅಮೆರಿಕದ ಆರ್ಥಿಕತೆಯನ್ನು ನಿಧಾನಗತಿಗೆ ಸಿಲುಕುತ್ತದೆ” ಎಂದು ಎಚ್ಚರಿಸಿದರು.

ಪುಟಿನ್‌ ತಮ್ಮ ಡಿಸೆಂಬರ್‌ ಆರಂಭದಲ್ಲಿ ಭಾರತಕ್ಕೆ ಯೋಜಿತ ಭೇಟಿಯ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದರು. ಭಾರತದಿಂದ ಭಾರಿ ಪ್ರಮಾಣದ ಕಚ್ಚಾ ತೈಲ ಆಮದಿನಿಂದಾಗಿ ಉಂಟಾಗಿರುವ ವ್ಯಾಪಾರ ಅಸಮತೋಲನವನ್ನು ಸರಿದೂಗಿಸಲು ಕ್ರಮ ಕೈಗೊಳ್ಳುವಂತೆ ರಷ್ಯಾದ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಭಾರತದೊಂದಿಗೆ ಎಂದಿಗೂ ಯಾವುದೇ ಸಂಘರ್ಷ ಹೊಂದಿಲ್ಲ. ಭಾರತವು ಹೊರಗಿನ ಒತ್ತಡಕ್ಕೆ ತಲೆಬಾಗುವುದಿಲ್ಲ. ಅದರ ಜನತೆ ತಮ್ಮ ನಾಯಕರ ನಿರ್ಧಾರಗಳನ್ನು ನಿಕಟವಾಗಿ ಗಮನಿಸುತ್ತಾರೆ ಮತ್ತು ಎಂದಿಗೂ ಅವಮಾನವನ್ನು ಒಪ್ಪಿಕೊಳ್ಳುವುದಿಲ್ಲ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನರಮೇಧ ನಡೆಸಿದವರೊಂದಿಗೆ ಭಾರತ ನಿಲ್ಲುವುದು ಅಕ್ಷಮ್ಯ ಅಪರಾಧ

ಭಾರತವು ರಷ್ಯಾದ ಇಂಧನ ಖರೀದಿಯನ್ನು ನಿಲ್ಲಿಸಿದರೆ, 9 ರಿಂದ 10 ಶತಕೋಟಿ ಡಾಲರ್‌ ನಷ್ಟವನ್ನು ಎದುರಿಸಬೇಕಾಗುತ್ತದೆ. ಭಾರತದಂತಹ ದೇಶದ ಜನರು, ರಾಜಕೀಯ ನಾಯಕತ್ವದಿಂದ ತೆಗೆದುಕೊಳ್ಳುವ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ಗಮನಿಸುತ್ತಾರೆ ಮತ್ತು ಯಾವುದೇ ರೀತಿಯ ಅವಮಾನವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪುಟಿನ್ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ತಮ್ಮ ಸ್ನೇಹಿತ ಎಂದು ಕರೆದ ಪುಟಿನ್‌, ತಮ್ಮ ಸಂವಾದವು ವಿಶ್ವಾಸಾರ್ಹ ಮತ್ತು ಆರಾಮದಾಯಕವಾಗಿದೆ ಎಂದು ತಿಳಿಸಿದರು.

ಅಮೆರಿಕದ ಸಂಕ ವಿಧಾನದಿಂದ ಭಾರತಕ್ಕೆ ಆಗುವ ನಷ್ಟವನ್ನು ರಷ್ಯಾದಿಂದ ಕಚ್ಚಾ ತೈಲ ಆಮದಿಯಿಂದ ಸರಿದೂಗಿಸಬಹುದು. ಇದರಿಂದ ಭಾರತವು ಸಾರ್ವಭೌಮ ರಾಷ್ಟ್ರವಾಗಿ ಗೌರವವನ್ನೂ ಗಳಿಸಲಿದೆ. ವ್ಯಾಪಾರ ಅಸಮತೋಲನವನ್ನು ಸರಿಪಡಿಸಲು ರಷ್ಯಾವು ಭಾರತದಿಂದ ಹೆಚ್ಚಿನ ಕೃಷಿ ಉತ್ಪನ್ನಗಳು ಮತ್ತು ಔಷಧಿಗಳನ್ನು ಖರೀದಿಸಬಹುದು. ಭಾರತದಿಂದ ಹೆಚ್ಚಿನ ಕೃಷಿ ಉತ್ಪನ್ನಗಳನ್ನು ಖರೀದಿಸಬಹುದು ಎಂದು ಪುಟಿನ್‌ ತಿಳಿಸಿದರು.

ಅಮೆರಿಕವು ಭಾರತದಂತಹ ದೇಶಗಳ ಮೇಲೆ ರಷ್ಯಾದ ಇಂಧನ ಆಮದಿಗೆ ಒತ್ತಡ ಹೇರಿದರೂ, ಸ್ವತಃ ರಷ್ಯಾದಿಂದ ಇತರ ಸಂಪನ್ಮೂಲಗಳನ್ನು ಆಮದು ಮಾಡಿಕೊಳ್ಳುತ್ತಿರುವ ದ್ವಿಮುಖ ನೀತಿಯನ್ನು ಪುಟಿನ್‌ ಟೀಕಿಸಿದರು. “ಅಮೆರಿಕವು ಅತಿದೊಡ್ಡ ಪರಮಾಣು ಶಕ್ತಿ ರಾಷ್ಟ್ರವಾಗಿದ್ದು, ಇದಕ್ಕೆ ಬೇಕಾಗುವ ಇಂಧನದಲ್ಲಿ ರಷ್ಯಾವು ಎರಡನೇ ಅತಿದೊಡ್ಡ ಪೂರೈಕೆದಾರ. ಯುರೇನಿಯಂನ ಆಮದಿನಲ್ಲಿ ರಷ್ಯಾದ ಪಾಲು ಗಮನಾರ್ಹವಾಗಿದೆ,” ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...