ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ

Date:

ಅಮೆರಿಕಾದ ಕ್ಲೀವ್‌ಲ್ಯಾಂಡ್‌ನಲ್ಲಿ ಮಾರ್ಚ್‌ 7 ರಂದು ಕಾಣೆಯಾಗಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಹುಡುಕಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ರಾಯಭಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್‌ನ ನಾಚಾರಂ ಮೂಲದ ಮೊಹಮ್ಮದ್ ಅಬ್ದುಲ್ ಅರ್ಫಾತ್ ಅವರು ಕ್ಲೀವ್‌ಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ‘ಐಟಿ’ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಭಾರತದಿಂದ 2023ರ ಮೇನಲ್ಲಿ ಅಮೆರಿಕಾಗೆ ತೆರಳಿದ್ದರು.

“ಮಾರ್ಚ್ 7 ರಂದು ಅರ್ಫಾತ್ ತನ್ನೊಂದಿಗೆ ಕೊನೆಯದಾಗಿ ಮಾತನಾಡಿದ. ಆ ಬಳಿಕ, ಆತ ನಮ್ಮ ಕುಟುಂಬದ ಸಂಪರ್ಕಕ್ಕೆ ಸಿಕ್ಕಿಲ್ಲ. ಆತನ ಮೊಬೈಲ್ ಸ್ವಿಚ್ ಆಫ್‌ ಆಗಿದೆ” ಎಂದು ಆತನ ತಂದೆ ಮೊಹಮ್ಮದ್ ಸಲೀಂ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಫಾತ್ ಅವರ ಕುಟುಂಬ ಮತ್ತು ಅಮೆರಿಕಾದಲ್ಲಿರುವ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಭಾರತೀಯ ರಾಯಭಾರಿ ಕಚೆರಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದೆ.

ಮಾರ್ಚ್ 19 ರಂದು, ಅರ್ಫಾತ್ ಅವರ ಕುಟುಂಬಕ್ಕೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತು. “ಅರ್ಫಾತ್‌ನನ್ನು ಡ್ರಗ್ಸ್ ಮಾರಾಟ ಮಾಡುವ ಗ್ಯಾಂಗ್ ಅಪಹರಿಸಿದೆ. ಆತನನ್ನು ಬಿಡುಗಡೆ ಮಾಡಲು 1,200 ಅಮೆರಿಕನ್ ಡಾಲರ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಹಣ ಕೊಡದಿದ್ದರೆ, ಆತನ ಕಿಡ್ನಿಗಳನ್ನು ಮಾರಾಟ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ” ಎಂದು ಅರ್ಘಾತ್‌ನ ತಂದೆ ಸಲೀಂ ತಿಳಿಸಿದ್ದಾರೆ.

ತಮ್ಮ ಮಗನನ್ನು ಸುರಕ್ಷಿತವಾಗಿ ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅರ್ಫಾತ್ ಪೋಷಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಸಲೀಂ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೂ ಪತ್ರ ಬರೆದಿದ್ದಾರೆ.

ಈ ಘಟನೆಯು ಅಮೆರಿಕಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿರುವ ಪ್ರಕರಣಗಳಲ್ಲಿ ಒಂದಾಗಿದೆ. ಅಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಸುರಕ್ಷತೆ ಮತ್ತು ಭದ್ರತೆಯಲ್ಲಿ ತೊಡಕು ಎದ್ದು ಕಾಣುತ್ತಿದೆ.

ಈ ವರ್ಷದ ಆರಂಭದಿಂದ, ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವಿನ ಹಲವಾರು ಪ್ರಕರಣಗಳು ವರದಿಯಾಗಿದ್ದವು. ಬೋಸ್ಟನ್‌ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿ ಅಭಿಜಿತ್ ಪರುಚೂರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ರಾಯಭಾರಿ ಕಚೇರಿ ತಿಳಿಸಿತ್ತು.

ಪರ್ಡ್ಯೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಭಾರತೀಯ ಮೂಲದ ಸಮೀರ್ ಕಾಮತ್ (23) ಫೆಬ್ರವರಿಯಲ್ಲಿ ಅಮೆರಿಕಾದ ಇಂಡಿಯಾನಾದಲ್ಲಿ ಶವವಾಗಿ ಪತ್ತೆಯಾಗಿದ್ದರು. ಜನವರಿಯಲ್ಲಿ, ಇಲಿನಾಯ್ಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿ, 18 ವರ್ಷದ ಅಕುಲ್ ಧವನ್ ಎಂಬಾತ ಕ್ಯಾಂಪಸ್ ಕಟ್ಟಡದ ಹೊರಗೆ ಸಾವನ್ನಪ್ಪಿದ್ದರು. ಆತ ಹೈಪೋಥರ್ಮಿಯಾದಿಂದ ಸಾವನ್ನಪ್ಪಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಜನವರಿಯಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ಜಾರ್ಜಿಯಾದಲ್ಲಿ ಮಾದಕ ವ್ಯಸನಿಗಳು 25 ವರ್ಷದ ಭಾರತೀಯ ವಿದ್ಯಾರ್ಥಿ ವಿವೇಕ್ ಸೈನಿಯನ್ನು ಹೊಡೆದು ಕೊಂದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...