ಟಿಕ್‌ಟಾಕ್‌ನಲ್ಲಿ ಜನಾಂಗೀಯ ನಿಂದನೆ: ಭಾರತೀಯ ಮೂಲದ ಸಿಂಗಾಪುರದ ಬ್ಲಾಗರ್‌ಗೆ ದಂಡ

Date:

ಸಿಂಗಾಪುರದ ವಿವಿಧ ಜನಾಂಗೀಯ ಗುಂಪುಗಳ ನಡುವೆ ಸಾಮರಸ್ಯ ಕದಡುವ ರೀತಿಯಲ್ಲಿ ಟಿಕ್‌ಟಾಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಸಿಂಗಾಪುರದಲ್ಲಿ ನೆಲೆಸಿರುವ ಭಾರತೀಯ ಮೂಲದ ಬ್ಲಾಗರ್‌ಗೆ ದಂಡ ವಿಧಿಸಲಾಗಿದೆ. ಸಿಂಗಾಪುರ ನ್ಯಾಯಾಲಯವು ಭಾರತೀಯ ಮೂಲದ ಬ್ಲಾಗರ್ ಮನ್ಮೀತ್ ಸಿಂಗ್‌ ಎಂಬಾತನಿಗೆ SGD 6,000 (ಸುಮಾರು 4 ಲಕ್ಷ ರೂ.) ದಂಡ ವಿಧಿಸಿದೆ.

2024ರ ಆಗಸ್ಟ್‌ 12ರಂದು ಪೋಸ್ಟ್‌ ಮಾಡಿದ್ದ ಮನ್ಮೀತ್ ಸಿಂಗ್, ತಮ್ಮ ಪೋಸ್ಟ್‌ನಲ್ಲಿ, ‘ಮುಂಬರುವ ಸಿಂಗಾಪುರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಭಾರತೀಯ ಮೂಲದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಸಿಂಗಾಪುರ ಪ್ರಧಾನಿ ವಾಂಗ್ ಹೇಳಿದ್ದಾರೆ’ ಎಂಬ ವಿಡಿಯೋವನ್ನು ಹಂಚಿಕೊಂಡಿದ್ದರು. ಜೊತೆಗೆ, ಸಿಂಗಾಪುರದ ಡಿಜಿಟಲ್ ಅಭಿವೃದ್ಧಿ ಮತ್ತು ಮಾಹಿತಿ ಸಚಿವೆ ಜೋಸೆಫೀನ್ ಟಿಯೊ ಅವರು ಸಿಂಗಾಪುರದಲ್ಲಿ ಒಟ್ಟು ಜನಸಂಖ್ಯೆಯ 15%ಗೂ (60 ಲಕ್ಷ) ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂ ಸಮುದಾಯವಾದ ‘ಮಲಯನ್‌’ ಜನಾಂಗದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಸಿಂಗ್ ಆರೋಪಿಸಿದ್ದರು.

ಸಿಂಗಾಪುರದಲ್ಲಿ ಕಳೆದ 59 ವರ್ಷಗಳಲ್ಲಾದ ಅಭಿವೃದ್ಧಿಯ ಕುರಿತು ಚೀನೀ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದ ಸಚಿವೆ ಟಿಯೋ (ಚೀನಾ ಮೂಲದವರು) ಅವರು ಮಲಯಾಳಂನ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಸಿಂಗ್ ತಮ್ಮ ಪೋಸ್ಟ್‌ನಲ್ಲಿ ದೂರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋವನ್ನು ಗಮನಿಸಿದ್ದ ಸಚಿವೆ ಟಿಯೊ ಅವರು ತನ್ನ ಪತ್ರಿಕಾ ಕಾರ್ಯದರ್ಶಿಗೆ ಈ ಬಗ್ಗೆ ಪರಿಶೀಲಿಸಲು ಸೂಚಿಸಿದ್ದರು. ಬಳಿಕ, ಈ ವಿಡಿಯೋವನ್ನು ಪತ್ರಿಕಾ ಕಾರ್ಯದರ್ಶಿ ಡೌನ್‌ಲೋಡ್‌ ಮಾಡಿಕೊಂಡು ಪೊಲೀಸರಿಗೆ ದೂರು ನೀಡಿದ್ದರು. ನಂತರವಷ್ಟೇ, ಸಿಂಗ್ ಅವರು ತಮ್ಮ ವಿಡಿಯೋವನ್ನು ಡಿಲೀಟ್‌ ಮಾಡಿದ್ದರು. ಅಲ್ಲದೆ, ಈ ಬಗ್ಗೆ ಅಪರಿಚಿತ ವ್ಯಕ್ತಿಯಿಂದ ಮಾಹಿತಿ ಮತ್ತು ವಿಡಿಯೋ ಪಡೆದುಕೊಂಡಿದ್ದಾಗಿ ಸಿಂಗ್ ಹೇಳಿಕೊಂಡಿದ್ದರು.

