‘ಭಾರತೀಯ ನಾಯಿ, ವಾಪಸ್ ಹೋಗು’: ಆಸ್ಟ್ರೇಲಿಯಾದಲ್ಲಿ ಭಾರತೀಯನ ಮೇಲೆ ಜನಾಂಗೀಯ ದಾಳಿ

Date:

ಆಸ್ಟ್ರೇಲಿಯಾದ ಮೆಲ್ಬೋರ್ನ್ ಬಳಿಯ ಗೀಲಾಂಗ್‌ನಲ್ಲಿರುವ ಜಿಮ್‌ನಲ್ಲಿ ನರ್ಸ್ಆಗಿ ಕೆಲಸ ಮಾಡುತ್ತಿದ್ದ ಪಂಜಾಬ್‌ ಮೂಲದ ಭಾರತೀಯ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ. ‘ಭಾರತೀಯ ನಾಯಿ – ವಾಪಸ್‌ ಹೋಗು’ ಎಂದು ಬೆದರಿಕೆಯಾಗಿದ್ದಾರೆ ಎಂದು ವರದಿಯಾಗಿದೆ.

ಭಾರತೀಯರನ್ನು ಗುರಿಯಾಗಿಸಿಕೊಂಡು ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ಹೆಚ್ಚುತ್ತಿವೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬರುತ್ತಿವೆ. ಇದೇ ಸಮಯದಲ್ಲಿ, ಈ ಘಟನೆ ನಡೆದಿದೆ. ಘಟನೆಯನ್ನು ಜನಾಂಗೀಯ ದ್ವೇಷದಿಂದ ನಡೆದ ಕೃತ್ಯವೆಂದು ಹೇಳಲಾಗಿದೆ.

ಪಂಜಾಬ್‌ ಮೂಲದ ಹರ್ಮನ್‌ಪ್ರೀತ್ ಸಿಂಗ್ (22) ಅವರು ಜಿಮ್‌ನಲ್ಲಿ ನರ್ಸ್‌ಆಗಿ ಕೆಲಸ ಮಾಡುತ್ತಿದ್ದರು. ಅಲ್ಲಿಗೆ, ತರಬೇತಿಗಾಗಿ ಬಂದಿದ್ದ ಮೂವರು ಆರಂಭದಲ್ಲಿ ಸಿಂಗ್‌ ಅವರನ್ನು ನಿಂದಿಸಿದ್ದಾರೆ. ಜಿಮ್‌ನಿಂದ ಹೊರಬಂದಾಗ, ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಸಿಂಗ್ ಅವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಜಿಮ್‌ನಿಂದ ಹೊರಗೆ ಬರುವುದನ್ನು ಮೂವರು ವ್ಯಕ್ತಿಗಳು ಕಾಯುತಿದ್ದರು. ಅವರು ನನ್ನನ್ನು ‘ಭಾರತೀಯ ನಾಯಿ’ಯೆಂದು ಕರೆದರು. ‘ನೀನು ಎಲ್ಲಿಂದ ಬಂದಿದ್ದೀಯೋ, ಅಲ್ಲಿಗೆ ವಾಪಸ್‌ ಹೋಗು’ ಎಂದು ಬೆದರಿಕೆ ಹಾಕಿದರು. ಬಳಿಕ, ಅವರಲ್ಲಿ ಒಬ್ಬ ತನ್ನ ತಲೆಯಿಂದ ನನ್ನ ಮೂಗಿಗೆ ಗುದ್ದಿದನು. ಇದರಿಂದ ಭಾರೀ ರಕ್ತಸ್ರಾವವಾಯಿತು” ಎಂದು ಘಟನೆ ಕುರಿತು ಸಿಂಗ್‌ ವಿವರಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳೊಂದಿಗೆ ಮತ್ತಷ್ಟು ಮಾತನಾಡಿದ ಸಿಂಗ್, “ಹಲ್ಲೆ ಮತ್ತು ಜನಾಂಗೀಯ ನಿಂದನೆಯಿಂದ ನಾನು ಇನ್ನೂ ಆಘಾತಕ್ಕೊಳಗಾಗಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಕಳೆದ ವರ್ಷ, ಆಸ್ಟ್ರೇಲಿಯಾಗೆ ವಲಸೆ ಬರುವುದನ್ನು ವಿರೋಧಿಸಿ ಅಲ್ಲಿನ ಗುಂಪೊಂದು ಪ್ರತಿಭಟನಾ ಮೆರವಣಿಗೆ ನಡೆಸಿತ್ತು. ಅಂದಿನಿಂದ, ಆಸ್ಟ್ರೇಲಿಯಾದಲ್ಲಿ ಉದ್ವಿಗ್ನತೆ ಹೆಚ್ಚಿದೆ ಎಂದು ವರದಿಯಾಗಿದೆ. 2015ರ ಜುಲೈನಲ್ಲಿ, ಅಡಿಲೇಡ್‌ನಲ್ಲಿ ಅಮನ್‌ಪ್ರೀತ್ ಸಿಂಗ್ ಎಂಬವರ ವ್ಯಕ್ತಿ ಮೇಲೆ ಐದು ಜನರು ದಾಳಿ ಮಾಡಿದ್ದರು. ಜನಾಂಗೀಯ ನಿಂದನೆಯ ಘೋಷಣೆಗಳನ್ನು ಕೂಗುತ್ತಾ ಅವರ ಮೇಲೆ ಹಲ್ಲೆ ನಡೆಸಿದ್ದರು.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...