ದುಬೈ | ಭಾರತ ಮೂಲದ ಅಪಘಾತದ ಗಾಯಾಳುವಿಗೆ ₹11.5 ಕೋಟಿ ಪರಿಹಾರ

Date:

ಟ್ರಾಫಿಕ್‌ ನಿಯಮಗಳು ಕಟ್ಟುನಿಟ್ಟಾಗಿರುವ ದುಬೈನಲ್ಲಿ ನಡೆದ ಅಪಘಾತ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಮೂಲದ 20 ವರ್ಷದ ವಿದ್ಯಾರ್ಥಿಗೆ ₹11.5 ಕೋಟಿ ಪರಿಹಾರ ದೊರೆತಿದೆ.

ಹೈದರಾಬಾದ್‌ ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿ ಮುಹಮ್ಮದ್‌ ಬೇಗ್ ಮಿರ್ಝಾಗೆ ದುಬೈನ ಸುಪ್ರೀಂ ಕೋರ್ಟ್‌  5 ಮಿಲಿಯನ್ ದಿರ್ಹಮ್‌ ಮೊತ್ತ ಪರಿಹಾರವನ್ನಾಗಿ ನೀಡಲು ಆದೇಶಿಸಿದೆ.

ಭಾರತೀಯ ಮೂಲದ  ವ್ಯಕ್ತಿಯೊಬ್ಬರು ಯುಎಇನಲ್ಲಿ ಪಡೆಯುತ್ತಿರುವ ಅತಿಹೆಚ್ಚಿನ ಪರಿಹಾರದ ಮೊತ್ತ ಇದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರ ಜುಲೈ 6ರಂದು ಒಮಾನ್‌ನಿಂದ ದುಬೈ ತೆರಳುತ್ತಿದ್ದ ಬಸ್‌, ದುಬೈನ ರಾಶಿದೀಯ ಮೆಟ್ರೋ ನಿಲ್ದಾಣ ಸಮೀಪದ ಓವರ್‌ಹೆಡ್ ಹೈಟ್ ಬ್ಯಾರಿಯರ್‌ಗೆ  ಡಿಕ್ಕಿ ಹೊಡೆದಿತ್ತು. ಭೀಕರ ಅಪಘಾತದಲ್ಲಿ 12 ಭಾರತೀಯರು ಸೇರಿದಂತೆ ಒಟ್ಟು 17 ಜನರು ಮೃತಪಟ್ಟಿದ್ದರು.

ಘಟನೆಯಲ್ಲಿ ಮುಹಮ್ಮದ್‌ ಬೇಗ್ ಮಿರ್ಝಾ ತೀವ್ರವಾಗಿ ಗಾಯಗೊಂಡಿದ್ದರು. ಒಮಾನ್ ಮೂಲದ ಚಾಲಕನಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

DUABI ACCIDENT

ಈ ಸುದ್ದಿ ಓದಿದ್ದೀರಾ?: ನ್ಯಾಟೊ ಸೇರಿದ ಫಿನ್‌ಲ್ಯಾಂಡ್; ರಷ್ಯಾ-ಉಕ್ರೇನ್‌ ಯುದ್ಧದ ಮೇಲೆ ಪ್ರಭಾವ ಸಾಧ್ಯತೆ

ಯುಎಇ ಪ್ರಾಥಮಿಕ ರಾಜಿ ನ್ಯಾಯಾಲಯವು ಆರಂಭದಲ್ಲಿ ಮಿರ್ಝಾ ಅವರಿಗೆ ₹2.25 ಕೋಟಿ ಪರಿಹಾರ ನೀಡಲು ವಿಮಾ ಪ್ರಾಧಿಕಾರಕ್ಕೆ ಆದೇಶಿಸಿತ್ತು. ಆದರೆ ಇದರ ವಿರುದ್ಧ ಮಿರ್ಝಾ ಕುಟುಂಬವು ಮೇಲ್ಮನವಿ ನ್ಯಾಯಾಲಯವನ್ನು ಸಮೀಪಿಸಿತ್ತು.

ʻಅಪಘಾತದಿಂದಾಗಿ ಮಿರ್ಝಾ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಅವರ ಶಿಕ್ಷಣವು ಅರ್ಧದಲ್ಲೇ ಮೊಟಕುಗೊಂಡಿದೆʼ ಎಂದು ಮಿರ್ಝಾ ಪರ ವಕೀಲರು ನ್ಯಾಯಲಯದಲ್ಲಿ ವಾದ ಮಂಡಿಸಿದ್ದರು. ಇದನ್ನು ನ್ಯಾಯಾಧೀಶರು ಪುರಸ್ಕರಿಸಿ ಭಾರಿ ಮೊತ್ತದ ಪರಿಹಾರ ನೀಡಲು ಆದೇಶಿಸಿದ್ದಾರೆ.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...