ಅಮೆರಿಕ ರಹಸ್ಯ ದಾಖಲೆಗಳ ದುರ್ಬಳಕೆ: ಎಫ್‌ಬಿಐನಿಂದ ಭಾರತೀಯ ಕಾರ್ಯತಂತ್ರ ತಜ್ಞನ ಬಂಧನ

Date:

ಭಾರತೀಯ ಮೂಲದ ಪ್ರಮುಖ ಅಮೆರಿಕನ್ ಕಾರ್ಯತಂತ್ರ ತಜ್ಞ ಮತ್ತು ದಕ್ಷಿಣ ಏಷ್ಯಾ ನೀತಿ ಸಲಹೆಗಾರ ಆಶ್ಲೆ ಟೆಲ್ಲಿಸ್ (64) ಅವರನ್ನು ಅಮೆರಿಕದ ಎಫ್‌ಬಿಐ ರಹಸ್ಯ ದಾಖಲೆಗಳನ್ನು ದುರ್ಬಳಕೆ ಮತ್ತು ಚೀನಾ ಸರ್ಕಾರಿ ಅಧಿಕಾರಿಗಳೊಂದಿಗೆ ಗುಪ್ತ ಸಭೆಗಳನ್ನು ನಡೆಸಿದ ಆರೋಪದ ಮೇಲೆ ಬಂಧಿಸಿದೆ. ವರ್ಜಿನಿಯಾದ ವಿಯೆನ್ನಾದಲ್ಲಿರುವ ಅವರ ಮನೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪುಟಗಳ ಪ್ರಮುಖ ರಹಸ್ಯಗಳು ಮತ್ತು ರಹಸ್ಯ ದಾಖಲೆಗಳನ್ನು ಪತ್ತೆ ಮಾಡಲಾಗಿದೆ ಎಂದು ನ್ಯಾಯಾಂಗ ವರದಿಗಳು ಬಹಿರಂಗಪಡಿಸಿವೆ.

ಆಶ್ಲೆ ಟೆಲ್ಲಿಸ್ ಅವರ ಮೇಲೆ ಅಮೆರಿಕದ ರಾಷ್ಟ್ರರಕ್ಷಣಾ ರಹಸ್ಯ ದಾಖಲೆಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದಾನೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ. ಅಮೆರಿಕದ ನ್ಯಾಯಾಂಗ ಇಲಾಖೆಯ ಮಾಹಿತಿ ಪ್ರಕಾರ, ಟೆಲ್ಲಿಸ್ ಅವರ ವರ್ಜೀನಿಯಾ ರಾಜ್ಯದ ವಿಯೆನ್ನಾ ನಿವಾಸದಲ್ಲಿ ಶೋಧ ನಡೆಸಿದಾಗ, ಸಾವಿರಕ್ಕೂ ಹೆಚ್ಚು ಪುಟಗಳ ಪ್ರಮುಖ ರಹಸ್ಯಗಳು ಮತ್ತು ರಹಸ್ಯ ದಾಖಲೆಗಳು ಪತ್ತೆಯಾಗಿವೆ. ಇವುಗಳಲ್ಲಿ ಕೆಲವು ದಾಖಲೆಗಳು ಲಾಕ್ ಕ್ಯಾಬಿನೆಟ್‌ಗಳು, ಬಾಸ್ಮೆಂಟ್ ಕಚೇರಿ, ಹಾಗೂ ಕಸದ ಚೀಲಗಳಲ್ಲಿ ಇರಿಸಲ್ಪಟ್ಟಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖಾ ವರದಿ ಪ್ರಕಾರ, ಟೆಲ್ಲಿಸ್ ಅವರು 2025ರ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಅಮೆರಿಕದ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆಗಳ ಕಟ್ಟಡಗಳಿಂದ ರಹಸ್ಯ ದಾಖಲೆಗಳನ್ನು ಮುದ್ರಿಸಿ ತೆಗೆದುಕೊಂಡಿದ್ದರು. ಸಿಸಿಟಿವಿ ದೃಶ್ಯದಲ್ಲಿ ಅವರು ಲೆದರ್ ಬ್ರಿಫ್‌ಕೇಸ್‌ನೊಂದಿಗೆ ಕಟ್ಟಡದಿಂದ ಹೊರಬರುವ ದೃಶ್ಯ ದಾಖಲಾಗಿರುವುದಾಗಿ ಎಫ್‌ಬಿಐ ಹೇಳಿದೆ. ಅಕ್ಟೋಬರ್ 11ರಂದು ಎಫ್‌ಬಿಐ ತಂಡವು ಟೆಲ್ಲಿಸ್ ಅವರ ಮನೆಯಲ್ಲಿ ಶೋಧ ನಡೆಸಿದಾಗ ಅವರು ಸಹಕಾರ ನೀಡಿದ್ದು, ಲ್ಯಾಪ್‌ಟಾಪ್ ತೆರೆಯಲು ತಮ್ಮ ಬೆರಳಚ್ಚು ನೀಡಿ, ಕ್ಯಾಬಿನೆಟ್‌ಗಳ ಕೀಲಿಗಳನ್ನು ಒದಗಿಸಿದ್ದಾರೆಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಈ ಪ್ರಕರಣದಲ್ಲಿ ಚೀನಾ ಸಂಪರ್ಕವೂ ಚರ್ಚೆಗೆ ಕಾರಣವಾಗಿದೆ. ಎಫ್‌ಬಿಐ ಪ್ರಕಾರ, ಟೆಲ್ಲಿಸ್ ಕಳೆದ ಕೆಲವು ವರ್ಷಗಳಲ್ಲಿ ಚೀನಾ ಸರ್ಕಾರದ ಅಧಿಕಾರಿಗಳೊಂದಿಗೆ ಹಲವಾರು ಬಾರಿ ಭೇಟಿಯಾಗಿದ್ದಾರೆ. 2025ರ ಸೆಪ್ಟೆಂಬರ್ 15ರಂದು ವರ್ಜೀನಿಯಾದ ಫೇರ್‌ಫ್ಯಾಕ್ಸ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ ಅವರು ಚೀನಾದ ಅಧಿಕಾರಿಯೊಬ್ಬರೊಂದಿಗೆ ಭೇಟಿ ನಡೆಸಿ ದಾಖಲೆ ನೀಡಿದ್ದಾರೆ ಎನ್ನಲಾಗಿದೆ. ಇದೇ ರೀತಿ 2023ರ ಏಪ್ರಿಲ್‌ನಲ್ಲಿ ನಡೆದ ಮತ್ತೊಂದು ಸಭೆಯಲ್ಲಿ ಇರಾನ್–ಚೀನಾ ಸಂಬಂಧಗಳು ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ ನಡೆದಿತ್ತು ಎಂಬ ಮಾಹಿತಿ ಹೊರಬಂದಿದೆ.

