ಕೆನಡಾ | ದ್ವೇಷಪ್ರೇರಿತ ದಾಳಿ ಆರೋಪದಲ್ಲಿ ಭಾರತೀಯ ಮೂಲದ ವ್ಯಕ್ತಿ ಬಂಧನ; ಜಾಮೀನು

Date:

  • ಕೆನಡಾ ಮರ್ಕಮ್‌ ಮಸೀದಿಯಲ್ಲಿ ಘಟನೆ
  • ಬಂಧನದ ಬಳಿಕ ಆರೋಪಿಗೆ ಜಾಮೀನು

ಕಳೆದ ವಾರದ ಆರಂಭದಲ್ಲಿ ಕೆನಡಾ ಮರ್ಕಮ್‌ ಮಸೀದಿಯಲ್ಲಿ ಧಾರ್ಮಿಕ ನಿಂದನೆ ಹಾಗೂ ದ್ವೇಷಪ್ರೇರಿತ ದಾಳಿ ನಡೆಸಿದ ಆರೋಪದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.

ಪವಿತ್ರ ರಂಜಾನ್ ಮಾಸದ ಆಚರಣೆ ವೇಳೆ ಮುಸ್ಲಿಮರು ಮಸೀದಿಯಲ್ಲಿ ಜಮಾಯಿಸಿದ್ದಾಗ ಈ ಘಟನೆ ನಡೆದಿದೆ. ಹಲವು ಅಧಿಕಾರಿಗಳು ಘಟನೆಯನ್ನು ಖಂಡಿಸಿದ್ದಾರೆ. ಇದು ಇಸ್ಲಾಮೋಫೋಬಿಯಾ ಹಾಗೂ ಉದ್ದೇಶಪೂರಿತ ದ್ವೇಷಪ್ರೇರಿತ ದಾಳಿ ಎಂದು ಅಧಿಕಾರಿಗಳು ಹೇಳಿದ್ದಾರೆ.

ಒಂಟಾರಿಯೊದ ಮಾರ್ಕಮ್‌ ನಗರದ ಇಸ್ಲಾಮಿಕ್ ಸೊಸೈಟಿ ಆಫ್ ಮಾರ್ಕಮ್‌ ಮಸೀದಿಯ ನಿಲುಗಡೆ ಸ್ಥಳದಲ್ಲಿ ಈ ಘಟನೆ ನಡೆದಿದೆ. ಭಾರತೀಯ ಮೂಲದ ಶರಣ್ ಕರುಣಾಕರನ್‌ (28) ಬಂಧಿತ ಆರೋಪಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 7ರಂದು ಈತನನ್ನು ಟೊರೊಂಟೊದಲ್ಲಿ ಬಂಧಿಸಲಾಗಿತ್ತು. ಪ್ರಸ್ತುತ ಈತ ಜಾಮೀನು ಪಡೆದಿದ್ದಾನೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 6.55ಕ್ಕೆ ಘಟನೆ ಕುರಿತು ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ”ಕೆನಡಾ ಮಾರ್ಕಮ್‌ ನಗರದ ಮಸೀದಿಯಲ್ಲಿ ನಡೆದ ದ್ವೇಷಪ್ರೇರಿತ ದಾಳಿ ಹಾಗೂ ಧರ್ಮ ನಿಂದನೆ ಘಟನೆಯ ನಂತರ ಆರೋಪಿ ವಿರುದ್ಧ ಹಲವಾರು ಅಪರಾಧ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಯಾರ್ಕ್ ಪ್ರಾದೇಶಿಕ ಪೊಲೀಸರು ಹೇಳಿದ್ದಾರೆ.

“ಶಂಕಿತ ವ್ಯಕ್ತಿಯು ಮಸೀದಿಯಲ್ಲಿದ್ದ ಭಕ್ತರೊಬ್ಬರ ಬಳಿ ನೇರವಾಗಿ ತೆರಳಿ ಅವರಿಗೆ ಬೆದರಿಕೆ ಹಾಕಿ, ಧಾರ್ಮಿಕ ನಿಂದನೆ ಮಾಡಿದ್ದಾನೆ ಎಂದು ಸಾಕ್ಷ್ಯಗಳು ಹೇಳಿವೆ” ಎಂದು ಪೊಲೀಸರು ಮಾಹಿತಿ ನೀಡಿದರು.

ಕೆನಡಾ ಮುಸ್ಲಿಮರ ರಾಷ್ಟ್ರೀಯ ಮಂಡಳಿ (ಎನ್‌ಸಿಸಿಎಂ) ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ಇದನ್ನು ‘ಅತ್ಯಂತ ವಿಷಾದನೀಯ’ ಎಂದು ಬಣ್ಣಿಸಿದೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಭಾರೀ ಮಳೆ, ಬಿರುಗಾಳಿಗೆ ಧರೆಗುರುಳಿದ ಶತಮಾನದ ಹಳೆಯ ಮರ; 7 ಮಂದಿ ಸಾವು

“ಶಂಕಿತ ಆರೋಪಿಯು ಮಸೀದಿ ಪ್ರವೇಶಿಸಿ ಪವಿತ್ರ ಗ್ರಂಥ ಕುರಾನ್‌ನ ಒಂದು ಪ್ರತಿ ಹರಿದು ಭಕ್ತರ ಮೇಲೆ ದಾಂಧಲೆ ನಡೆಸಿದ. ಇದು ಇಸ್ಲಾಮೋಫೋಬಿಯಾದ ಸಂಕೇತ” ಎಂದು ಎನ್‌ಸಿಸಿಎಂ ಟ್ವೀಟ್‌ನಲ್ಲಿ ಕಿಡಿಕಾರಿದೆ.

ಈ ರೀತಿಯ ದ್ವೇಷಪೂರಿತ ದಾಳಿ ಎದುರಿಸಿ ಹಿಂದೆ ಲಂಡನ್‌ ಮೂಲದ ಕುಟುಂಬವೊಂದು ಬಲಿಯಾಗಿದೆ ಎಂದು ಎನ್‌ಸಿಸಿಎಂ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...