ಬಳಿಕ, ಮತ್ತೊಂದು ವಿಡಿಯೋ ಹಂಚಿಕೊಂಡಿದ್ದ ಸಿಂಗ್, ಸಚಿವೆ ಟಿಯೊ ಅವರ ಬಳಿ ಕ್ಷಮೆಯಾಚಿಸಿದ್ದರು. ತಾನು ಹಿಂದಿನ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದ ಆರೋಪ ಮತ್ತು ಮಾಹಿತಿ ಬಹುಶಃ ಸುಳ್ಳಾಗಿರಬಹುದು ಎಂದು ಹೇಳಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು 2025ರ ಫೆಬ್ರವರಿ 4ರಂದು ಸಿಂಗ್‌ ಅವರನ್ನು ಬಂಧಿಸಿದ್ದರು. ಮರುದಿನವೇ ಜಾಮೀನು ಪಡೆದು ಸಿಂಗ್ ಜೈಲಿನಿಂದ ಬಿಡುಗಡೆಯಾಗಿದ್ದರು.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುವ ವೇಳೆ ಸಿಂಗ್‌ ಪರವಾಗಿ ವಾದ ಮಂಡಿಸಿದ್ದ ವಕೀಲರು, “ಸಿಂಗ್ ಅವರು ತಮ್ಮ ತಪ್ಪಿನಿಂದ ನೊಂದಿದ್ದಾರೆ. ತಪ್ಪಿತಸ್ಥ ಭಾವನೆಯಿಂದ ಬಳಲುತ್ತಿದ್ದಾರೆ. ಅವರು ಲಾಭ ಅಥವಾ ಪ್ರಭಾವ ಬೆಳಸಿಕೊಳ್ಳುವ ಉದ್ದೇಶದಿಂದ ಸಾಮಾಜಿಕ ಜಾಲತಾಣವನ್ನು ಬಳಸುತ್ತಿಲ್ಲ. ಅವರು ಜಾಗೃತಿ ಮೂಡಿಸುವ ಪೋಸ್ಟ್‌ಗಳನ್ನು ಹೆಚ್ಚಾಗಿ ಹಂಚಿಕೊಳ್ಳುತ್ತಾರೆ. ಅಂತೆಯೇ, ಈ ವಿಡಿಯೋವನ್ನು ಹಂಚಿಕೊಂಡಿದ್ದರು. ಆದರೆ, ಅದು ನಕಲಿ ಎಂಬುದು ಗೊತ್ತಾದ ಬೆನ್ನಲ್ಲೇ, ಅದನ್ನು ಡಿಲೀಟ್‌ ಮಾಡಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ವಾದವನ್ನು ಆಲಿಸಿದ ನ್ಯಾಯಾಲಯವು ಸಿಂಗ್ ಅವರಿಗೆ ಸುಮಾರು 4 ಲಕ್ಷ ರೂ. ದಂಡವನ್ನು ವಿಧಿಸಿದೆ. ಆದಾಗ್ಯೂ, ಜನಾಂಗೀಯ ನಿಂದನೆಯಂತಹ ಪ್ರಕರಣಗಳಿಗೆ ಸಿಂಗಾಪುರದಲ್ಲಿ 3 ವರ್ಷ ಜೈಲು ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...