ಅಮೆರಿಕದ ಈಸ್ಟರ್ನ್ ಡಿಸ್ಟ್ರಿಕ್ಟ್ ಆಫ್ ವರ್ಜೀನಿಯಾದ ಯುಎಸ್ ಅಟಾರ್ನಿ ಲಿಂಡ್ಸೆ ಹ್ಯಾಲಿಗನ್ ಅವರು ನೀಡಿದ ಹೇಳಿಕೆಯಲ್ಲಿ, ”ಈ ಪ್ರಕರಣ ರಾಷ್ಟ್ರದ ಸುರಕ್ಷತೆಯ ಮೇಲೆ ಗಂಭೀರ ಧಕ್ಕೆಯನ್ನುಂಟುಮಾಡುವಂತಹದ್ದು. ನಾವು ದೇಶದ ಜನರನ್ನು ಎಲ್ಲ ವಿಧದ ಆತಂಕಗಳಿಂದ ರಕ್ಷಿಸಲು ಬದ್ಧರಾಗಿದ್ದೇವೆ. ಆರೋಪಗಳು ಸಾಬೀತಾದರೆ ಟೆಲ್ಲಿಸ್ ಅವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 2.5 ಲಕ್ಷ ಡಾಲರ್‌ಗಳ (ಸುಮಾರು ₹2.1 ಕೋಟಿ) ದಂಡ ವಿಧಿಸುವ ಸಾಧ್ಯತೆಯಿದೆ” ಎಂದಿದ್ದಾರೆ.

ಆಶ್ಲೆ ಟೆಲ್ಲಿಸ್ ಮುಂಬೈ ಮೂಲದವರು. ಅವರು ಮುಂಬೈನ ಸೇಂಟ್ ಗ್ಸೇವಿಯರ್ಸ್ ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿ, ನಂತರ ಶಿಕಾಗೋ ವಿಶ್ವವಿದ್ಯಾಲಯದಿಂದ ರಾಜಕೀಯಶಾಸ್ತ್ರದಲ್ಲಿ ಎಂಎ ಮತ್ತು ಪಿಎಚ್‌ಡಿ ಪಡೆದಿದ್ದಾರೆ. 2001ರಿಂದ ಅಮೆರಿಕ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅವರು, ಹಲವು ಆಡಳಿತಗಳಿಗೆ ಭಾರತ–ದಕ್ಷಿಣ ಏಷ್ಯಾ ನೀತಿಗಳ ಕುರಿತ ಸಲಹೆಗಾರರಾಗಿದ್ದರು. ಪ್ರಸ್ತುತ ಅವರು ವಾಷಿಂಗ್ಟನ್‌ನ ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಶನಲ್ ಪೀಸ್ ಸಂಸ್ಥೆಯ ಹಿರಿಯ ಸಂಶೋಧಕರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...