ಭಾರತೀಯ ದಂಪತಿ, 3 ವರ್ಷದ ಮಗು ಲಿಬಿಯಾದಲ್ಲಿ ಅಪಹರಣ: 1 ಕೋಟಿ ರೂ.ಗೆ ಬೇಡಿಕೆ

Date:

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ದಂಪತಿ ಮತ್ತು ಅವರ ಮೂರು ವರ್ಷದ ಮಗಳು ಲಿಬಿಯಾದಲ್ಲಿ ಅಪಹರಣಕ್ಕೆ ಒಳಗಾಗಿದ್ದು, ಅಪಹರಣಕಾರರು 1 ಕೋಟಿ ರೂ.ಗಳ ಬೇಡಿಕೆ ಇಟ್ಟಿದ್ದಾರೆ. ಕುಟುಂಬವು ತಮ್ಮನ್ನು ಸುರಕ್ಷಿತವಾಗಿ ವಾಪಸ್ ಕರೆಸಿಕೊಳ್ಳುವಂತೆ ಭಾರತೀಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಆನಂದ್ ಜಿಲ್ಲೆಯ ಕರಮ್ಸದ್ ಮೂಲದ ಏಜೆಂಟ್ ಮೂಲಕ ಮಾನ್ಯ ವೀಸಾಗಳಿಲ್ಲದೆ ದಂಪತಿಗಳು ಪೋರ್ಚುಗಲ್‌ನಲ್ಲಿ ನೆಲೆಸಲು ಪ್ರಯತ್ನಿಸುತ್ತಿದ್ದರು. ಅದಕ್ಕಾಗಿ ಆರಂಭದಲ್ಲಿ ದುಬೈಗೆ ಹೋಗಿದ್ದು, ಅಲ್ಲಿಂದ ಏಜೆಂಟರು ಅವರನ್ನು ಲಿಬಿಯಾಕ್ಕೆ ಕಳುಹಿಸಿದ್ದಾರೆ. ಅಲ್ಲಿ ಅಪಹರಣಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಬಿಜೆಪಿ ಶಾಸಕರ ಸೋದರಳಿಯ ಸೇರಿ ಮೂವರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಗುಜರಾತಿ ಕುಟುಂಬವನ್ನು ರಕ್ಷಿಸಲು ಸರ್ಕಾರದ ಹಸ್ತಕ್ಷೇಪವನ್ನು ಕೋರಿ ರಾಜ್ಯಸಭಾ ಸಂಸದ ಮಾಯಾಂಕ್ ನಾಯಕ್ ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. ಮೆಹ್ಸಾನಾ ಜಿಲ್ಲಾ ಅಧಿಕಾರಿಗಳೂ ತಕ್ಷಣ ಮಧ್ಯಪ್ರವೇಶಿಸುವಂತೆ ಕೋರಿ ಪತ್ರ ಬರೆದಿದ್ದಾರೆ.

ಬಾದಲ್‌ಪುರ ನಿವಾಸಿಗಳಾದ ಕಿಸ್ಮತ್ ಚಾವ್ಡಾ, ಅವರ ಪತ್ನಿ ಹಿನಾ ಮತ್ತು ಅವರ ಮೂರು ವರ್ಷದ ಮಗಳು ನವೆಂಬರ್ 29ರಂದು ದುಬೈಗೆ ತೆರಳಿದ್ದು, ಹರ್ಷಿತ್ ಕೆ ಮೆಹ್ತಾ ಎಂದು ಗುರುತಿಸಲ್ಪಟ್ಟ ಅವರ ಪ್ರಯಾಣ ಏಜೆಂಟ್ ಅವರನ್ನು ಪೋರ್ಚುಗಲ್‌ಗೆ ಕಳುಹಿಸುವುದಾಗಿ ಭರವಸೆ ನೀಡಿದ್ದ. ಆದರೆ ದುಬೈ ತಲುಪಿದ ನಂತರ, ಅವರಿಗೆ ತಿಳಿಯದೆಯೇ ಅವರನ್ನು ಲಿಬಿಯಾಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರನ್ನು ತಮ್ಮ ವಶದಲ್ಲಿ ಇರಿಸಿಕೊಂಡಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 4ರಂದು ಅವರನ್ನು ಬಿಡುಗಡೆ ಮಾಡಬೇಕಾದರೆ ಹಣ ನೀಡಬೇಕು ಎಂದು ಈ ದಂಪತಿಯ ಭಾರತದಲ್ಲಿರುವ ಕುಟುಂಬಕ್ಕೆ ಬೆದರಿಕೆ ಕರೆಗಳು ಬಂದಿವೆ.

ಇನ್ನು ಅಕ್ಟೋಬರ್ ಆರಂಭದಲ್ಲಿ, ಅಕ್ರಮವಾಗಿ ಆಸ್ಟ್ರೇಲಿಯಾಕ್ಕೆ ಹೋಗುತ್ತಿದ್ದ ನಾಲ್ವರು ಗುಜರಾತಿಗಳನ್ನು ಇರಾನ್‌ನಲ್ಲಿ ಅಪಹರಿಸಲಾಗಿತ್ತು. ಅವರ ಬಿಡುಗಡೆಗಾಗಿ 2 ಕೋಟಿ ರೂ. ಬೇಡಿಕೆ ಮುಂದಿಡಲಾಗಿತ್ತು. ಕೇಂದ್ರ ಸರ್ಕಾರದ ಹಸ್ತಕ್ಷೇಪದ ನಂತರ ಅವರು ಸುರಕ್ಷಿತವಾಗಿ ಮರಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...