ಸೂಡಾನ್‌ | ಆರ್‌ಎಸ್‌ಎಫ್‌ ಪಡೆಗಳಿಂದ ಭಾರತೀಯನ ಅಪಹರಣ, ಶಾರೂಕ್‌ ಬಗ್ಗೆ ಪ್ರಶ್ನೆ!

Date:

ಸೂಡಾನಿನ ಅಶಾಂತಿಯ ಮಧ್ಯೆ ಭಾರತದ ಒಡಿಶಾ ರಾಜ್ಯದ ಜಗತ್ಸಿಂಘಪುರ ಜಿಲ್ಲೆಯ ಆದರ್ಶ್‌ ಬೆಹೇರಾ (36) ಅವರನ್ನು ರಾಪಿಡ್‌ ಸಪೋರ್ಟ್‌ ಫೋರ್ಸ್‌ (ಆರ್‌ಎಸ್‌ಎಫ್) ದಾಳಿಕೋರರು ಅಪಹರಿಸಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಿಂದ ಸೂಡಾನಿನ ಅಲ್‌ ಫಾಶಿರ್‌ ನಗರದಲ್ಲಿರುವ ಸುಕರಾತಿ ಪ್ಲಾಸ್ಟಿಕ್‌ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಬೆಹೇರಾ ಅವರನ್ನು ಆರ್‌ಎಸ್‌ಎಫ್‌ ಪಡೆಗಳು ನ್ಯಾಲಾ ನಗರಕ್ಕೆ ಕರೆದುಕೊಂಡು ಹೋಗಿರುವ ಸಾಧ್ಯತೆಗಳಿವೆ.

ಸುದ್ದಿ ಮಾಧ್ಯಮ ಬಿಡುಗಡೆ ಮಾಡಿರುವ ವಿಡಿಯೊದಲ್ಲಿ, ಆದರ್ಶ್‌ ಬೆಹೇರಾ ಅವರು ಇಬ್ಬರು ಸಶಸ್ತ್ರ ಆರ್‌ಎಸ್‌ಎಫ್‌ ಯೋಧರ ನಡುವೆ ಕುಳಿತಿರುವ ದೃಶ್ಯ ಕಾಣಿಸುತ್ತದೆ. ಒಬ್ಬ ಯೋಧ ಅವರೊಂದಿಗೆ ಹಾಸ್ಯಮಾಡುತ್ತಾ “ನಿಮಗೆ ಶಾರುಖ್‌ ಖಾನ್‌ ಗೊತ್ತೇ?” ಎಂದು ಕೇಳಿದರೆ, ಮತ್ತೊಬ್ಬ ಯೋಧ ಅವರು “ಡಾಗಾಲೋ ಗುಡ್‌” ಎಂದು ಹೇಳುವಂತೆ ಒತ್ತಾಯಿಸುತ್ತಾನೆ. ಡಾಗಾಲೋ ಎಂದರೆ ಆರ್‌ಎಸ್‌ಎಫ್‌ನ ನಾಯಕ ಮೊಹಮ್ಮದ್‌ ಹಮ್ದಾನ್‌ ಡಾಗಾಲೋ (ಹೆಮೆಟಿ) ಎಂಬವರನ್ನು ಸೂಚಿಸುತ್ತದೆ.

ಬೆಹೇರಾ ಅವರ ಪತ್ನಿ ಸುಸ್ಮಿತಾ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, “ನನ್ನ ಪತಿ ಕಳೆದ ಎರಡು ವರ್ಷಗಳಿಂದ ಸೂಡಾನಿನಲ್ಲಿ ತುಂಬಾ ಕಷ್ಟದ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಮಗೆ 8 ಮತ್ತು 6 ವರ್ಷದ ಇಬ್ಬರು ಮಕ್ಕಳಿದ್ದಾರೆ. ದಯವಿಟ್ಟು ಸರ್ಕಾರ ನಮ್ಮ ಪತಿಯನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಿ” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸುಡಾನ್‌ | ಆರ್‌ಎಸ್‌ಎಫ್‌ನಿಂದ ಭೀಕರ ನರಮೇಧ: ಮೂರು ದಿನಗಳಲ್ಲಿ 1,500ಕ್ಕೂ ಹೆಚ್ಚು ಮಂದಿ ಹತ್ಯೆ

ಸೂಡಾನಿನ ಅಲ್‌ ಫಾಶಿರ್‌ನಲ್ಲಿ ಕಳೆದ 18 ತಿಂಗಳಿನಿಂದ ಆರ್‌ಎಸ್‌ಎಫ್‌ ಮತ್ತು ಸೂಡಾನೀಸ್‌ ಆರ್ಮ್ಡ್‌ ಫೋರ್ಸ್‌ (SAF) ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಸಾವಿರಾರು ಜನರು ಬಲಿಯಾಗಿದ್ದಾರೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು ಆರ್‌ಎಸ್‌ಎಫ್‌ ಪಡೆಗಳ ವಿರುದ್ಧ ಯುದ್ಧ ಅಪರಾಧದ ತನಿಖೆ ಆರಂಭಿಸಲು ಎಚ್ಚರಿಕೆ ನೀಡಿದೆ.

ಭಾರತದಲ್ಲಿನ ಸೂಡಾನಿನ ರಾಯಭಾರಿ ಡಾ. ಮೊಹಮ್ಮದ್‌ ಅಬ್ದಲ್ಲಾ ಅಲಿ ಎಲ್ಟೊಮ್‌ ಮಾತನಾಡಿ, “ಅಲ್‌ ಫಾಶಿರ್‌ನಲ್ಲಿ ಸಂಪೂರ್ಣ ಸಂಪರ್ಕ ವ್ಯತ್ಯಯವಾಗಿದೆ. ಯಾವುದೇ ಸಂಪರ್ಕ ಸಾಧ್ಯವಿಲ್ಲ. ನಾವು ಅವರ ಸುರಕ್ಷತೆಯ ಬಗ್ಗೆ ಆಶಾಭಾವನೆ ಹೊಂದಿದ್ದೇವೆ ಮತ್ತು ಅವರು ಶೀಘ್ರದಲ್ಲೇ ಭಾರತಕ್ಕೆ ಸುರಕ್ಷಿತವಾಗಿ ಮರಳಲಿ ಎಂದು ಬಯಸುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...